Homeಕರ್ನಾಟಕಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಳೆದ ವರ್ಷ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 38,717 ಕೋಟಿ ರೂಪಾಯಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ (ಆ.16) ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಸಿಎಂ ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ, ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ, 2019-20ರ ಅವಧಿಯಲ್ಲಿ ನಿಗದಿತ ಶೇಕಡಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...