Homeಕರ್ನಾಟಕಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ/ಟಿಎಸ್‌ಪಿ| ರೂ. 38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಳೆದ ವರ್ಷ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 38,717 ಕೋಟಿ ರೂಪಾಯಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ (ಆ.16) ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಸಿಎಂ ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ, ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ, 2019-20ರ ಅವಧಿಯಲ್ಲಿ ನಿಗದಿತ ಶೇಕಡಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...