Homeಕರ್ನಾಟಕಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

ಧರ್ಮಸ್ಥಳದಲ್ಲಿ ಶವಗಳ ಶೋಧ: ಇಂದು ಮೂರು ಸ್ಥಳಗಳಲ್ಲಿ ಮಣ್ಣು ಅಗೆಯುವ ಸಾಧ್ಯತೆ

- Advertisement -
- Advertisement -

ಧರ್ಮಸ್ಥಳದಲ್ಲಿ ಶವಗಳ ಶೋಧ ಕಾರ್ಯ ಎರಡನೇ ದಿನವೂ ಮುಂದುವರಿಯಲಿದೆ. ವರದಿಗಳ ಪ್ರಕಾರ, ಇಂದು (ಬುಧವಾರ) ದೂರುದಾರ ತೋರಿಸಿದ ಮೂರು ಸ್ಥಳಗಳಲ್ಲಿ ಮಣ್ಣು ಅಗೆಯಲು ಎಸ್ಐಟಿ ನಿರ್ಧರಿಸಿದೆ.

ಈ ಪ್ರಕ್ರಿಯೆಗೆ ಸ್ಥಳೀಯ ಅಧಿಕಾರಿಗಳ ಸಹಕಾರ ಬೇಕಿದೆ. ಶಿಷ್ಟಾಚಾರದ ಪ್ರಕಾರ ಇದಕ್ಕೆ ಸಂಬಂಧಿತ ಅಧಿಕಾರಿಯಾದ ಪುತ್ತೂರಿನ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಅನುಮತಿ ನಿಡಬೇಕಿದೆ. ಸಿಬ್ಬಂದಿ ಲಭ್ಯತೆ ಮತ್ತು ಇತರ ಸಾಧ್ಯತೆಗಳನ್ನು ನೋಡಿಕೊಂಡು ಉತ್ಖನನಕ್ಕೆ ಅನುಮತಿ ನೀಡುವುದು ಎಸಿಗೆ ಬಿಟ್ಟ ವಿಚಾರವಾಗಿದೆ.

ನಿನ್ನೆ (ಮಂಗಳವಾರ) ದೂರುದಾರ ತೋರಿಸಿದ ಮೊದಲ ಪಾಯಿಂಟ್ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಣ್ಣು ಅಗೆಯಲಾಗಿದೆ. ಆದರೆ, 8 ಅಡಿ ಆಳ ಅಗೆದರೂ ಅಲ್ಲಿ ಶವಗಳನ್ನು ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಸುಮಾರು 10 ಕಾರ್ಮಿಕರನ್ನು ಒಳಗೊಂಡ ತಂಡವು ಹಾರೆ, ಪಿಕಾಸಿ ಬಳಸಿ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಣ್ಣು ಅಗೆಯುವ ಕಾರ್ಯ ಆರಂಭಿಸಿತು. ನೇತ್ರಾವತಿ ನದಿಯಿಂದ 10 ಮೀಟರ್ ದೂರದಲ್ಲಿರುವ ಈ ಜಾಗವನ್ನು ಅಗೆದಂತೆ ನೀರು ಜಿನುಗಲಾರಂಭಿಸಿತು. ಜೊತೆಗೆ ಬಿಟ್ಟು ಬಿಟ್ಟು ಧಾರಾಕಾರ ಮಳೆಯೂ ಸುರಿಯುತ್ತಿತ್ತು, ಇದರಿಂದ ಅಗೆಯುವಿಕೆಗೆ ಅಡಚಣೆಯುಂಟಾಯಿತು. ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳು ಸಣ್ಣ ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ತರಿಸಿಕೊಂಡು ಅಗೆಯಿಸಿದರು. ಕೊನೆಗೆ ಶ್ವಾನದಳ ಕರೆತಂದು ಪರಿಶೀಲನೆ ನಡೆಸಿದರು. ಆದರೂ, ಶವಗಳನ್ನು ಹೂತಿರುವ ಬಗ್ಗೆ ಯಾವುದೇ ಕುರುಹು ಪತ್ತೆಯಾಗದ ಕಾರಣ ಮೊದಲ ದಿನದ ಅಗೆಯುವ ಕಾರ್ಯವನ್ನು ಸಂಜೆ 6ರ ವೇಳೆಗೆ ಸ್ಥಗಿತಗೊಳಿಸಲಾಯಿತು.

ಇಂದು ದೂರುದಾರ ತೋರಿಸಿದ ಎರಡನೇ ಪಾಯಿಂಟ್‌ನಿಂದ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ. ಈಗಾಗಲೇ ಗುರುತಿಸಿರುವ 12 ಪಾಯಿಂಟ್‌ಗಳಲ್ಲಿ ಅಗೆತ ಬಾಕಿಯಿದೆ.

ಮೂಲಗಳ ಪ್ರಕಾರ, ದೂರುದಾರ ತಲೆ ಬುರುಡೆಯೊಂದನ್ನು ತಂದಿರುವ ಜಾಗದಲ್ಲಿ ಇಂದು ಅಗೆತ ನಡೆಯಲಿದೆ. ಮಾನವ ಶ್ರಮದ ಮೂಲಕವೇ ಮಣ್ಣು ಅಗೆಯಲಾಗುತ್ತದೆ. ಏಕೆಂದರೆ, ಈ ಪಾಯಿಂಟ್‌ಗಳು ಮೀಸಲು ಅರಣ್ಯ ಪ್ರದೇಶದಲ್ಲಿವೆ. ಅಲ್ಲದೆ, ಅಲ್ಲಿ ನಿನ್ನೆಯಂತೆ ನೀರಿನ ಒರತೆ ಅಡ್ಡಿಯಾಗುವ ಸಾಧ್ಯತೆ ಕಡಿಮೆಯಿದೆ. ಒಂದು ವೇಳೆ ಹೂತಿಟ್ಟ ಶವಗಳ ಅಸ್ತಿಪಂಜರ ಇದ್ದರೆ, ಅದನ್ನು ಬಹಳ ಸೂಕ್ಷ್ಮವಾಗಿ ಮೇಲೆತ್ತಬೇಕಿದೆ.

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...