Homeಕರ್ನಾಟಕಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಳೆದ ವರ್ಷ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 38,717 ಕೋಟಿ ರೂಪಾಯಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ (ಆ.16) ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಸಿಎಂ ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ, ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ, 2019-20ರ ಅವಧಿಯಲ್ಲಿ ನಿಗದಿತ ಶೇಕಡಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...