Homeಕರ್ನಾಟಕಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

ಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಶವಗಳ ಶೋಧ ಕಾರ್ಯ ಎರಡನೇ ದಿನವೂ ಮುಂದುವರಿಯಲಿದೆ. ವರದಿಗಳ ಪ್ರಕಾರ, ಇಂದು (ಬುಧವಾರ) ದೂರುದಾರ ತೋರಿಸಿದ ಮೂರು ಸ್ಥಳಗಳಲ್ಲಿ ಮಣ್ಣು ಅಗೆಯಲು ಎಸ್ಐಟಿ ನಿರ್ಧರಿಸಿದೆ.

ಈ ಪ್ರಕ್ರಿಯೆಗೆ ಸ್ಥಳೀಯ ಅಧಿಕಾರಿಗಳ ಸಹಕಾರ ಬೇಕಿದೆ. ಶಿಷ್ಟಾಚಾರದ ಪ್ರಕಾರ ಇದಕ್ಕೆ ಸಂಬಂಧಿತ ಅಧಿಕಾರಿಯಾದ ಪುತ್ತೂರಿನ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಅನುಮತಿ ನಿಡಬೇಕಿದೆ. ಸಿಬ್ಬಂದಿ ಲಭ್ಯತೆ ಮತ್ತು ಇತರ ಸಾಧ್ಯತೆಗಳನ್ನು ನೋಡಿಕೊಂಡು ಉತ್ಖನನಕ್ಕೆ ಅನುಮತಿ ನೀಡುವುದು ಎಸಿಗೆ ಬಿಟ್ಟ ವಿಚಾರವಾಗಿದೆ.

ನಿನ್ನೆ (ಮಂಗಳವಾರ) ದೂರುದಾರ ತೋರಿಸಿದ ಮೊದಲ ಪಾಯಿಂಟ್ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಣ್ಣು ಅಗೆಯಲಾಗಿದೆ. ಆದರೆ, 8 ಅಡಿ ಆಳ ಅಗೆದರೂ ಅಲ್ಲಿ ಶವಗಳನ್ನು ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಸುಮಾರು 10 ಕಾರ್ಮಿಕರನ್ನು ಒಳಗೊಂಡ ತಂಡವು ಹಾರೆ, ಪಿಕಾಸಿ ಬಳಸಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಣ್ಣು ಅಗೆಯುವ ಕಾರ್ಯ ಆರಂಭಿಸಿತು. ನೇತ್ರಾವತಿ ನದಿಯಿಂದ 10 ಮೀಟರ್ ದೂರದಲ್ಲಿರುವ ಈ ಜಾಗವನ್ನು ಅಗೆದಂತೆ ನೀರು ಜಿನುಗಲಾರಂಭಿಸಿತು. ಜೊತೆಗೆ ಬಿಟ್ಟು ಬಿಟ್ಟು ಧಾರಾಕಾರ ಮಳೆಯೂ ಸುರಿಯುತ್ತಿತ್ತು, ಇದರಿಂದ ಅಗೆಯುವಿಕೆಗೆ ಅಡಚಣೆಯುಂಟಾಯಿತು. ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳು ಸಣ್ಣ ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ತರಿಸಿಕೊಂಡು ಅಗೆಯಿಸಿದರು. ಕೊನೆಗೆ ಶ್ವಾನದಳ ಕರೆತಂದು ಪರಿಶೀಲನೆ ನಡೆಸಿದರು. ಆದರೂ, ಶವಗಳನ್ನು ಹೂತಿರುವ ಬಗ್ಗೆ ಯಾವುದೇ ಕುರುಹು ಪತ್ತೆಯಾಗದ ಕಾರಣ ಮೊದಲ ದಿನದ ಅಗೆಯುವ ಕಾರ್ಯವನ್ನು ಸಂಜೆ 6ರ ವೇಳೆಗೆ ಸ್ಥಗಿತಗೊಳಿಸಲಾಯಿತು.

ಇಂದು ದೂರುದಾರ ತೋರಿಸಿದ ಎರಡನೇ ಪಾಯಿಂಟ್‌ನಿಂದ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ. ಈಗಾಗಲೇ ಗುರುತಿಸಿರುವ 12 ಪಾಯಿಂಟ್‌ಗಳಲ್ಲಿ ಅಗೆತ ಬಾಕಿಯಿದೆ.

ಮೂಲಗಳ ಪ್ರಕಾರ, ದೂರುದಾರ ತಲೆ ಬುರುಡೆಯೊಂದನ್ನು ತಂದಿರುವ ಜಾಗದಲ್ಲಿ ಇಂದು ಅಗೆತ ನಡೆಯಲಿದೆ. ಮಾನವ ಶ್ರಮದ ಮೂಲಕವೇ ಮಣ್ಣು ಅಗೆಯಲಾಗುತ್ತದೆ. ಏಕೆಂದರೆ, ಈ ಪಾಯಿಂಟ್‌ಗಳು ಮೀಸಲು ಅರಣ್ಯ ಪ್ರದೇಶದಲ್ಲಿವೆ. ಅಲ್ಲದೆ, ಅಲ್ಲಿ ನಿನ್ನೆಯಂತೆ ನೀರಿನ ಒರತೆ ಅಡ್ಡಿಯಾಗುವ ಸಾಧ್ಯತೆ ಕಡಿಮೆಯಿದೆ. ಒಂದು ವೇಳೆ ಹೂತಿಟ್ಟ ಶವಗಳ ಅಸ್ತಿಪಂಜರ ಇದ್ದರೆ, ಅದನ್ನು ಬಹಳ ಸೂಕ್ಷ್ಮವಾಗಿ ಮೇಲೆತ್ತಬೇಕಿದೆ.

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...