Homeಮುಖಪುಟಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ದಾರ್‌ ಸೇರಿ ನಾಲ್ವರ ವಿರುದ್ಧ ಅವರ ಕಾರನ್ನು ಓವರ್‌ಟೇಕ್ ಮಾಡಿದ ಇಬ್ಬರು ಯುವಕರನ್ನು ಥಳಿಸಲು ಆದೇಶಿಸಿದ ಆರೋಪದ    ಹಿನ್ನೆಲೆ ಅಮಾನತು ಮಾಡಲಾಗಿದ್ದು, ಇದೀಗ ಆರೋಪಿಗಳ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಲಾಗಿದೆ.

ಸೋಮವಾರ ಸಂಜೆ 5 ಗಂಟೆಗೆ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ವೈರಲ್‌ ಬಳಿಕ ಪ್ರಕರಣವನ್ನು ದಾಖಲಿಸಲಾಗಿದೆ. ಯುವಕರು ಸಂಚರಿಸುತ್ತಿದ್ದ ಕಾರು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರ ಕಾರನ್ನು ಹಿಂದಿಕ್ಕಿದ್ದಕ್ಕೆ ಯುವಕರನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿದೆ. ವಿಡಿಯೋ ವೈರಲ್‌ ಬಳಿಕ ಪೊಲೀಸರು ತಹಸೀಲ್ದಾರ್, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಎಸ್‌ಡಿಎಂ ಅಮಿತ್ ಸಿಂಗ್, ತಹಸೀಲ್ದಾರ್ ವಿನೋದ್ ಕುಮಾರ್, ಎಸ್‌ಡಿಎಂನ ಚಾಲಕ ನರೇಂದ್ರ ದಾಸ್ ಪಣಿಕಾ ಮತ್ತು ತಹಸೀಲ್ದಾರ್ ಸಹಾಯಕ ಸಂದೀಪ್ ಸಿಂಗ್ ಅವರ ಮೇಲೆ ಎಫ್‌ಐಆರ್‌ ದಾಖಲಿಸಿಲಾಗಿದೆ. ಸೋಮವಾರ ಸಂಜೆ ಹೆಡ್ ಕಾನ್‌ಸ್ಟೆಬಲ್ ಶಿಶಿರ್ ತ್ರಿಪಾಠಿ ಅವರು ಮೂರು ವಾಹನಗಳ ಮಾಲೀಕರ ನಡುವೆ ಹೊಡೆದಾಟದ ಬಗ್ಗೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಥಳಿಸಲಾಗಿದ್ದು, ಅವರು ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಅವರನ್ನು ಅಲ್ಲಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಬಗ್ಗೆ ಗಾಯಾಳುಗಳ ಹೇಳಿಕೆಯನ್ನು ದಾಖಲಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪೋಸ್ಟ್ ಇನ್‌ಚಾರ್ಜ್ ಅಮರ್ ಸಿಂಗ್ ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 294 , 323 , 341 ಮತ್ತು 34 ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯಲ್ಲಿ ಪ್ರಕಾಶ್ ದಹಿಯಾ ಅವರಿಗೆ ತಲೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿದೆ. ವಾಹನದಲ್ಲಿ ‘ಎಸ್‌ಡಿಎಂ’ ಎಂದು ಬರೆದಿದ್ದ ಜನರು ಕೆಳಗಿಳಿದು ತನಗೆ ಮತ್ತು ಶಿವಂ ಯಾದವ್‌ಗೆ ಥಳಿಸಿದ್ದಾರೆ. ಕಾರಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದವರು ಎಸ್‌ಡಿಎಂ ಮತ್ತು ತಹಸೀಲ್ದಾರ್ ಎಂದು ನಂತರ ತನಗೆ ತಿಳಿಯಿತು ಎಂದು ದಹಿಯಾ ಆರೋಪಿಸಿದ್ದಾರೆ.

ಶಿವಂ ಕಾರನ್ನು ಓಡಿಸುತ್ತಿದ್ದರು ಮತ್ತು ಅವರು ಎಸ್‌ಡಿಎಂ ಕಾರನ್ನು ಹಿಂದಿಕ್ಕಿದ್ದರು. ನಂತರ ಎಸ್‌ಡಿಎಂ ಅವರ ವಾಹನವು ನಮ್ಮ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದೆ. ನರೇಂದ್ರದಾಸ್ ಪಣಿಕಾ ಮತ್ತು ಸಂದೀಪ್ ಸಿಂಗ್ ಅವರು ದೊಣ್ಣೆಗಳಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಾಂಧವಗಢದಲ್ಲಿ ಕರ್ತವ್ಯದಲ್ಲಿರುವ ಎಸ್‌ಡಿಎಂ ಅಮಿತ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, ತನ್ನ ಸಮ್ಮುಖದಲ್ಲಿ ಹಲ್ಲೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ಸಂತ್ರಸ್ತರಲ್ಲಿ ಒಬ್ಬರು ತಮ್ಮ ಕಾರನ್ನು ಅಜಾಗರೂಕತೆಯಿಂದ ಓಡಿಸುತ್ತಿದ್ದರು ಮತ್ತು ಅವರು ಸಂಚರಿಸುತ್ತಿದ್ದ ಸರಕಾರಿ ವಾಹನಕ್ಕೆ ಡಿಕ್ಕಿ ಹೊಡೆಯಲು ಮುಂದಾಗಿದ್ದರು ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುವುದರಿಂದ ತನ್ನ ಅಧಿಕಾರ ವ್ಯಾಪ್ತಿಯ ಪ್ರದೇಶಗಳಿಗೆ ತನ್ನ ವಾಹನದಲ್ಲಿ ತೆರಳುತ್ತಿದ್ದಾಗ ಕಾರು ಢಿಕ್ಕಿ ಹೊಡೆಯಲು ಮುಂದಾಗಿತ್ತು, ನಮ್ಮ ಕಾರಿನ ಚಾಲಕ ಇದನ್ನು ತಪ್ಪಿಸಿಕೊಂಡಿದ್ದಾನೆ. ಇಬ್ಬರ ಮೇಲಿನ ದಾಳಿಯನ್ನು ನೋಡಿದ ನಂತರ ತಾನು ತನ್ನ ವಾಹನದಿಂದ ಕೆಳಗಿಳಿದು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದೆ. ತನ್ನ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಜನರು ದಾಳಿಯಲ್ಲಿ ಭಾಗಿಯಾಗಿಲ್ಲ, ಹಲ್ಲೆ ನಡೆಸಿದವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್, ಇಬ್ಬರು ಯುವಕರನ್ನು ಥಳಿಸಿದ ಘಟನೆ ಬೆಳಕಿಗೆ ಬಂದ ನಂತರ ನಾನು ಬಾಂಧವ್‌ಗಢ ಎಸ್‌ಡಿಎಂನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದೇನೆ. ಇದು ದುರದೃಷ್ಟಕರ ಘಟನೆ, ರಾಜ್ಯದಲ್ಲಿ ಉತ್ತಮ ಆಡಳಿತದ ಸರ್ಕಾರವಿದೆ, ಸಾಮಾನ್ಯ ಜನರೊಂದಿಗೆ ಇಂತಹ ವರ್ತನೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...