Homeಕರ್ನಾಟಕಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ...

ಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ ರೋಚಕ ತಿರುವು

- Advertisement -
- Advertisement -

ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂಬ ದೂರುದಾರನ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳದ ನೇತ್ರಾವತಿ ನದಿಯ ದಡದಲ್ಲಿ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಯು ಇದೀಗ ಐದನೇ ದಿನಕ್ಕೆ ತಲುಪಿದೆ. ಇಷ್ಟು ದಿನ ಯಾವುದೇ ಮಹತ್ವದ ಸುಳಿವು ಸಿಗದೇ ಇದ್ದ ತನಿಖಾ ತಂಡಕ್ಕೆ, ಶೋಧ ಕಾರ್ಯದ 4ನೇ ದಿನವಾದ ನಿನ್ನೆ (ಗುರುವಾರ) 6ನೇ ಪಾಯಿಂಟ್‌ನಲ್ಲಿ ದೊರೆತ ಮಾನವ ಅವಶೇಷಗಳು ಹೊಸ ಹುರುಪು ತಂದಿದ್ದು, ಈ ಪ್ರಕರಣಕ್ಕೆ ರೋಚಕ ತಿರುವು ನೀಡಿವೆ.

ಪ್ರವಾಹ ಮತ್ತು ನಿರ್ಮಾಣ ಕಾರ್ಯಗಳಿಂದ ಸವಾಲು:

ಸೋಮವಾರದಿಂದ ಪ್ರಾರಂಭವಾದ ಶೋಧ ಕಾರ್ಯಾಚರಣೆಯಲ್ಲಿ ಮೊದಲ 3 ದಿನಗಳಲ್ಲಿ ಶವ ಶೋಧ ತಂಡವು ನದಿಯ ಬಲ ದಡದಲ್ಲಿರುವ 1 ರಿಂದ 5 ಪಾಯಿಂಟ್‌ಗಳಲ್ಲಿ ತೀವ್ರ ಶೋಧ ನಡೆಸಿತ್ತು. ಆದರೆ, 2014ರ ನಂತರ ನೇತ್ರಾವತಿ ನದಿಯಲ್ಲಿ ಉಂಟಾದ ಭಾರಿ ಪ್ರವಾಹ, ಭೂಕುಸಿತ ಮತ್ತು ನದಿ ನೀರಿನ ಹರಿವಿನಿಂದಾಗಿ ಅನೇಕ ಶವಗಳು ಕೊಚ್ಚಿಕೊಂಡು ಹೋಗಿರಬಹುದು ಎಂದು ತಜ್ಞರು ಮತ್ತು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ದೂರುದಾರ ಗುರುತಿಸಿದ ಹಲವು ಸ್ಥಳಗಳಲ್ಲಿ ಸ್ನಾನಘಟ್ಟಗಳು, ಶೌಚಾಲಯಗಳು ಮತ್ತು ಇತರ ನಿರ್ಮಾಣ ಕಾರ್ಯಗಳು ನಡೆದಿರುವುದರಿಂದಲೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಈ ಪ್ರದೇಶವು ದಟ್ಟವಾದ ಅರಣ್ಯ ಪ್ರದೇಶವಾಗಿರುವುದರಿಂದ, ಇಂಚಿಂಚು ಶೋಧ ಮಾಡುವುದು ಅತ್ಯಂತ ಕಷ್ಟದ ಕೆಲಸವಾಗಿದೆ ಮತ್ತು ಇದಕ್ಕೆ ಹೆಚ್ಚಿನ ಸಮಯ ಹಾಗೂ ವಿಶೇಷ ಅನುಮತಿಗಳ ಅಗತ್ಯವಿದೆ.

ನಿರೀಕ್ಷೆ ಹುಟ್ಟಿಸಿದ 13ನೇ ಪಾಯಿಂಟ್:

ಪ್ರಕರಣದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವುದು ನೇತ್ರಾವತಿ ಸ್ನಾನಘಟ್ಟದ ಎಡಭಾಗದಲ್ಲಿರುವ 13ನೇ ಪಾಯಿಂಟ್. ಇಲ್ಲಿ 10ಕ್ಕೂ ಹೆಚ್ಚು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಹೇಳಿದ್ದಾನೆ. ಶವಗಳನ್ನು ಹೂಳಿದ್ದ ಜಾಗದಲ್ಲಿ ಮೊದಲು 5ರಿಂದ 6 ಅಡಿ ಗುಂಡಿ ಇತ್ತಂತೆ. ಈಗ ಆ ಜಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗಿದ್ದು, ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಸ್ಥಳೀಯರ ಪ್ರಕಾರ, ಈ ಸ್ಥಳದಲ್ಲಿ 5-6 ಅಡಿ ಆಳದಲ್ಲಿ ಶವಗಳು ಸಿಗುವುದು ಕಷ್ಟ. ಹಾಗಾಗಿ 10-15 ಅಡಿ ಆಳದವರೆಗೆ ಅಗೆಯುವುದು ಅವಶ್ಯಕ ಎಂದು ವಾದಿಸಿದ್ದಾರೆ. ಈ ಪಾಯಿಂಟ್‌ಗಳ ಪ್ರದೇಶವು ಭೂಕುಸಿತ ಮತ್ತು ನೆರೆ ಸಂಭವಿಸಿರುವುದು ಕಡಿಮೆ ಇರುವುದರಿಂದ, ಇಲ್ಲಿ ಶವಗಳು ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಕಾರ್ಯಾಚರಣೆ ಮತ್ತು ಮಹತ್ವದ ಸುಳಿವು:

ಗುರುವಾರದಂದು ನೇತ್ರಾವತಿ ಸೇತುವೆಯ ಮುಖ್ಯರಸ್ತೆಯಿಂದ ಸುಮಾರು 300 ಮೀಟರ್ ಒಳಗೆ ಇರುವ 6ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿತ್ತು. ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆ ಕಡಿಮೆ ಇರುವುದರಿಂದ, ತನಿಖಾ ತಂಡವು ಇಲ್ಲಿಗೆ ಹೆಚ್ಚಿನ ಗಮನ ನೀಡಿತ್ತು. ನಿನ್ನೆ ಬೆಳಿಗ್ಗೆ 11.30ಕ್ಕೆ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮಾನವ ಅವಶೇಷಗಳು ಪತ್ತೆಯಾಗಿವೆ. ಈ ಮಹತ್ವದ ಬೆಳವಣಿಗೆಯಿಂದ ಎಸ್‌ಐಟಿ ತಂಡ ತಕ್ಷಣವೇ ಪೂರ್ಣ ಎಚ್ಚರಿಕೆ ವಹಿಸಿತು. ಎಫ್‌ಎಸ್‌ಎಲ್ ತಜ್ಞರೊಂದಿಗೆ ಉಪವಿಭಾಗಾಧಿಕಾರಿ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಉಪಸ್ಥಿತರಿದ್ದರು. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಸಂಜೆ 7.30ರವರೆಗೆ ಮುಂದುವರೆಯಿತು.

ಸಿಕ್ಕ ಅವಶೇಷಗಳನ್ನು ಅತಿ ಸೂಕ್ಷ್ಮವಾಗಿ ಸಂಗ್ರಹಿಸಿ, ಪ್ರತ್ಯೇಕ ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ಹಾಕಿ ಸೀಲ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಮತ್ತು ಎಸ್‌ಐಟಿ ತಂಡದವರು ಈ ಕಾರ್ಯವನ್ನು ಜಂಟಿಯಾಗಿ ನಿರ್ವಹಿಸಿದ್ದಾರೆ. ಈ ಅವಶೇಷಗಳನ್ನು ಈಗ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಡಿಎನ್‌ಎ ಪರೀಕ್ಷೆ ಮತ್ತು ಇತರ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ. ಸದ್ಯಕ್ಕೆ, ಸಿಕ್ಕ ಅವಶೇಷಗಳು ಮಹಿಳೆಯದ್ದೋ ಅಥವಾ ಪುರುಷರದ್ದೋ ಎಂಬ ಮಾಹಿತಿ ಲಭ್ಯವಾಗಿಲ್ಲ.

ಸ್ಥಳೀಯ ಕಾರ್ಮಿಕರನ್ನು ಹೊರಗಿಟ್ಟ ಕಾರ್ಯಾಚರಣೆ:

ಶೋಧ ಕಾರ್ಯಾಚರಣೆಯ ಮತ್ತೊಂದು ಗಮನಾರ್ಹ ಅಂಶವೆಂದರೆ, ಸ್ಥಳೀಯ ಕಾರ್ಮಿಕರ ಬದಲಿಗೆ ವಲಸೆ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ಈ ನಿರ್ಧಾರದ ಹಿಂದೆ ಹಲವು ಕಾರಣಗಳಿರಬಹುದು ಎಂದು ಅಂದಾಜಿಸಲಾಗಿದೆ. ಇಡೀ ಪ್ರದೇಶವು ಅರಣ್ಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ, ಇಂಚಿಂಚು ಶೋಧ ಮಾಡುವುದು ಕಷ್ಟಕರ. ಆದರೂ, ಶೋಧ ಕಾರ್ಯಕ್ಕೆ ಲೀಡ್ ಸಿಕ್ಕಿರುವುದು, ತನಿಖೆಗೆ ಹೊಸ ಆಯಾಮ ನೀಡಿದೆ.

ಈ ಪ್ರಕರಣವು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ನಡೆದಿರುವುದರಿಂದ ಎಲ್ಲೆಡೆ ತೀವ್ರ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಯೋಗಾಲಯದ ವರದಿಗಳು ಬಂದ ನಂತರವೇ, ಈ ಅವಶೇಷಗಳ ಮೂಲ, ಹಿನ್ನೆಲೆ ಮತ್ತು ಹೂಳಿದ ಉದ್ದೇಶದ ಬಗ್ಗೆ ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ನ್ಯಾಯ ಸಿಗಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದು, ಈ ಪ್ರಕರಣದ ಅಂತ್ಯ ಏನಾಗಲಿದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

ತನಿಖೆಗೆ ಒಳಪಟ್ಟಿರುವ ಸ್ಥಳಗಳಿಗೆ ಪೊಲೀಸ್ ಭದ್ರತೆ, ಶೆಡ್‌ಗಳ ರಕ್ಷಣೆ

ಎಸ್‌ಐಟಿ ತಂಡವು ದೂರುದಾರರು ಸೂಚಿಸಿದ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿದ್ದು, ಇವುಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿವೆ.

ಮುಂದಿನ ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಹಾಗೂ ಮಳೆಯಿಂದಾಗಿ ಅವಶೇಷಗಳಿಗೆ ಹಾನಿಯಾಗದಂತೆ ತಡೆಯಲು, ಆ ಸ್ಥಳದ ಸುತ್ತ ತಾತ್ಕಾಲಿಕ ತಗಡಿನ ಶೆಡ್ ನಿರ್ಮಿಸಿ ರಕ್ಷಣೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ಈ ಸ್ಥಳಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಯಾವುದೇ ಅನಗತ್ಯ ಚಟುವಟಿಕೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮಗಳು ತನಿಖೆಯ ಮಹತ್ವವನ್ನು ಸೂಚಿಸುತ್ತವೆ ಮತ್ತು ಭವಿಷ್ಯದಲ್ಲಿ ಲಭ್ಯವಾಗುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿಡಲು ಸಹಕಾರಿಯಾಗಿವೆ.

ವಿಶೇಷ ವರದಿ: ರವಿ ಈಚಲಮರ

ಧರ್ಮಸ್ಥಳದಲ್ಲಿ ಶವ ಶೋಧ: 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....