Homeಮುಖಪುಟಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

ಕಾರು ಓವರ್‌ಟೇಕ್‌ ಮಾಡಿದ್ದಕ್ಕೆ ಯುವಕರಿಗೆ ಗಂಭೀರವಾಗಿ ಥಳಿತ: ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ಧಾರ್‌ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ತಹಶೀಲ್ದಾರ್‌ ಸೇರಿ ನಾಲ್ವರ ವಿರುದ್ಧ ಅವರ ಕಾರನ್ನು ಓವರ್‌ಟೇಕ್ ಮಾಡಿದ ಇಬ್ಬರು ಯುವಕರನ್ನು ಥಳಿಸಲು ಆದೇಶಿಸಿದ ಆರೋಪದ    ಹಿನ್ನೆಲೆ ಅಮಾನತು ಮಾಡಲಾಗಿದ್ದು, ಇದೀಗ ಆರೋಪಿಗಳ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಲಾಗಿದೆ.

ಸೋಮವಾರ ಸಂಜೆ 5 ಗಂಟೆಗೆ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ವೈರಲ್‌ ಬಳಿಕ ಪ್ರಕರಣವನ್ನು ದಾಖಲಿಸಲಾಗಿದೆ. ಯುವಕರು ಸಂಚರಿಸುತ್ತಿದ್ದ ಕಾರು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರ ಕಾರನ್ನು ಹಿಂದಿಕ್ಕಿದ್ದಕ್ಕೆ ಯುವಕರನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿದೆ. ವಿಡಿಯೋ ವೈರಲ್‌ ಬಳಿಕ ಪೊಲೀಸರು ತಹಸೀಲ್ದಾರ್, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಎಸ್‌ಡಿಎಂ ಅಮಿತ್ ಸಿಂಗ್, ತಹಸೀಲ್ದಾರ್ ವಿನೋದ್ ಕುಮಾರ್, ಎಸ್‌ಡಿಎಂನ ಚಾಲಕ ನರೇಂದ್ರ ದಾಸ್ ಪಣಿಕಾ ಮತ್ತು ತಹಸೀಲ್ದಾರ್ ಸಹಾಯಕ ಸಂದೀಪ್ ಸಿಂಗ್ ಅವರ ಮೇಲೆ ಎಫ್‌ಐಆರ್‌ ದಾಖಲಿಸಿಲಾಗಿದೆ. ಸೋಮವಾರ ಸಂಜೆ ಹೆಡ್ ಕಾನ್‌ಸ್ಟೆಬಲ್ ಶಿಶಿರ್ ತ್ರಿಪಾಠಿ ಅವರು ಮೂರು ವಾಹನಗಳ ಮಾಲೀಕರ ನಡುವೆ ಹೊಡೆದಾಟದ ಬಗ್ಗೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಥಳಿಸಲಾಗಿದ್ದು, ಅವರು ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಅವರನ್ನು ಅಲ್ಲಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಬಗ್ಗೆ ಗಾಯಾಳುಗಳ ಹೇಳಿಕೆಯನ್ನು ದಾಖಲಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪೋಸ್ಟ್ ಇನ್‌ಚಾರ್ಜ್ ಅಮರ್ ಸಿಂಗ್ ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 294 , 323 , 341 ಮತ್ತು 34 ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯಲ್ಲಿ ಪ್ರಕಾಶ್ ದಹಿಯಾ ಅವರಿಗೆ ತಲೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿದೆ. ವಾಹನದಲ್ಲಿ ‘ಎಸ್‌ಡಿಎಂ’ ಎಂದು ಬರೆದಿದ್ದ ಜನರು ಕೆಳಗಿಳಿದು ತನಗೆ ಮತ್ತು ಶಿವಂ ಯಾದವ್‌ಗೆ ಥಳಿಸಿದ್ದಾರೆ. ಕಾರಿನ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದವರು ಎಸ್‌ಡಿಎಂ ಮತ್ತು ತಹಸೀಲ್ದಾರ್ ಎಂದು ನಂತರ ತನಗೆ ತಿಳಿಯಿತು ಎಂದು ದಹಿಯಾ ಆರೋಪಿಸಿದ್ದಾರೆ.

ಶಿವಂ ಕಾರನ್ನು ಓಡಿಸುತ್ತಿದ್ದರು ಮತ್ತು ಅವರು ಎಸ್‌ಡಿಎಂ ಕಾರನ್ನು ಹಿಂದಿಕ್ಕಿದ್ದರು. ನಂತರ ಎಸ್‌ಡಿಎಂ ಅವರ ವಾಹನವು ನಮ್ಮ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದೆ. ನರೇಂದ್ರದಾಸ್ ಪಣಿಕಾ ಮತ್ತು ಸಂದೀಪ್ ಸಿಂಗ್ ಅವರು ದೊಣ್ಣೆಗಳಿಂದ ಹೊಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಾಂಧವಗಢದಲ್ಲಿ ಕರ್ತವ್ಯದಲ್ಲಿರುವ ಎಸ್‌ಡಿಎಂ ಅಮಿತ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, ತನ್ನ ಸಮ್ಮುಖದಲ್ಲಿ ಹಲ್ಲೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ಸಂತ್ರಸ್ತರಲ್ಲಿ ಒಬ್ಬರು ತಮ್ಮ ಕಾರನ್ನು ಅಜಾಗರೂಕತೆಯಿಂದ ಓಡಿಸುತ್ತಿದ್ದರು ಮತ್ತು ಅವರು ಸಂಚರಿಸುತ್ತಿದ್ದ ಸರಕಾರಿ ವಾಹನಕ್ಕೆ ಡಿಕ್ಕಿ ಹೊಡೆಯಲು ಮುಂದಾಗಿದ್ದರು ಎಂದು ಆರೋಪಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುವುದರಿಂದ ತನ್ನ ಅಧಿಕಾರ ವ್ಯಾಪ್ತಿಯ ಪ್ರದೇಶಗಳಿಗೆ ತನ್ನ ವಾಹನದಲ್ಲಿ ತೆರಳುತ್ತಿದ್ದಾಗ ಕಾರು ಢಿಕ್ಕಿ ಹೊಡೆಯಲು ಮುಂದಾಗಿತ್ತು, ನಮ್ಮ ಕಾರಿನ ಚಾಲಕ ಇದನ್ನು ತಪ್ಪಿಸಿಕೊಂಡಿದ್ದಾನೆ. ಇಬ್ಬರ ಮೇಲಿನ ದಾಳಿಯನ್ನು ನೋಡಿದ ನಂತರ ತಾನು ತನ್ನ ವಾಹನದಿಂದ ಕೆಳಗಿಳಿದು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದೆ. ತನ್ನ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಜನರು ದಾಳಿಯಲ್ಲಿ ಭಾಗಿಯಾಗಿಲ್ಲ, ಹಲ್ಲೆ ನಡೆಸಿದವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್, ಇಬ್ಬರು ಯುವಕರನ್ನು ಥಳಿಸಿದ ಘಟನೆ ಬೆಳಕಿಗೆ ಬಂದ ನಂತರ ನಾನು ಬಾಂಧವ್‌ಗಢ ಎಸ್‌ಡಿಎಂನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದೇನೆ. ಇದು ದುರದೃಷ್ಟಕರ ಘಟನೆ, ರಾಜ್ಯದಲ್ಲಿ ಉತ್ತಮ ಆಡಳಿತದ ಸರ್ಕಾರವಿದೆ, ಸಾಮಾನ್ಯ ಜನರೊಂದಿಗೆ ಇಂತಹ ವರ್ತನೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಕ್ರಿಶ್ಚಿಯನ್ನರ ಮೇಲೆ ಹಿಂದುತ್ವ ಗುಂಪಿನ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...