Homeರಾಷ್ಟ್ರೀಯ‘ಬಿಹಾರದ ಲಾಠಿವೀರ’: ಹೆಲ್ಮೆಟ್‌ ಧರಿಸದ ಕಾರಣಕ್ಕೆ ಬೈಕ್‌ ಸವಾರರಿಗೆ ಥಳಿಸಿದ ಜಿಲ್ಲಾಧಿಕಾರಿ

‘ಬಿಹಾರದ ಲಾಠಿವೀರ’: ಹೆಲ್ಮೆಟ್‌ ಧರಿಸದ ಕಾರಣಕ್ಕೆ ಬೈಕ್‌ ಸವಾರರಿಗೆ ಥಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ಬಿಹಾರದ ಸರನ್‌ ಜಿಲ್ಲೆಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಯೋಗೇಂದ್ರ ಕುಮಾರ್‌ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹೆಲ್ಮೆಟ್‌ ಧರಿಸಿಲ್ಲ ಎಂಬ ಕಾರಣಕ್ಕೆ ಲಾಠಿ ಪ್ರಹಾರ ನಡೆಸಿದ್ದು, ಸಾಮಾಜಿಕ ಮಾಧ್ಯಮಗಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಯನ್ನು ಜನರು, “ಬಿಹಾರದ ಲಾಠಿವೀರ ಎಸ್.ಡಿ.ಎಂ” ಎಂದು ಕರೆದಿದ್ದಾರೆ.

ಎಸ್‌ಡಿಎಂ ಮಾತ್ರವಲ್ಲದೆ, ಅವರ ಜೊತೆಯಲ್ಲಿದ್ದ ಹಲವು ಪೊಲೀಸರು ಕೂಡಾ ಬೈಕ್ ಸವಾರನನ್ನು ತಡೆದು ದೊಣ್ಣೆಯಿಂದ ಥಳಿಸಲು ಆರಂಭಿಸಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳು ವರದಿ ಮಾಡಿರುವಂತೆ, ಜೂನ್ 20ರಂದು ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅಗ್ನಿಪಥ್‌ ವಿರುದ್ಧ ಪ್ರತಿಭಟನೆ ನಡೆಸಲು ಬಿಹಾರ ಬಂದ್‌ಗಾಗಿ ಹಲವು ಸಂಘಟನೆಗಳು ಬೀದಿಗಿಳಿದ್ದವು. ಈ ಬಂದ್‌ಗೆ ಸಾರ್ವಜನಿಕರ ಬೆಂಬಲವೂ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ನಗರದಲ್ಲಿ ಸೆಕ್ಷನ್ 144 ವಿಧಿಸಿದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ವೈರಲ್ ವೀಡಿಯೊದಲ್ಲಿ, ಕೆಲವು ಪೊಲೀಸರೊಂದಿಗೆ ವ್ಯಕ್ತಿಯೊಬ್ಬರು ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ ಕೈಯಲ್ಲಿ ಕೋಲು ಹಿಡಿದಿರುವುದನ್ನು ಕಾಣುತ್ತದೆ. ಅವರು ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರರನ್ನು ತಡೆದು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಸರನ್‌ ಜಿಲ್ಲೆಯ ಛಾಪ್ರಾದ ತಾರೈಯಾ ಪ್ರದೇಶದಲ್ಲಿ ಮರ್ಹೌರಾದ ಎಸ್‌ಡಿಎಂ ಯೋಗೇಂದ್ರ ಕುಮಾರ್ ಕೂಡಾ ಬೀದಿಗೆ ಇಳಿದಿದ್ದರು.

ಕೆಲವು ಪೊಲೀಸರು ಬೈಕ್ ಸವಾರನನ್ನು ನಿಲ್ಲಿಸಿ ನಂತರ ಏನನ್ನೋ ಕೇಳುತ್ತಿರುತ್ತಾರೆ. ಆಗ ಎಸ್‌ಡಿಎಂ ಯೋಗೇಂದ್ರ ಕುಮಾರ್‌ ಅವರು ಲಾಠಿ ಹಿಡಿದುಕೊಂಡು ಎಲ್ಲಿಗೆ ಹೋಗುತ್ತಿದ್ದೀರಿ, ಹೆಲ್ಮೆಟ್‌ಗಳು ಎಲ್ಲಿವೆ ಎಂದು ಕೇಳುತ್ತಾ ಲಾಠಿಯಲ್ಲಿ ಇಬ್ಬರಿಗೂ ಥಳಿಸುತ್ತಾರೆ. ಘಟನೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಎಸ್‌ಡಿಎಂ ಯೋಗೇಂದ್ರ ಕುಮಾರ್ ಯಾವ ಪ್ರತಿಕ್ರಿಯೆಯೂ ನೀಡಿಲ್ಲ ಎಂದು ವರದಿ ಮಾಡಿವೆ.

ಇದನ್ನೂ ಓದಿ: ನಾವು ಯಾರಂತ ಜನರೇ ನಮಗೆ ಪರಿಚಯಿಸುತ್ತಾರೆ: ಟ್ರಾನ್ಸ್‌ಜೆಂಡರ್‌ ‘ಶಬ್ಬು’ ಜೀವನಗಾಥೆ

ಇತ್ತೀಚಿನ ದಿನಗಳಲ್ಲಿ ಬಿಹಾರ ರಾಜ್ಯದ ಅಧಿಕಾರಿಗಳಿಂದ ಸಾಮಾನ್ಯ ನಾಗರಿಕರ ಮೇಲೆ ನಡೆಸುತ್ತಿರುವ ಕಿರುಕುಳದ ಪ್ರಕರಣಗಳು ಮುನ್ನೆಲೆಗೆ ಬರುತ್ತಿವೆ.

ಕೆಲವು ದಿನಗಳ ಮುಂಚೆ ರಾಜ್ಯದ ಗೋಪಾಲ್‌ಗಂಜ್‌ನಲ್ಲಿ ವಾಹನ ತಪಾಸಣೆ ವೇಳೆ ಡಿಎಸ್‌ಪಿ ಹೆಡ್‌ಕ್ವಾರ್ಟರ್‌ ಜ್ಯೋತಿ ಕುಮಾರಿ ಅವರು ಬೈಕ್‌ ಸವಾರನಿಗೆ ಕಪಾಳಮೋಕ್ಷ ಮಾಡಿ, ಲಾಠಿ ಪ್ರಹಾರ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...