Homeಕರ್ನಾಟಕಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ...

ಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ ರೋಚಕ ತಿರುವು

- Advertisement -
- Advertisement -

ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂಬ ದೂರುದಾರನ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳದ ನೇತ್ರಾವತಿ ನದಿಯ ದಡದಲ್ಲಿ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಯು ಇದೀಗ ಐದನೇ ದಿನಕ್ಕೆ ತಲುಪಿದೆ. ಇಷ್ಟು ದಿನ ಯಾವುದೇ ಮಹತ್ವದ ಸುಳಿವು ಸಿಗದೇ ಇದ್ದ ತನಿಖಾ ತಂಡಕ್ಕೆ, ಶೋಧ ಕಾರ್ಯದ 4ನೇ ದಿನವಾದ ನಿನ್ನೆ (ಗುರುವಾರ) 6ನೇ ಪಾಯಿಂಟ್‌ನಲ್ಲಿ ದೊರೆತ ಮಾನವ ಅವಶೇಷಗಳು ಹೊಸ ಹುರುಪು ತಂದಿದ್ದು, ಈ ಪ್ರಕರಣಕ್ಕೆ ರೋಚಕ ತಿರುವು ನೀಡಿವೆ.

ಪ್ರವಾಹ ಮತ್ತು ನಿರ್ಮಾಣ ಕಾರ್ಯಗಳಿಂದ ಸವಾಲು:

ಸೋಮವಾರದಿಂದ ಪ್ರಾರಂಭವಾದ ಶೋಧ ಕಾರ್ಯಾಚರಣೆಯಲ್ಲಿ ಮೊದಲ 3 ದಿನಗಳಲ್ಲಿ ಶವ ಶೋಧ ತಂಡವು ನದಿಯ ಬಲ ದಡದಲ್ಲಿರುವ 1 ರಿಂದ 5 ಪಾಯಿಂಟ್‌ಗಳಲ್ಲಿ ತೀವ್ರ ಶೋಧ ನಡೆಸಿತ್ತು. ಆದರೆ, 2014ರ ನಂತರ ನೇತ್ರಾವತಿ ನದಿಯಲ್ಲಿ ಉಂಟಾದ ಭಾರಿ ಪ್ರವಾಹ, ಭೂಕುಸಿತ ಮತ್ತು ನದಿ ನೀರಿನ ಹರಿವಿನಿಂದಾಗಿ ಅನೇಕ ಶವಗಳು ಕೊಚ್ಚಿಕೊಂಡು ಹೋಗಿರಬಹುದು ಎಂದು ತಜ್ಞರು ಮತ್ತು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ದೂರುದಾರ ಗುರುತಿಸಿದ ಹಲವು ಸ್ಥಳಗಳಲ್ಲಿ ಸ್ನಾನಘಟ್ಟಗಳು, ಶೌಚಾಲಯಗಳು ಮತ್ತು ಇತರ ನಿರ್ಮಾಣ ಕಾರ್ಯಗಳು ನಡೆದಿರುವುದರಿಂದಲೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಈ ಪ್ರದೇಶವು ದಟ್ಟವಾದ ಅರಣ್ಯ ಪ್ರದೇಶವಾಗಿರುವುದರಿಂದ, ಇಂಚಿಂಚು ಶೋಧ ಮಾಡುವುದು ಅತ್ಯಂತ ಕಷ್ಟದ ಕೆಲಸವಾಗಿದೆ ಮತ್ತು ಇದಕ್ಕೆ ಹೆಚ್ಚಿನ ಸಮಯ ಹಾಗೂ ವಿಶೇಷ ಅನುಮತಿಗಳ ಅಗತ್ಯವಿದೆ.

ನಿರೀಕ್ಷೆ ಹುಟ್ಟಿಸಿದ 13ನೇ ಪಾಯಿಂಟ್:

ಪ್ರಕರಣದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವುದು ನೇತ್ರಾವತಿ ಸ್ನಾನಘಟ್ಟದ ಎಡಭಾಗದಲ್ಲಿರುವ 13ನೇ ಪಾಯಿಂಟ್. ಇಲ್ಲಿ 10ಕ್ಕೂ ಹೆಚ್ಚು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಹೇಳಿದ್ದಾನೆ. ಶವಗಳನ್ನು ಹೂಳಿದ್ದ ಜಾಗದಲ್ಲಿ ಮೊದಲು 5ರಿಂದ 6 ಅಡಿ ಗುಂಡಿ ಇತ್ತಂತೆ. ಈಗ ಆ ಜಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗಿದ್ದು, ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಸ್ಥಳೀಯರ ಪ್ರಕಾರ, ಈ ಸ್ಥಳದಲ್ಲಿ 5-6 ಅಡಿ ಆಳದಲ್ಲಿ ಶವಗಳು ಸಿಗುವುದು ಕಷ್ಟ. ಹಾಗಾಗಿ 10-15 ಅಡಿ ಆಳದವರೆಗೆ ಅಗೆಯುವುದು ಅವಶ್ಯಕ ಎಂದು ವಾದಿಸಿದ್ದಾರೆ. ಈ ಪಾಯಿಂಟ್‌ಗಳ ಪ್ರದೇಶವು ಭೂಕುಸಿತ ಮತ್ತು ನೆರೆ ಸಂಭವಿಸಿರುವುದು ಕಡಿಮೆ ಇರುವುದರಿಂದ, ಇಲ್ಲಿ ಶವಗಳು ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಕಾರ್ಯಾಚರಣೆ ಮತ್ತು ಮಹತ್ವದ ಸುಳಿವು:

ಗುರುವಾರದಂದು ನೇತ್ರಾವತಿ ಸೇತುವೆಯ ಮುಖ್ಯರಸ್ತೆಯಿಂದ ಸುಮಾರು 300 ಮೀಟರ್ ಒಳಗೆ ಇರುವ 6ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿತ್ತು. ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆ ಕಡಿಮೆ ಇರುವುದರಿಂದ, ತನಿಖಾ ತಂಡವು ಇಲ್ಲಿಗೆ ಹೆಚ್ಚಿನ ಗಮನ ನೀಡಿತ್ತು. ನಿನ್ನೆ ಬೆಳಿಗ್ಗೆ 11.30ಕ್ಕೆ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮಾನವ ಅವಶೇಷಗಳು ಪತ್ತೆಯಾಗಿವೆ. ಈ ಮಹತ್ವದ ಬೆಳವಣಿಗೆಯಿಂದ ಎಸ್‌ಐಟಿ ತಂಡ ತಕ್ಷಣವೇ ಪೂರ್ಣ ಎಚ್ಚರಿಕೆ ವಹಿಸಿತು. ಎಫ್‌ಎಸ್‌ಎಲ್ ತಜ್ಞರೊಂದಿಗೆ ಉಪವಿಭಾಗಾಧಿಕಾರಿ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಉಪಸ್ಥಿತರಿದ್ದರು. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಸಂಜೆ 7.30ರವರೆಗೆ ಮುಂದುವರೆಯಿತು.

ಸಿಕ್ಕ ಅವಶೇಷಗಳನ್ನು ಅತಿ ಸೂಕ್ಷ್ಮವಾಗಿ ಸಂಗ್ರಹಿಸಿ, ಪ್ರತ್ಯೇಕ ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ಹಾಕಿ ಸೀಲ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಮತ್ತು ಎಸ್‌ಐಟಿ ತಂಡದವರು ಈ ಕಾರ್ಯವನ್ನು ಜಂಟಿಯಾಗಿ ನಿರ್ವಹಿಸಿದ್ದಾರೆ. ಈ ಅವಶೇಷಗಳನ್ನು ಈಗ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಡಿಎನ್‌ಎ ಪರೀಕ್ಷೆ ಮತ್ತು ಇತರ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ. ಸದ್ಯಕ್ಕೆ, ಸಿಕ್ಕ ಅವಶೇಷಗಳು ಮಹಿಳೆಯದ್ದೋ ಅಥವಾ ಪುರುಷರದ್ದೋ ಎಂಬ ಮಾಹಿತಿ ಲಭ್ಯವಾಗಿಲ್ಲ.

ಸ್ಥಳೀಯ ಕಾರ್ಮಿಕರನ್ನು ಹೊರಗಿಟ್ಟ ಕಾರ್ಯಾಚರಣೆ:

ಶೋಧ ಕಾರ್ಯಾಚರಣೆಯ ಮತ್ತೊಂದು ಗಮನಾರ್ಹ ಅಂಶವೆಂದರೆ, ಸ್ಥಳೀಯ ಕಾರ್ಮಿಕರ ಬದಲಿಗೆ ವಲಸೆ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ಈ ನಿರ್ಧಾರದ ಹಿಂದೆ ಹಲವು ಕಾರಣಗಳಿರಬಹುದು ಎಂದು ಅಂದಾಜಿಸಲಾಗಿದೆ. ಇಡೀ ಪ್ರದೇಶವು ಅರಣ್ಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ, ಇಂಚಿಂಚು ಶೋಧ ಮಾಡುವುದು ಕಷ್ಟಕರ. ಆದರೂ, ಶೋಧ ಕಾರ್ಯಕ್ಕೆ ಲೀಡ್ ಸಿಕ್ಕಿರುವುದು, ತನಿಖೆಗೆ ಹೊಸ ಆಯಾಮ ನೀಡಿದೆ.

ಈ ಪ್ರಕರಣವು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ನಡೆದಿರುವುದರಿಂದ ಎಲ್ಲೆಡೆ ತೀವ್ರ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಯೋಗಾಲಯದ ವರದಿಗಳು ಬಂದ ನಂತರವೇ, ಈ ಅವಶೇಷಗಳ ಮೂಲ, ಹಿನ್ನೆಲೆ ಮತ್ತು ಹೂಳಿದ ಉದ್ದೇಶದ ಬಗ್ಗೆ ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ನ್ಯಾಯ ಸಿಗಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದು, ಈ ಪ್ರಕರಣದ ಅಂತ್ಯ ಏನಾಗಲಿದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

ತನಿಖೆಗೆ ಒಳಪಟ್ಟಿರುವ ಸ್ಥಳಗಳಿಗೆ ಪೊಲೀಸ್ ಭದ್ರತೆ, ಶೆಡ್‌ಗಳ ರಕ್ಷಣೆ

ಎಸ್‌ಐಟಿ ತಂಡವು ದೂರುದಾರರು ಸೂಚಿಸಿದ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿದ್ದು, ಇವುಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿವೆ.

ಮುಂದಿನ ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಹಾಗೂ ಮಳೆಯಿಂದಾಗಿ ಅವಶೇಷಗಳಿಗೆ ಹಾನಿಯಾಗದಂತೆ ತಡೆಯಲು, ಆ ಸ್ಥಳದ ಸುತ್ತ ತಾತ್ಕಾಲಿಕ ತಗಡಿನ ಶೆಡ್ ನಿರ್ಮಿಸಿ ರಕ್ಷಣೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ಈ ಸ್ಥಳಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಯಾವುದೇ ಅನಗತ್ಯ ಚಟುವಟಿಕೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮಗಳು ತನಿಖೆಯ ಮಹತ್ವವನ್ನು ಸೂಚಿಸುತ್ತವೆ ಮತ್ತು ಭವಿಷ್ಯದಲ್ಲಿ ಲಭ್ಯವಾಗುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿಡಲು ಸಹಕಾರಿಯಾಗಿವೆ.

ವಿಶೇಷ ವರದಿ: ರವಿ ಈಚಲಮರ

ಧರ್ಮಸ್ಥಳದಲ್ಲಿ ಶವ ಶೋಧ: 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...