Homeಕರ್ನಾಟಕಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ...

ಧರ್ಮಸ್ಥಳದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಶವ ಶೋಧ ಕಾರ್ಯಾಚರಣೆ: 6ನೇ ಪಾಯಿಂಟ್‌ನಲ್ಲಿ ಸಿಕ್ಕ ಅವಶೇಷದಿಂದ ಪ್ರಕರಣಕ್ಕೆ ರೋಚಕ ತಿರುವು

- Advertisement -
- Advertisement -

ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂಬ ದೂರುದಾರನ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳದ ನೇತ್ರಾವತಿ ನದಿಯ ದಡದಲ್ಲಿ ನಡೆಯುತ್ತಿರುವ ಶವ ಶೋಧ ಕಾರ್ಯಾಚರಣೆಯು ಇದೀಗ ಐದನೇ ದಿನಕ್ಕೆ ತಲುಪಿದೆ. ಇಷ್ಟು ದಿನ ಯಾವುದೇ ಮಹತ್ವದ ಸುಳಿವು ಸಿಗದೇ ಇದ್ದ ತನಿಖಾ ತಂಡಕ್ಕೆ, ಶೋಧ ಕಾರ್ಯದ 4ನೇ ದಿನವಾದ ನಿನ್ನೆ (ಗುರುವಾರ) 6ನೇ ಪಾಯಿಂಟ್‌ನಲ್ಲಿ ದೊರೆತ ಮಾನವ ಅವಶೇಷಗಳು ಹೊಸ ಹುರುಪು ತಂದಿದ್ದು, ಈ ಪ್ರಕರಣಕ್ಕೆ ರೋಚಕ ತಿರುವು ನೀಡಿವೆ.

ಪ್ರವಾಹ ಮತ್ತು ನಿರ್ಮಾಣ ಕಾರ್ಯಗಳಿಂದ ಸವಾಲು:

ಸೋಮವಾರದಿಂದ ಪ್ರಾರಂಭವಾದ ಶೋಧ ಕಾರ್ಯಾಚರಣೆಯಲ್ಲಿ ಮೊದಲ 3 ದಿನಗಳಲ್ಲಿ ಶವ ಶೋಧ ತಂಡವು ನದಿಯ ಬಲ ದಡದಲ್ಲಿರುವ 1 ರಿಂದ 5 ಪಾಯಿಂಟ್‌ಗಳಲ್ಲಿ ತೀವ್ರ ಶೋಧ ನಡೆಸಿತ್ತು. ಆದರೆ, 2014ರ ನಂತರ ನೇತ್ರಾವತಿ ನದಿಯಲ್ಲಿ ಉಂಟಾದ ಭಾರಿ ಪ್ರವಾಹ, ಭೂಕುಸಿತ ಮತ್ತು ನದಿ ನೀರಿನ ಹರಿವಿನಿಂದಾಗಿ ಅನೇಕ ಶವಗಳು ಕೊಚ್ಚಿಕೊಂಡು ಹೋಗಿರಬಹುದು ಎಂದು ತಜ್ಞರು ಮತ್ತು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ದೂರುದಾರ ಗುರುತಿಸಿದ ಹಲವು ಸ್ಥಳಗಳಲ್ಲಿ ಸ್ನಾನಘಟ್ಟಗಳು, ಶೌಚಾಲಯಗಳು ಮತ್ತು ಇತರ ನಿರ್ಮಾಣ ಕಾರ್ಯಗಳು ನಡೆದಿರುವುದರಿಂದಲೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಈ ಪ್ರದೇಶವು ದಟ್ಟವಾದ ಅರಣ್ಯ ಪ್ರದೇಶವಾಗಿರುವುದರಿಂದ, ಇಂಚಿಂಚು ಶೋಧ ಮಾಡುವುದು ಅತ್ಯಂತ ಕಷ್ಟದ ಕೆಲಸವಾಗಿದೆ ಮತ್ತು ಇದಕ್ಕೆ ಹೆಚ್ಚಿನ ಸಮಯ ಹಾಗೂ ವಿಶೇಷ ಅನುಮತಿಗಳ ಅಗತ್ಯವಿದೆ.

ನಿರೀಕ್ಷೆ ಹುಟ್ಟಿಸಿದ 13ನೇ ಪಾಯಿಂಟ್:

ಪ್ರಕರಣದಲ್ಲಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವುದು ನೇತ್ರಾವತಿ ಸ್ನಾನಘಟ್ಟದ ಎಡಭಾಗದಲ್ಲಿರುವ 13ನೇ ಪಾಯಿಂಟ್. ಇಲ್ಲಿ 10ಕ್ಕೂ ಹೆಚ್ಚು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಹೇಳಿದ್ದಾನೆ. ಶವಗಳನ್ನು ಹೂಳಿದ್ದ ಜಾಗದಲ್ಲಿ ಮೊದಲು 5ರಿಂದ 6 ಅಡಿ ಗುಂಡಿ ಇತ್ತಂತೆ. ಈಗ ಆ ಜಾಗವನ್ನು ಮಣ್ಣು ಹಾಕಿ ಸಮತಟ್ಟುಗೊಳಿಸಲಾಗಿದ್ದು, ವಿದ್ಯುತ್ ಕಂಬಗಳನ್ನು ಹಾಕಲಾಗಿದೆ. ಸ್ಥಳೀಯರ ಪ್ರಕಾರ, ಈ ಸ್ಥಳದಲ್ಲಿ 5-6 ಅಡಿ ಆಳದಲ್ಲಿ ಶವಗಳು ಸಿಗುವುದು ಕಷ್ಟ. ಹಾಗಾಗಿ 10-15 ಅಡಿ ಆಳದವರೆಗೆ ಅಗೆಯುವುದು ಅವಶ್ಯಕ ಎಂದು ವಾದಿಸಿದ್ದಾರೆ. ಈ ಪಾಯಿಂಟ್‌ಗಳ ಪ್ರದೇಶವು ಭೂಕುಸಿತ ಮತ್ತು ನೆರೆ ಸಂಭವಿಸಿರುವುದು ಕಡಿಮೆ ಇರುವುದರಿಂದ, ಇಲ್ಲಿ ಶವಗಳು ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಕಾರ್ಯಾಚರಣೆ ಮತ್ತು ಮಹತ್ವದ ಸುಳಿವು:

ಗುರುವಾರದಂದು ನೇತ್ರಾವತಿ ಸೇತುವೆಯ ಮುಖ್ಯರಸ್ತೆಯಿಂದ ಸುಮಾರು 300 ಮೀಟರ್ ಒಳಗೆ ಇರುವ 6ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿತ್ತು. ಈ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆ ಕಡಿಮೆ ಇರುವುದರಿಂದ, ತನಿಖಾ ತಂಡವು ಇಲ್ಲಿಗೆ ಹೆಚ್ಚಿನ ಗಮನ ನೀಡಿತ್ತು. ನಿನ್ನೆ ಬೆಳಿಗ್ಗೆ 11.30ಕ್ಕೆ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮಾನವ ಅವಶೇಷಗಳು ಪತ್ತೆಯಾಗಿವೆ. ಈ ಮಹತ್ವದ ಬೆಳವಣಿಗೆಯಿಂದ ಎಸ್‌ಐಟಿ ತಂಡ ತಕ್ಷಣವೇ ಪೂರ್ಣ ಎಚ್ಚರಿಕೆ ವಹಿಸಿತು. ಎಫ್‌ಎಸ್‌ಎಲ್ ತಜ್ಞರೊಂದಿಗೆ ಉಪವಿಭಾಗಾಧಿಕಾರಿ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಉಪಸ್ಥಿತರಿದ್ದರು. ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಸಂಜೆ 7.30ರವರೆಗೆ ಮುಂದುವರೆಯಿತು.

ಸಿಕ್ಕ ಅವಶೇಷಗಳನ್ನು ಅತಿ ಸೂಕ್ಷ್ಮವಾಗಿ ಸಂಗ್ರಹಿಸಿ, ಪ್ರತ್ಯೇಕ ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ಹಾಕಿ ಸೀಲ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಮತ್ತು ಎಸ್‌ಐಟಿ ತಂಡದವರು ಈ ಕಾರ್ಯವನ್ನು ಜಂಟಿಯಾಗಿ ನಿರ್ವಹಿಸಿದ್ದಾರೆ. ಈ ಅವಶೇಷಗಳನ್ನು ಈಗ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಡಿಎನ್‌ಎ ಪರೀಕ್ಷೆ ಮತ್ತು ಇತರ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ. ಸದ್ಯಕ್ಕೆ, ಸಿಕ್ಕ ಅವಶೇಷಗಳು ಮಹಿಳೆಯದ್ದೋ ಅಥವಾ ಪುರುಷರದ್ದೋ ಎಂಬ ಮಾಹಿತಿ ಲಭ್ಯವಾಗಿಲ್ಲ.

ಸ್ಥಳೀಯ ಕಾರ್ಮಿಕರನ್ನು ಹೊರಗಿಟ್ಟ ಕಾರ್ಯಾಚರಣೆ:

ಶೋಧ ಕಾರ್ಯಾಚರಣೆಯ ಮತ್ತೊಂದು ಗಮನಾರ್ಹ ಅಂಶವೆಂದರೆ, ಸ್ಥಳೀಯ ಕಾರ್ಮಿಕರ ಬದಲಿಗೆ ವಲಸೆ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ಈ ನಿರ್ಧಾರದ ಹಿಂದೆ ಹಲವು ಕಾರಣಗಳಿರಬಹುದು ಎಂದು ಅಂದಾಜಿಸಲಾಗಿದೆ. ಇಡೀ ಪ್ರದೇಶವು ಅರಣ್ಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ, ಇಂಚಿಂಚು ಶೋಧ ಮಾಡುವುದು ಕಷ್ಟಕರ. ಆದರೂ, ಶೋಧ ಕಾರ್ಯಕ್ಕೆ ಲೀಡ್ ಸಿಕ್ಕಿರುವುದು, ತನಿಖೆಗೆ ಹೊಸ ಆಯಾಮ ನೀಡಿದೆ.

ಈ ಪ್ರಕರಣವು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ನಡೆದಿರುವುದರಿಂದ ಎಲ್ಲೆಡೆ ತೀವ್ರ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಯೋಗಾಲಯದ ವರದಿಗಳು ಬಂದ ನಂತರವೇ, ಈ ಅವಶೇಷಗಳ ಮೂಲ, ಹಿನ್ನೆಲೆ ಮತ್ತು ಹೂಳಿದ ಉದ್ದೇಶದ ಬಗ್ಗೆ ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ನ್ಯಾಯ ಸಿಗಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದು, ಈ ಪ್ರಕರಣದ ಅಂತ್ಯ ಏನಾಗಲಿದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.

ತನಿಖೆಗೆ ಒಳಪಟ್ಟಿರುವ ಸ್ಥಳಗಳಿಗೆ ಪೊಲೀಸ್ ಭದ್ರತೆ, ಶೆಡ್‌ಗಳ ರಕ್ಷಣೆ

ಎಸ್‌ಐಟಿ ತಂಡವು ದೂರುದಾರರು ಸೂಚಿಸಿದ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿದ್ದು, ಇವುಗಳ ರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದುವರೆಗೆ ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿ ಅವಶೇಷಗಳು ಪತ್ತೆಯಾಗಿವೆ.

ಮುಂದಿನ ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಹಾಗೂ ಮಳೆಯಿಂದಾಗಿ ಅವಶೇಷಗಳಿಗೆ ಹಾನಿಯಾಗದಂತೆ ತಡೆಯಲು, ಆ ಸ್ಥಳದ ಸುತ್ತ ತಾತ್ಕಾಲಿಕ ತಗಡಿನ ಶೆಡ್ ನಿರ್ಮಿಸಿ ರಕ್ಷಣೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ಈ ಸ್ಥಳಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಯಾವುದೇ ಅನಗತ್ಯ ಚಟುವಟಿಕೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮಗಳು ತನಿಖೆಯ ಮಹತ್ವವನ್ನು ಸೂಚಿಸುತ್ತವೆ ಮತ್ತು ಭವಿಷ್ಯದಲ್ಲಿ ಲಭ್ಯವಾಗುವ ಸಾಕ್ಷ್ಯಗಳನ್ನು ಸುರಕ್ಷಿತವಾಗಿಡಲು ಸಹಕಾರಿಯಾಗಿವೆ.

ವಿಶೇಷ ವರದಿ: ರವಿ ಈಚಲಮರ

ಧರ್ಮಸ್ಥಳದಲ್ಲಿ ಶವ ಶೋಧ: 6ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...