Homeಮುಖಪುಟಮುನ್ಸೂಚನೆಯಿಲ್ಲದೆ ’ಕಾಶ್ಮೀರ ಟೈಮ್ಸ್’‌‌ ಕಚೇರಿಗೆ ಸೀಲ್- ಎಡಿಟರ್ಸ್ ಗಿಲ್ಡ್‌ ಖಂಡನೆ

ಮುನ್ಸೂಚನೆಯಿಲ್ಲದೆ ’ಕಾಶ್ಮೀರ ಟೈಮ್ಸ್’‌‌ ಕಚೇರಿಗೆ ಸೀಲ್- ಎಡಿಟರ್ಸ್ ಗಿಲ್ಡ್‌ ಖಂಡನೆ

ಇದು ಕಾಶ್ಮೀರ ಟೈಮ್ಸ್‌ಗೆ ಮಾತ್ರವಲ್ಲ, ಸ್ವತಂತ್ರ ಮಾಧ್ಯಮಕ್ಕೆ ಹಾನಿಕಾರಕ ಎಂದು ಗಿಲ್ಡ್ ಟೀಕಿಸಿದೆ

- Advertisement -
- Advertisement -

ಜಮ್ಮು ಕಾಶ್ಮೀರ ಮೂಲದ ಪತ್ರಿಕೆ ’ಕಾಶ್ಮೀರ ಟೈಮ್ಸ್‌‌’ನ ಶ್ರೀನಗರ ಕಚೇರಿಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ಅಧಿಕಾರಿಗಳು ಸೀಲ್ ಮಾಡಿದ ಘಟನೆ ಕೆಲವು ದಿನಗಳ ನಂತರ ನಡೆದಿದೆ. ಇದನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಖಂಡಿಸಿದ್ದು, ಇದು ಕಾಶ್ಮೀರ ಟೈಮ್ಸ್‌ಗೆ ಮಾತ್ರವಲ್ಲ, ಸ್ವತಂತ್ರ ಮಾಧ್ಯಮಕ್ಕೆ ಹಾನಿಕಾರಕ ಎಂದು ಹೇಳಿದೆ.

ಕಾಶ್ಮೀರ ಟೈಮ್ಸ್‌ನ ಶ್ರೀನಗರ ಕಚೇರಿಗೆ ಹಠಾತ್ತಾಗಿ ಮೊಹರು ಹಾಕಿದ್ದು ಖಂಡನೀಯ. ಇದು ಮಾಧ್ಯಮಗಳಲ್ಲಿ ಗೊಂದಲ ಪರಿಣಾಮಗಳನ್ನು ಬೀರುತ್ತದೆ ಎಂದು ಎಡಿಟರ್ಸ್ ಗಿಲ್ಡ್‌ ಪತ್ರಿಕಾ ಹೇಳಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಜಮ್ಮ ಕಾಶ್ಮೀರದಲ್ಲಿ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳು ಈಗಾಗಲೆ ಬಳಲುತ್ತಿದ್ದು, ಸಂಪಾದಕರು ಮತ್ತು ವರದಿಗಾರರು ಕಷ್ಟಕರವಾದ ಪರಿಸ್ಥಿತಿಯ ನಡುವೆ ಕೆಲಸ ಮಾಡುತ್ತಿದ್ದಾರೆ ಎಂದು ಗಿಲ್ಟ್ ಹೇಳಿದೆ.

ಕಳೆದ ಒಂದು ದಶಕದಲ್ಲಿ ಪ್ರತ್ರಿಕೆಗಳು ಸ್ಥಿರವಾಗಿ ಜಾಹೀರಾತನ್ನು ಕಳೆದುಕೊಂಡಿದ್ದು, ಕೊರೊನಾ ಲಾಕ್‌ಡೌನ್ ನಂತರ ಜಮ್ಮು ಕಾಶ್ಮೀರದಲ್ಲಿ ಉಂಟಾದ ಸಂವಹನದ ಸ್ಥಗಿತಗೊಳಿಸುವಿಕೆಯಿಂದ ಪತ್ರಿಕೆಗಳ ಆದಾಯ ಸಂಪೂರ್ಣವಾಗಿ ನಿಂತಿದೆ ಎಂದಿದೆ.

ಸರ್ಕಾರವು ವಿಧಿಸಿರುವ ನಿಧಾನಗತಿಯ ಇಂಟರ್ನೆಟ್‌ನಿಂದಾಗಿ ಆನ್‌ಲೈನ್ ಆವೃತ್ತಿಗಳು ಕೂಡಾ ದುರ್ಬಲಗೊಂಡಿವೆ ಎಂದಿರುವ ಎಡಿಟರ್ಸ್ ಗಿಲ್ಡ್, 55 ವರ್ಷದ ಹಳೆಯ ಕಾಶ್ಮೀರ ಟೈಮ್ಸ್ ತನ್ನ ಶ್ರೀನಗರ ಆವೃತ್ತಿಯನ್ನು ಮಾರ್ಚ್‌ನಲ್ಲಿ ಸ್ಥಗಿತಗೊಳಿಸಿರುವುದನ್ನು ಉಲ್ಲೇಖಿಸಿದೆ.

ಯಾವುದೇ ಮುನ್ಸೂಚನೆಯಿಲ್ಲದೆ ಆಡಳಿತವು ಕಾಶ್ಮೀರ ಟೈಮ್ಸ್ ಕಚೇರಿಯ ಮೇಲೆ ಹಿಡಿತ ಸಾಧಿಸಿ, ಅದಕ್ಕೆ ಬೀಗ ಹಾಕಿದ್ದು, ಪತ್ರಿಕೆ ಸಂಪಾದಕಿ ಅನುರಾಧಾ ಭಾಸಿನ್ ಮತ್ತು ಸಿಬ್ಬಂದಿಗೆ ಕಚೇರಿಯ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿರುವ ಗಿಲ್ಡ್, ಈ ಕರಾಳ ಕಾಲದಲ್ಲಿ ಮಾಧ್ಯಮಗಳಿಗೆ ಸಹಾಯ ಮಾಡುವ ಬದಲು ಪತ್ರಿಕೆಯನ್ನು ಮುಚ್ಚುತ್ತಿರುವುದನ್ನು ಖಂಡನೀಯ ಎಂದಿದೆ.

ಇದನ್ನೂ ಓದಿ: ಇದು ಎಲ್ಲಾ ಮೇಲ್ಜಾತಿ ಜನರೂ ಪ್ರತಿಕ್ರಿಯಿಸಲೇಬೇಕಾದ ಸಮಯ, ಮಾಧ್ಯಮಗಳಲ್ಲಿರುವ ಮೇಲ್ಜಾತಿಯವರನ್ನೂ ಒಳಗೊಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...