Homeಕರ್ನಾಟಕಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

ಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಶವಗಳ ಶೋಧ ಕಾರ್ಯ ಎರಡನೇ ದಿನವೂ ಮುಂದುವರಿಯಲಿದೆ. ವರದಿಗಳ ಪ್ರಕಾರ, ಇಂದು (ಬುಧವಾರ) ದೂರುದಾರ ತೋರಿಸಿದ ಮೂರು ಸ್ಥಳಗಳಲ್ಲಿ ಮಣ್ಣು ಅಗೆಯಲು ಎಸ್ಐಟಿ ನಿರ್ಧರಿಸಿದೆ.

ಈ ಪ್ರಕ್ರಿಯೆಗೆ ಸ್ಥಳೀಯ ಅಧಿಕಾರಿಗಳ ಸಹಕಾರ ಬೇಕಿದೆ. ಶಿಷ್ಟಾಚಾರದ ಪ್ರಕಾರ ಇದಕ್ಕೆ ಸಂಬಂಧಿತ ಅಧಿಕಾರಿಯಾದ ಪುತ್ತೂರಿನ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಅನುಮತಿ ನಿಡಬೇಕಿದೆ. ಸಿಬ್ಬಂದಿ ಲಭ್ಯತೆ ಮತ್ತು ಇತರ ಸಾಧ್ಯತೆಗಳನ್ನು ನೋಡಿಕೊಂಡು ಉತ್ಖನನಕ್ಕೆ ಅನುಮತಿ ನೀಡುವುದು ಎಸಿಗೆ ಬಿಟ್ಟ ವಿಚಾರವಾಗಿದೆ.

ನಿನ್ನೆ (ಮಂಗಳವಾರ) ದೂರುದಾರ ತೋರಿಸಿದ ಮೊದಲ ಪಾಯಿಂಟ್ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಣ್ಣು ಅಗೆಯಲಾಗಿದೆ. ಆದರೆ, 8 ಅಡಿ ಆಳ ಅಗೆದರೂ ಅಲ್ಲಿ ಶವಗಳನ್ನು ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಸುಮಾರು 10 ಕಾರ್ಮಿಕರನ್ನು ಒಳಗೊಂಡ ತಂಡವು ಹಾರೆ, ಪಿಕಾಸಿ ಬಳಸಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಣ್ಣು ಅಗೆಯುವ ಕಾರ್ಯ ಆರಂಭಿಸಿತು. ನೇತ್ರಾವತಿ ನದಿಯಿಂದ 10 ಮೀಟರ್ ದೂರದಲ್ಲಿರುವ ಈ ಜಾಗವನ್ನು ಅಗೆದಂತೆ ನೀರು ಜಿನುಗಲಾರಂಭಿಸಿತು. ಜೊತೆಗೆ ಬಿಟ್ಟು ಬಿಟ್ಟು ಧಾರಾಕಾರ ಮಳೆಯೂ ಸುರಿಯುತ್ತಿತ್ತು, ಇದರಿಂದ ಅಗೆಯುವಿಕೆಗೆ ಅಡಚಣೆಯುಂಟಾಯಿತು. ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳು ಸಣ್ಣ ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ತರಿಸಿಕೊಂಡು ಅಗೆಯಿಸಿದರು. ಕೊನೆಗೆ ಶ್ವಾನದಳ ಕರೆತಂದು ಪರಿಶೀಲನೆ ನಡೆಸಿದರು. ಆದರೂ, ಶವಗಳನ್ನು ಹೂತಿರುವ ಬಗ್ಗೆ ಯಾವುದೇ ಕುರುಹು ಪತ್ತೆಯಾಗದ ಕಾರಣ ಮೊದಲ ದಿನದ ಅಗೆಯುವ ಕಾರ್ಯವನ್ನು ಸಂಜೆ 6ರ ವೇಳೆಗೆ ಸ್ಥಗಿತಗೊಳಿಸಲಾಯಿತು.

ಇಂದು ದೂರುದಾರ ತೋರಿಸಿದ ಎರಡನೇ ಪಾಯಿಂಟ್‌ನಿಂದ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ. ಈಗಾಗಲೇ ಗುರುತಿಸಿರುವ 12 ಪಾಯಿಂಟ್‌ಗಳಲ್ಲಿ ಅಗೆತ ಬಾಕಿಯಿದೆ.

ಮೂಲಗಳ ಪ್ರಕಾರ, ದೂರುದಾರ ತಲೆ ಬುರುಡೆಯೊಂದನ್ನು ತಂದಿರುವ ಜಾಗದಲ್ಲಿ ಇಂದು ಅಗೆತ ನಡೆಯಲಿದೆ. ಮಾನವ ಶ್ರಮದ ಮೂಲಕವೇ ಮಣ್ಣು ಅಗೆಯಲಾಗುತ್ತದೆ. ಏಕೆಂದರೆ, ಈ ಪಾಯಿಂಟ್‌ಗಳು ಮೀಸಲು ಅರಣ್ಯ ಪ್ರದೇಶದಲ್ಲಿವೆ. ಅಲ್ಲದೆ, ಅಲ್ಲಿ ನಿನ್ನೆಯಂತೆ ನೀರಿನ ಒರತೆ ಅಡ್ಡಿಯಾಗುವ ಸಾಧ್ಯತೆ ಕಡಿಮೆಯಿದೆ. ಒಂದು ವೇಳೆ ಹೂತಿಟ್ಟ ಶವಗಳ ಅಸ್ತಿಪಂಜರ ಇದ್ದರೆ, ಅದನ್ನು ಬಹಳ ಸೂಕ್ಷ್ಮವಾಗಿ ಮೇಲೆತ್ತಬೇಕಿದೆ.

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...