Homeಕರ್ನಾಟಕಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ...

ಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ ರೋಚಕ ತಿರುವು

- Advertisement -
- Advertisement -

ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂಬ ದೂರುದಾರನ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳದ ನೇತ್ರಾವತಿ ನದಿಯ ದಡದಲ್ಲಿ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಯು ಇದೀಗ ಐದನೇ ದಿನಕ್ಕೆ ತಲುಪಿದೆ. ಇಷ್ಟು ದಿನ ಯಾವುದೇ ಮಹತ್ವದ ಸುಳಿವು ಸಿಗದೇ ಇದ್ದ ತನಿಖಾ ತಂಡಕ್ಕೆ, ಶೋಧ ಕಾರ್ಯದ 4ನೇ ದಿನವಾದ ನಿನ್ನೆ (ಗುರುವಾರ) 6ನೇ ಪಾಯಿಂಟ್‌ನಲ್ಲಿ ದೊರೆತ ಮಾನವ ಅವಶೇಷಗಳು ಹೊಸ ಹುರುಪು ತಂದಿದ್ದು, ಈ ಪ್ರಕರಣಕ್ಕೆ ರೋಚಕ ತಿರುವು ನೀಡಿವೆ.

ಪ್ರವಾಹ ಮತ್ತು ನಿರ್ಮಾಣ ಕಾರ್ಯಗಳಿಂದ ಸವಾಲು:

ಸೋಮವಾರದಿಂದ ಪ್ರಾರಂಭವಾದ ಶೋಧ ಕಾರ್ಯಾಚರಣೆಯಲ್ಲಿ ಮೊದಲ 3 ದಿನಗಳಲ್ಲಿ ಶವ ಶೋಧ ತಂಡವು ನದಿಯ ಬಲ ದಡದಲ್ಲಿರುವ 1 ರಿಂದ 5 ಪಾಯಿಂಟ್‌ಗಳಲ್ಲಿ ತೀವ್ರ ಶೋಧ ನಡೆಸಿತ್ತು. ಆದರೆ, 2014ರ ನಂತರ ನೇತ್ರಾವತಿ ನದಿಯಲ್ಲಿ ಉಂಟಾದ ಭಾರಿ ಪ್ರವಾಹ, ಭೂಕುಸಿತ ಮತ್ತು ನದಿ ನೀರಿನ ಹರಿವಿನಿಂದಾಗಿ ಅನೇಕ ಶವಗಳು ಕೊಚ್ಚಿಕೊಂಡು ಹೋಗಿರಬಹುದು ಎಂದು ತಜ್ಞರು ಮತ್ತು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ದೂರುದಾರ ಗುರುತಿಸಿದ ಹಲವು ಸ್ಥಳಗಳಲ್ಲಿ ಸ್ನಾನಘಟ್ಟಗಳು, ಶೌಚಾಲಯಗಳು ಮತ್ತು ಇತರ ನಿರ್ಮಾಣ ಕಾರ್ಯಗಳು ನಡೆದಿರುವುದರಿಂದಲೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಈ ಪ್ರದೇಶವು ದಟ್ಟವಾದ ಅರಣ್ಯ ಪ್ರದೇಶವಾಗಿರುವುದರಿಂದ, ಇಂಚಿಂಚು ಶೋಧ ಮಾಡುವುದು ಅತ್ಯಂತ ಕಷ್ಟದ ಕೆಲಸವಾಗಿದೆ ಮತ್ತು ಇದಕ್ಕೆ ಹೆಚ್ಚಿನ ಸಮಯ ಹಾಗೂ ವಿಶೇಷ ಅನುಮತಿಗಳ ಅಗತ್ಯವಿದೆ.

ನಿರೀಕ್ಷೆ ಹುಟ್ಟಿಸಿದ 13ನೇ ಪಾಯಿಂಟ್:

ಪ್ರಕರಣದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವುದು ನೇತ್ರಾವತಿ ಸ್ನಾನಘಟ್ಟದ ಎಡಭಾಗದಲ್ಲಿರುವ 13ನೇ ಪಾಯಿಂಟ್. ಇಲ್ಲಿ 10ಕ್ಕೂ ಹೆಚ್ಚು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಹೇಳಿದ್ದಾನೆ. ಶವಗಳನ್ನು ಹೂಳಿದ್ದ ಜಾಗದಲ್ಲಿ ಮೊದಲು 5ರಿಂದ 6 ಅಡಿ ಗುಂಡಿ ಇತ್ತಂತೆ. ಈಗ ಆ ಜಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗಿದ್ದು, ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಸ್ಥಳೀಯರ ಪ್ರಕಾರ, ಈ ಸ್ಥಳದಲ್ಲಿ 5-6 ಅಡಿ ಆಳದಲ್ಲಿ ಶವಗಳು ಸಿಗುವುದು ಕಷ್ಟ. ಹಾಗಾಗಿ 10-15 ಅಡಿ ಆಳದವರೆಗೆ ಅಗೆಯುವುದು ಅವಶ್ಯಕ ಎಂದು ವಾದಿಸಿದ್ದಾರೆ. ಈ ಪಾಯಿಂಟ್‌ಗಳ ಪ್ರದೇಶವು ಭೂಕುಸಿತ ಮತ್ತು ನೆರೆ ಸಂಭವಿಸಿರುವುದು ಕಡಿಮೆ ಇರುವುದರಿಂದ, ಇಲ್ಲಿ ಶವಗಳು ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಕಾರ್ಯಾಚರಣೆ ಮತ್ತು ಮಹತ್ವದ ಸುಳಿವು:

ಗುರುವಾರದಂದು ನೇತ್ರಾವತಿ ಸೇತುವೆಯ ಮುಖ್ಯರಸ್ತೆಯಿಂದ ಸುಮಾರು 300 ಮೀಟರ್ ಒಳಗೆ ಇರುವ 6ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿತ್ತು. ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆ ಕಡಿಮೆ ಇರುವುದರಿಂದ, ತನಿಖಾ ತಂಡವು ಇಲ್ಲಿಗೆ ಹೆಚ್ಚಿನ ಗಮನ ನೀಡಿತ್ತು. ನಿನ್ನೆ ಬೆಳಿಗ್ಗೆ 11.30ಕ್ಕೆ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮಾನವ ಅವಶೇಷಗಳು ಪತ್ತೆಯಾಗಿವೆ. ಈ ಮಹತ್ವದ ಬೆಳವಣಿಗೆಯಿಂದ ಎಸ್‌ಐಟಿ ತಂಡ ತಕ್ಷಣವೇ ಪೂರ್ಣ ಎಚ್ಚರಿಕೆ ವಹಿಸಿತು. ಎಫ್‌ಎಸ್‌ಎಲ್ ತಜ್ಞರೊಂದಿಗೆ ಉಪವಿಭಾಗಾಧಿಕಾರಿ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಉಪಸ್ಥಿತರಿದ್ದರು. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಸಂಜೆ 7.30ರವರೆಗೆ ಮುಂದುವರೆಯಿತು.

ಸಿಕ್ಕ ಅವಶೇಷಗಳನ್ನು ಅತಿ ಸೂಕ್ಷ್ಮವಾಗಿ ಸಂಗ್ರಹಿಸಿ, ಪ್ರತ್ಯೇಕ ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ಹಾಕಿ ಸೀಲ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಮತ್ತು ಎಸ್‌ಐಟಿ ತಂಡದವರು ಈ ಕಾರ್ಯವನ್ನು ಜಂಟಿಯಾಗಿ ನಿರ್ವಹಿಸಿದ್ದಾರೆ. ಈ ಅವಶೇಷಗಳನ್ನು ಈಗ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಡಿಎನ್‌ಎ ಪರೀಕ್ಷೆ ಮತ್ತು ಇತರ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ. ಸದ್ಯಕ್ಕೆ, ಸಿಕ್ಕ ಅವಶೇಷಗಳು ಮಹಿಳೆಯದ್ದೋ ಅಥವಾ ಪುರುಷರದ್ದೋ ಎಂಬ ಮಾಹಿತಿ ಲಭ್ಯವಾಗಿಲ್ಲ.

ಸ್ಥಳೀಯ ಕಾರ್ಮಿಕರನ್ನು ಹೊರಗಿಟ್ಟ ಕಾರ್ಯಾಚರಣೆ:

ಶೋಧ ಕಾರ್ಯಾಚರಣೆಯ ಮತ್ತೊಂದು ಗಮನಾರ್ಹ ಅಂಶವೆಂದರೆ, ಸ್ಥಳೀಯ ಕಾರ್ಮಿಕರ ಬದಲಿಗೆ ವಲಸೆ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ಈ ನಿರ್ಧಾರದ ಹಿಂದೆ ಹಲವು ಕಾರಣಗಳಿರಬಹುದು ಎಂದು ಅಂದಾಜಿಸಲಾಗಿದೆ. ಇಡೀ ಪ್ರದೇಶವು ಅರಣ್ಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ, ಇಂಚಿಂಚು ಶೋಧ ಮಾಡುವುದು ಕಷ್ಟಕರ. ಆದರೂ, ಶೋಧ ಕಾರ್ಯಕ್ಕೆ ಲೀಡ್ ಸಿಕ್ಕಿರುವುದು, ತನಿಖೆಗೆ ಹೊಸ ಆಯಾಮ ನೀಡಿದೆ.

ಈ ಪ್ರಕರಣವು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ನಡೆದಿರುವುದರಿಂದ ಎಲ್ಲೆಡೆ ತೀವ್ರ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಯೋಗಾಲಯದ ವರದಿಗಳು ಬಂದ ನಂತರವೇ, ಈ ಅವಶೇಷಗಳ ಮೂಲ, ಹಿನ್ನೆಲೆ ಮತ್ತು ಹೂಳಿದ ಉದ್ದೇಶದ ಬಗ್ಗೆ ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ನ್ಯಾಯ ಸಿಗಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದು, ಈ ಪ್ರಕರಣದ ಅಂತ್ಯ ಏನಾಗಲಿದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

ತನಿಖೆಗೆ ಒಳಪಟ್ಟಿರುವ ಸ್ಥಳಗಳಿಗೆ ಪೊಲೀಸ್ ಭದ್ರತೆ, ಶೆಡ್‌ಗಳ ರಕ್ಷಣೆ

ಎಸ್‌ಐಟಿ ತಂಡವು ದೂರುದಾರರು ಸೂಚಿಸಿದ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿದ್ದು, ಇವುಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿವೆ.

ಮುಂದಿನ ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಹಾಗೂ ಮಳೆಯಿಂದಾಗಿ ಅವಶೇಷಗಳಿಗೆ ಹಾನಿಯಾಗದಂತೆ ತಡೆಯಲು, ಆ ಸ್ಥಳದ ಸುತ್ತ ತಾತ್ಕಾಲಿಕ ತಗಡಿನ ಶೆಡ್ ನಿರ್ಮಿಸಿ ರಕ್ಷಣೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ಈ ಸ್ಥಳಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಯಾವುದೇ ಅನಗತ್ಯ ಚಟುವಟಿಕೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮಗಳು ತನಿಖೆಯ ಮಹತ್ವವನ್ನು ಸೂಚಿಸುತ್ತವೆ ಮತ್ತು ಭವಿಷ್ಯದಲ್ಲಿ ಲಭ್ಯವಾಗುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿಡಲು ಸಹಕಾರಿಯಾಗಿವೆ.

ವಿಶೇಷ ವರದಿ: ರವಿ ಈಚಲಮರ

ಧರ್ಮಸ್ಥಳದಲ್ಲಿ ಶವ ಶೋಧ: 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...