Homeಮುಖಪುಟಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ದಾರ್‌ ಸೇರಿ ನಾಲ್ವರ ವಿರುದ್ಧ ಅವರ ಕಾರನ್ನು ಓವರ್‌ಟೇಕ್ ಮಾಡಿದ ಇಬ್ಬರು ಯುವಕರನ್ನು ಥಳಿಸಲು ಆದೇಶಿಸಿದ ಆರೋಪದ    ಹಿನ್ನೆಲೆ ಅಮಾನತು ಮಾಡಲಾಗಿದ್ದು, ಇದೀಗ ಆರೋಪಿಗಳ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಲಾಗಿದೆ.

ಸೋಮವಾರ ಸಂಜೆ 5 ಗಂಟೆಗೆ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ವೈರಲ್‌ ಬಳಿಕ ಪ್ರಕರಣವನ್ನು ದಾಖಲಿಸಲಾಗಿದೆ. ಯುವಕರು ಸಂಚರಿಸುತ್ತಿದ್ದ ಕಾರು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರ ಕಾರನ್ನು ಹಿಂದಿಕ್ಕಿದ್ದಕ್ಕೆ ಯುವಕರನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿದೆ. ವಿಡಿಯೋ ವೈರಲ್‌ ಬಳಿಕ ಪೊಲೀಸರು ತಹಸೀಲ್ದಾರ್, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಎಸ್‌ಡಿಎಂ ಅಮಿತ್ ಸಿಂಗ್, ತಹಸೀಲ್ದಾರ್ ವಿನೋದ್ ಕುಮಾರ್, ಎಸ್‌ಡಿಎಂನ ಚಾಲಕ ನರೇಂದ್ರ ದಾಸ್ ಪಣಿಕಾ ಮತ್ತು ತಹಸೀಲ್ದಾರ್ ಸಹಾಯಕ ಸಂದೀಪ್ ಸಿಂಗ್ ಅವರ ಮೇಲೆ ಎಫ್‌ಐಆರ್‌ ದಾಖಲಿಸಿಲಾಗಿದೆ. ಸೋಮವಾರ ಸಂಜೆ ಹೆಡ್ ಕಾನ್‌ಸ್ಟೆಬಲ್ ಶಿಶಿರ್ ತ್ರಿಪಾಠಿ ಅವರು ಮೂರು ವಾಹನಗಳ ಮಾಲೀಕರ ನಡುವೆ ಹೊಡೆದಾಟದ ಬಗ್ಗೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಥಳಿಸಲಾಗಿದ್ದು, ಅವರು ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಅವರನ್ನು ಅಲ್ಲಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಬಗ್ಗೆ ಗಾಯಾಳುಗಳ ಹೇಳಿಕೆಯನ್ನು ದಾಖಲಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪೋಸ್ಟ್ ಇನ್‌ಚಾರ್ಜ್ ಅಮರ್ ಸಿಂಗ್ ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 294 , 323 , 341 ಮತ್ತು 34 ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯಲ್ಲಿ ಪ್ರಕಾಶ್ ದಹಿಯಾ ಅವರಿಗೆ ತಲೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿದೆ. ವಾಹನದಲ್ಲಿ ‘ಎಸ್‌ಡಿಎಂ’ ಎಂದು ಬರೆದಿದ್ದ ಜನರು ಕೆಳಗಿಳಿದು ತನಗೆ ಮತ್ತು ಶಿವಂ ಯಾದವ್‌ಗೆ ಥಳಿಸಿದ್ದಾರೆ. ಕಾರಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದವರು ಎಸ್‌ಡಿಎಂ ಮತ್ತು ತಹಸೀಲ್ದಾರ್ ಎಂದು ನಂತರ ತನಗೆ ತಿಳಿಯಿತು ಎಂದು ದಹಿಯಾ ಆರೋಪಿಸಿದ್ದಾರೆ.

ಶಿವಂ ಕಾರನ್ನು ಓಡಿಸುತ್ತಿದ್ದರು ಮತ್ತು ಅವರು ಎಸ್‌ಡಿಎಂ ಕಾರನ್ನು ಹಿಂದಿಕ್ಕಿದ್ದರು. ನಂತರ ಎಸ್‌ಡಿಎಂ ಅವರ ವಾಹನವು ನಮ್ಮ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದೆ. ನರೇಂದ್ರದಾಸ್ ಪಣಿಕಾ ಮತ್ತು ಸಂದೀಪ್ ಸಿಂಗ್ ಅವರು ದೊಣ್ಣೆಗಳಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಾಂಧವಗಢದಲ್ಲಿ ಕರ್ತವ್ಯದಲ್ಲಿರುವ ಎಸ್‌ಡಿಎಂ ಅಮಿತ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, ತನ್ನ ಸಮ್ಮುಖದಲ್ಲಿ ಹಲ್ಲೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ಸಂತ್ರಸ್ತರಲ್ಲಿ ಒಬ್ಬರು ತಮ್ಮ ಕಾರನ್ನು ಅಜಾಗರೂಕತೆಯಿಂದ ಓಡಿಸುತ್ತಿದ್ದರು ಮತ್ತು ಅವರು ಸಂಚರಿಸುತ್ತಿದ್ದ ಸರಕಾರಿ ವಾಹನಕ್ಕೆ ಡಿಕ್ಕಿ ಹೊಡೆಯಲು ಮುಂದಾಗಿದ್ದರು ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುವುದರಿಂದ ತನ್ನ ಅಧಿಕಾರ ವ್ಯಾಪ್ತಿಯ ಪ್ರದೇಶಗಳಿಗೆ ತನ್ನ ವಾಹನದಲ್ಲಿ ತೆರಳುತ್ತಿದ್ದಾಗ ಕಾರು ಢಿಕ್ಕಿ ಹೊಡೆಯಲು ಮುಂದಾಗಿತ್ತು, ನಮ್ಮ ಕಾರಿನ ಚಾಲಕ ಇದನ್ನು ತಪ್ಪಿಸಿಕೊಂಡಿದ್ದಾನೆ. ಇಬ್ಬರ ಮೇಲಿನ ದಾಳಿಯನ್ನು ನೋಡಿದ ನಂತರ ತಾನು ತನ್ನ ವಾಹನದಿಂದ ಕೆಳಗಿಳಿದು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದೆ. ತನ್ನ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಜನರು ದಾಳಿಯಲ್ಲಿ ಭಾಗಿಯಾಗಿಲ್ಲ, ಹಲ್ಲೆ ನಡೆಸಿದವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್, ಇಬ್ಬರು ಯುವಕರನ್ನು ಥಳಿಸಿದ ಘಟನೆ ಬೆಳಕಿಗೆ ಬಂದ ನಂತರ ನಾನು ಬಾಂಧವ್‌ಗಢ ಎಸ್‌ಡಿಎಂನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದೇನೆ. ಇದು ದುರದೃಷ್ಟಕರ ಘಟನೆ, ರಾಜ್ಯದಲ್ಲಿ ಉತ್ತಮ ಆಡಳಿತದ ಸರ್ಕಾರವಿದೆ, ಸಾಮಾನ್ಯ ಜನರೊಂದಿಗೆ ಇಂತಹ ವರ್ತನೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...