Homeಕರ್ನಾಟಕಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಳೆದ ವರ್ಷ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 38,717 ಕೋಟಿ ರೂಪಾಯಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ (ಆ.16) ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಸಿಎಂ ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ, ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ, 2019-20ರ ಅವಧಿಯಲ್ಲಿ ನಿಗದಿತ ಶೇಕಡಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...