Homeಮುಖಪುಟಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ವೈದ್ಯರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೋವಿಡ್ ಇದ್ದ ಕಾರಣ ಎರಡು ವರ್ಷ ದುಡಿದಿದ್ದೇವೆ. ಮೇ ತಿಂಗಳಿನಲ್ಲಿಯೇ ಕಡ್ಡಾಯ ಸೇವೆಗೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಅದು ಆಗಲಿಲ್ಲ, ಹೋಗಲಿ ಈಗಲಾದರೂ ನೇಮಕಾತಿ ಮಾಡಿಕೊಳ್ಳಿ ಎಂದರೆ ನಾವು ಪಡೆದ ಮೆರಿಟ್‌ಗೂ ಖಾಲಿ ಇರುವ ಹುದ್ದೆಗಳಿಗೂ ತಾಳೆಯೇ ಆಗುತ್ತಿಲ್ಲ. ನಾನು ಎಂಡಿ ಎಮರ್ಜೆನ್ಸಿ ಮೆಡಿಸನ್ ಮಾಡಿದ್ದೀನಿ. ಬಿಎಂಸಿಯಲ್ಲಿ ಎರಡು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಎರಡು ಖಾಲಿ ಹುದ್ದೆ ಇವೆ ಎಂದು ನಮಗೆ ಗೊತ್ತು. ಆದರೆ ಅಲ್ಲಿ ಆಯ್ಕೆ ಮಾಡಿಕೊಳ್ಳಲು ಹೋದರೆ ತೋರಿಸುತ್ತಿಲ್ಲ.. ಇದು ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸಿರುವ ತಜ್ಞ ವೈದ್ಯೆಯೊಬ್ಬರ ಅಳಲಾಗಿದೆ..

ಸ್ನಾತಕೋತ್ತರ ವೈದ್ಯಕೀಯ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಲ್ಲಿ ಪದವಿ ಪಡೆದಿರುವ ತಜ್ಞ ವೈದ್ಯರನ್ನು ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜಿಸುವ ಪ್ರಕ್ರಿಯೆ ನಾಲ್ಕು ತಿಂಗಳು ವಿಳಂಬವಾಗಿದೆ. ಮೆರಿಟ್ ಲಿಸ್ಟ್‌ಗೆ ಅನುಗುಣವಾಗಿ ಸೀಟು ಆಯ್ಕೆ ಮಾಡಿಕೊಳ್ಳಲು ಹೋದರೆ ಖಾಲಿ ಹುದ್ದೆಗಳೇ ತೋರಿಸುತ್ತಿಲ್ಲ. ಒಂದು ಕಾಲೇಜಿನಲ್ಲಿ 30 ಖಾಲಿ ಹುದ್ದೆಗಳಿದ್ದರೂ ಕೇವಲ 05 ಹುದ್ದೆಗಳು ಮಾತ್ರ ತೋರಿಸುತ್ತಿದೆ. ಇದರ ಹಿಂದೆ ಸೀಟ್ ಬ್ಲಾಕಿಂಗ್ ದಂಧೆ ನಡೆದಿರಬಹುದು ಎಂದು ವೈದ್ಯರು ಆರೋಪಿಸಿದ್ದಾರೆ.

ಈ ಕುರಿತು ದಯಾನಂದ್ ಸಾಗರ್ ಎಂಬುವವರು 18 ನಿಮಿಷದ ವಿಡಿಯೋ ಒಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ, ಮೆರಿಟ್ ಪಡೆದವರಿಗೆ ತಮಗೆ ಬೇಕಾದ ಕಡೆ ಆಯ್ಕೆ ಸಿಗುತ್ತಿಲ್ಲ, ಪ್ರಮುಖ ನಗರ ಮತ್ತು ಪ್ರಮುಖ ಕಾಲೇಜುಗಳಲ್ಲಿ ಖಾಲಿ ಹುದ್ದೆ ಮುಚ್ಚಿಡುವ ಮೂಲಕ ಅನ್ಯಾಯವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ 40 ಹುದ್ದೆಗಳಿ ಖಾಲಿ ಇವೆ. ಆದರೆ ಸ್ಥಳ ಆಯ್ಕೆಗೆ ಲಾಗಿನ್ ಆದರೆ ಕೇವಲ 10 ಹುದ್ದೆಗಳನ್ನು ಮಾತ್ರ ತೋರಿಸಲಾಗುತ್ತಿದೆ. ಉಳಿದ 30 ಹುದ್ದೆಗಳನ್ನು ಏಕೆ ಮುಚ್ಚಿಡಲಾಗಿದೆ? ಅದೇ ರೀತಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ವಿಭಾಗದಲ್ಲಿ 19 ಖಾಲಿ ಹುದ್ದೆಗಳಿವೆ. ಆದರೆ ಒಂದೇ ಒಂದನ್ನು ಮಾತ್ರ ತೋರಿಸುತ್ತಿದೆ. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಎರಡು ಹುದ್ದೆ ಇದ್ದರೂ ಒಂದು ಮಾತ್ರ ತೋರಿಸುತ್ತಿದೆ. ಈ ರೀತಿಯಾಗಿ ಕರ್ನಾಟಕದಲ್ಲಿರುವ ಒಟ್ಟು 14 ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಷ್ಟು ಸೀಟುಗಳನ್ನು ಮುಚ್ಚಿಟ್ಟಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದ ಹಲವು ಮೆಡಿಕಲ್ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅಲ್ಲಿಗೆ ನೇಮಕಾತಿ ಮಾಡುತ್ತಿಲ್ಲ, ಬದಲಿಗೆ ಪ್ರವೇಟ್, ಮ್ಯಾನೇಜ್ ಮೆಂಟ್ ಸೇರಿ ದುಡ್ಡು ಕೊಟ್ಟವರಿಗೆ ಈ ಹುದ್ದೆಗಳನ್ನು ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೈದ್ಯೆಯೊಬ್ಬರು, “2022ರ ಮೇ ಒಳಗೆ ನಮ್ಮ ಕಡ್ಡಾಯ ಸೇವೆ ಸೇರಿ ಕೋರ್ಸ್ ಮುಗಿದಿರಬೇಕು. ಆದರೆ ಈ ರೀತಿ ವಿಳಂಬವಾಗುತ್ತಿರುವುದು ಹಲವರ ವೃತ್ತಿ ಬದುಕಿನಲ್ಲಿ ಕೆಟ್ಟ ಪರಿಣಾಮ ಬೀರಲಿದೆ. ನಾವು ರಾಜ್ಯದ ಯಾವುದೇ ಭಾಗಕ್ಕೆ ಹೋಗಿ ಸೇವೆ ಮಾಡಲು ಸಿದ್ದರಿದ್ದೇವೆ. ಆದರೆ ಮೆರಿಟ್ ಪಡೆದವರು ಸೌಲಭ್ಯ ಇಲ್ಲದೆ ಕಡೆ ಹೋಗಬೇಕು ಮತ್ತು ಲಂಚ ಕೊಟ್ಟವರು ಬೆಂಗಳೂರಿನಲ್ಲಿಯೇ ಕೆಲಸ ಮಾಡಬಹುದು ಎಂಬುದು ಯಾವ ನ್ಯಾಯ? ಅದಕ್ಕಾಗಿ ವಕೀಲರ ಮೂಲಕ ಹೈಕೋರ್ಟ್‌ನಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುತ್ತೇವೆ” ಎಂದಿದ್ದಾರೆ.

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...