Homeಕರ್ನಾಟಕಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

ಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಶವಗಳ ಶೋಧ ಕಾರ್ಯ ಎರಡನೇ ದಿನವೂ ಮುಂದುವರಿಯಲಿದೆ. ವರದಿಗಳ ಪ್ರಕಾರ, ಇಂದು (ಬುಧವಾರ) ದೂರುದಾರ ತೋರಿಸಿದ ಮೂರು ಸ್ಥಳಗಳಲ್ಲಿ ಮಣ್ಣು ಅಗೆಯಲು ಎಸ್ಐಟಿ ನಿರ್ಧರಿಸಿದೆ.

ಈ ಪ್ರಕ್ರಿಯೆಗೆ ಸ್ಥಳೀಯ ಅಧಿಕಾರಿಗಳ ಸಹಕಾರ ಬೇಕಿದೆ. ಶಿಷ್ಟಾಚಾರದ ಪ್ರಕಾರ ಇದಕ್ಕೆ ಸಂಬಂಧಿತ ಅಧಿಕಾರಿಯಾದ ಪುತ್ತೂರಿನ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಅನುಮತಿ ನಿಡಬೇಕಿದೆ. ಸಿಬ್ಬಂದಿ ಲಭ್ಯತೆ ಮತ್ತು ಇತರ ಸಾಧ್ಯತೆಗಳನ್ನು ನೋಡಿಕೊಂಡು ಉತ್ಖನನಕ್ಕೆ ಅನುಮತಿ ನೀಡುವುದು ಎಸಿಗೆ ಬಿಟ್ಟ ವಿಚಾರವಾಗಿದೆ.

ನಿನ್ನೆ (ಮಂಗಳವಾರ) ದೂರುದಾರ ತೋರಿಸಿದ ಮೊದಲ ಪಾಯಿಂಟ್ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಣ್ಣು ಅಗೆಯಲಾಗಿದೆ. ಆದರೆ, 8 ಅಡಿ ಆಳ ಅಗೆದರೂ ಅಲ್ಲಿ ಶವಗಳನ್ನು ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಸುಮಾರು 10 ಕಾರ್ಮಿಕರನ್ನು ಒಳಗೊಂಡ ತಂಡವು ಹಾರೆ, ಪಿಕಾಸಿ ಬಳಸಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಣ್ಣು ಅಗೆಯುವ ಕಾರ್ಯ ಆರಂಭಿಸಿತು. ನೇತ್ರಾವತಿ ನದಿಯಿಂದ 10 ಮೀಟರ್ ದೂರದಲ್ಲಿರುವ ಈ ಜಾಗವನ್ನು ಅಗೆದಂತೆ ನೀರು ಜಿನುಗಲಾರಂಭಿಸಿತು. ಜೊತೆಗೆ ಬಿಟ್ಟು ಬಿಟ್ಟು ಧಾರಾಕಾರ ಮಳೆಯೂ ಸುರಿಯುತ್ತಿತ್ತು, ಇದರಿಂದ ಅಗೆಯುವಿಕೆಗೆ ಅಡಚಣೆಯುಂಟಾಯಿತು. ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳು ಸಣ್ಣ ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ತರಿಸಿಕೊಂಡು ಅಗೆಯಿಸಿದರು. ಕೊನೆಗೆ ಶ್ವಾನದಳ ಕರೆತಂದು ಪರಿಶೀಲನೆ ನಡೆಸಿದರು. ಆದರೂ, ಶವಗಳನ್ನು ಹೂತಿರುವ ಬಗ್ಗೆ ಯಾವುದೇ ಕುರುಹು ಪತ್ತೆಯಾಗದ ಕಾರಣ ಮೊದಲ ದಿನದ ಅಗೆಯುವ ಕಾರ್ಯವನ್ನು ಸಂಜೆ 6ರ ವೇಳೆಗೆ ಸ್ಥಗಿತಗೊಳಿಸಲಾಯಿತು.

ಇಂದು ದೂರುದಾರ ತೋರಿಸಿದ ಎರಡನೇ ಪಾಯಿಂಟ್‌ನಿಂದ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ. ಈಗಾಗಲೇ ಗುರುತಿಸಿರುವ 12 ಪಾಯಿಂಟ್‌ಗಳಲ್ಲಿ ಅಗೆತ ಬಾಕಿಯಿದೆ.

ಮೂಲಗಳ ಪ್ರಕಾರ, ದೂರುದಾರ ತಲೆ ಬುರುಡೆಯೊಂದನ್ನು ತಂದಿರುವ ಜಾಗದಲ್ಲಿ ಇಂದು ಅಗೆತ ನಡೆಯಲಿದೆ. ಮಾನವ ಶ್ರಮದ ಮೂಲಕವೇ ಮಣ್ಣು ಅಗೆಯಲಾಗುತ್ತದೆ. ಏಕೆಂದರೆ, ಈ ಪಾಯಿಂಟ್‌ಗಳು ಮೀಸಲು ಅರಣ್ಯ ಪ್ರದೇಶದಲ್ಲಿವೆ. ಅಲ್ಲದೆ, ಅಲ್ಲಿ ನಿನ್ನೆಯಂತೆ ನೀರಿನ ಒರತೆ ಅಡ್ಡಿಯಾಗುವ ಸಾಧ್ಯತೆ ಕಡಿಮೆಯಿದೆ. ಒಂದು ವೇಳೆ ಹೂತಿಟ್ಟ ಶವಗಳ ಅಸ್ತಿಪಂಜರ ಇದ್ದರೆ, ಅದನ್ನು ಬಹಳ ಸೂಕ್ಷ್ಮವಾಗಿ ಮೇಲೆತ್ತಬೇಕಿದೆ.

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...