Homeಕರ್ನಾಟಕಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

ಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಶವಗಳ ಶೋಧ ಕಾರ್ಯ ಎರಡನೇ ದಿನವೂ ಮುಂದುವರಿಯಲಿದೆ. ವರದಿಗಳ ಪ್ರಕಾರ, ಇಂದು (ಬುಧವಾರ) ದೂರುದಾರ ತೋರಿಸಿದ ಮೂರು ಸ್ಥಳಗಳಲ್ಲಿ ಮಣ್ಣು ಅಗೆಯಲು ಎಸ್ಐಟಿ ನಿರ್ಧರಿಸಿದೆ.

ಈ ಪ್ರಕ್ರಿಯೆಗೆ ಸ್ಥಳೀಯ ಅಧಿಕಾರಿಗಳ ಸಹಕಾರ ಬೇಕಿದೆ. ಶಿಷ್ಟಾಚಾರದ ಪ್ರಕಾರ ಇದಕ್ಕೆ ಸಂಬಂಧಿತ ಅಧಿಕಾರಿಯಾದ ಪುತ್ತೂರಿನ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಅನುಮತಿ ನಿಡಬೇಕಿದೆ. ಸಿಬ್ಬಂದಿ ಲಭ್ಯತೆ ಮತ್ತು ಇತರ ಸಾಧ್ಯತೆಗಳನ್ನು ನೋಡಿಕೊಂಡು ಉತ್ಖನನಕ್ಕೆ ಅನುಮತಿ ನೀಡುವುದು ಎಸಿಗೆ ಬಿಟ್ಟ ವಿಚಾರವಾಗಿದೆ.

ನಿನ್ನೆ (ಮಂಗಳವಾರ) ದೂರುದಾರ ತೋರಿಸಿದ ಮೊದಲ ಪಾಯಿಂಟ್ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಣ್ಣು ಅಗೆಯಲಾಗಿದೆ. ಆದರೆ, 8 ಅಡಿ ಆಳ ಅಗೆದರೂ ಅಲ್ಲಿ ಶವಗಳನ್ನು ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಸುಮಾರು 10 ಕಾರ್ಮಿಕರನ್ನು ಒಳಗೊಂಡ ತಂಡವು ಹಾರೆ, ಪಿಕಾಸಿ ಬಳಸಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಣ್ಣು ಅಗೆಯುವ ಕಾರ್ಯ ಆರಂಭಿಸಿತು. ನೇತ್ರಾವತಿ ನದಿಯಿಂದ 10 ಮೀಟರ್ ದೂರದಲ್ಲಿರುವ ಈ ಜಾಗವನ್ನು ಅಗೆದಂತೆ ನೀರು ಜಿನುಗಲಾರಂಭಿಸಿತು. ಜೊತೆಗೆ ಬಿಟ್ಟು ಬಿಟ್ಟು ಧಾರಾಕಾರ ಮಳೆಯೂ ಸುರಿಯುತ್ತಿತ್ತು, ಇದರಿಂದ ಅಗೆಯುವಿಕೆಗೆ ಅಡಚಣೆಯುಂಟಾಯಿತು. ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳು ಸಣ್ಣ ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ತರಿಸಿಕೊಂಡು ಅಗೆಯಿಸಿದರು. ಕೊನೆಗೆ ಶ್ವಾನದಳ ಕರೆತಂದು ಪರಿಶೀಲನೆ ನಡೆಸಿದರು. ಆದರೂ, ಶವಗಳನ್ನು ಹೂತಿರುವ ಬಗ್ಗೆ ಯಾವುದೇ ಕುರುಹು ಪತ್ತೆಯಾಗದ ಕಾರಣ ಮೊದಲ ದಿನದ ಅಗೆಯುವ ಕಾರ್ಯವನ್ನು ಸಂಜೆ 6ರ ವೇಳೆಗೆ ಸ್ಥಗಿತಗೊಳಿಸಲಾಯಿತು.

ಇಂದು ದೂರುದಾರ ತೋರಿಸಿದ ಎರಡನೇ ಪಾಯಿಂಟ್‌ನಿಂದ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ. ಈಗಾಗಲೇ ಗುರುತಿಸಿರುವ 12 ಪಾಯಿಂಟ್‌ಗಳಲ್ಲಿ ಅಗೆತ ಬಾಕಿಯಿದೆ.

ಮೂಲಗಳ ಪ್ರಕಾರ, ದೂರುದಾರ ತಲೆ ಬುರುಡೆಯೊಂದನ್ನು ತಂದಿರುವ ಜಾಗದಲ್ಲಿ ಇಂದು ಅಗೆತ ನಡೆಯಲಿದೆ. ಮಾನವ ಶ್ರಮದ ಮೂಲಕವೇ ಮಣ್ಣು ಅಗೆಯಲಾಗುತ್ತದೆ. ಏಕೆಂದರೆ, ಈ ಪಾಯಿಂಟ್‌ಗಳು ಮೀಸಲು ಅರಣ್ಯ ಪ್ರದೇಶದಲ್ಲಿವೆ. ಅಲ್ಲದೆ, ಅಲ್ಲಿ ನಿನ್ನೆಯಂತೆ ನೀರಿನ ಒರತೆ ಅಡ್ಡಿಯಾಗುವ ಸಾಧ್ಯತೆ ಕಡಿಮೆಯಿದೆ. ಒಂದು ವೇಳೆ ಹೂತಿಟ್ಟ ಶವಗಳ ಅಸ್ತಿಪಂಜರ ಇದ್ದರೆ, ಅದನ್ನು ಬಹಳ ಸೂಕ್ಷ್ಮವಾಗಿ ಮೇಲೆತ್ತಬೇಕಿದೆ.

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...