Homeಮುಖಪುಟಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ವೈದ್ಯರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೋವಿಡ್ ಇದ್ದ ಕಾರಣ ಎರಡು ವರ್ಷ ದುಡಿದಿದ್ದೇವೆ. ಮೇ ತಿಂಗಳಿನಲ್ಲಿಯೇ ಕಡ್ಡಾಯ ಸೇವೆಗೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಅದು ಆಗಲಿಲ್ಲ, ಹೋಗಲಿ ಈಗಲಾದರೂ ನೇಮಕಾತಿ ಮಾಡಿಕೊಳ್ಳಿ ಎಂದರೆ ನಾವು ಪಡೆದ ಮೆರಿಟ್‌ಗೂ ಖಾಲಿ ಇರುವ ಹುದ್ದೆಗಳಿಗೂ ತಾಳೆಯೇ ಆಗುತ್ತಿಲ್ಲ. ನಾನು ಎಂಡಿ ಎಮರ್ಜೆನ್ಸಿ ಮೆಡಿಸನ್ ಮಾಡಿದ್ದೀನಿ. ಬಿಎಂಸಿಯಲ್ಲಿ ಎರಡು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಎರಡು ಖಾಲಿ ಹುದ್ದೆ ಇವೆ ಎಂದು ನಮಗೆ ಗೊತ್ತು. ಆದರೆ ಅಲ್ಲಿ ಆಯ್ಕೆ ಮಾಡಿಕೊಳ್ಳಲು ಹೋದರೆ ತೋರಿಸುತ್ತಿಲ್ಲ.. ಇದು ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸಿರುವ ತಜ್ಞ ವೈದ್ಯೆಯೊಬ್ಬರ ಅಳಲಾಗಿದೆ..

ಸ್ನಾತಕೋತ್ತರ ವೈದ್ಯಕೀಯ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಲ್ಲಿ ಪದವಿ ಪಡೆದಿರುವ ತಜ್ಞ ವೈದ್ಯರನ್ನು ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜಿಸುವ ಪ್ರಕ್ರಿಯೆ ನಾಲ್ಕು ತಿಂಗಳು ವಿಳಂಬವಾಗಿದೆ. ಮೆರಿಟ್ ಲಿಸ್ಟ್‌ಗೆ ಅನುಗುಣವಾಗಿ ಸೀಟು ಆಯ್ಕೆ ಮಾಡಿಕೊಳ್ಳಲು ಹೋದರೆ ಖಾಲಿ ಹುದ್ದೆಗಳೇ ತೋರಿಸುತ್ತಿಲ್ಲ. ಒಂದು ಕಾಲೇಜಿನಲ್ಲಿ 30 ಖಾಲಿ ಹುದ್ದೆಗಳಿದ್ದರೂ ಕೇವಲ 05 ಹುದ್ದೆಗಳು ಮಾತ್ರ ತೋರಿಸುತ್ತಿದೆ. ಇದರ ಹಿಂದೆ ಸೀಟ್ ಬ್ಲಾಕಿಂಗ್ ದಂಧೆ ನಡೆದಿರಬಹುದು ಎಂದು ವೈದ್ಯರು ಆರೋಪಿಸಿದ್ದಾರೆ.

ಈ ಕುರಿತು ದಯಾನಂದ್ ಸಾಗರ್ ಎಂಬುವವರು 18 ನಿಮಿಷದ ವಿಡಿಯೋ ಒಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ, ಮೆರಿಟ್ ಪಡೆದವರಿಗೆ ತಮಗೆ ಬೇಕಾದ ಕಡೆ ಆಯ್ಕೆ ಸಿಗುತ್ತಿಲ್ಲ, ಪ್ರಮುಖ ನಗರ ಮತ್ತು ಪ್ರಮುಖ ಕಾಲೇಜುಗಳಲ್ಲಿ ಖಾಲಿ ಹುದ್ದೆ ಮುಚ್ಚಿಡುವ ಮೂಲಕ ಅನ್ಯಾಯವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ 40 ಹುದ್ದೆಗಳಿ ಖಾಲಿ ಇವೆ. ಆದರೆ ಸ್ಥಳ ಆಯ್ಕೆಗೆ ಲಾಗಿನ್ ಆದರೆ ಕೇವಲ 10 ಹುದ್ದೆಗಳನ್ನು ಮಾತ್ರ ತೋರಿಸಲಾಗುತ್ತಿದೆ. ಉಳಿದ 30 ಹುದ್ದೆಗಳನ್ನು ಏಕೆ ಮುಚ್ಚಿಡಲಾಗಿದೆ? ಅದೇ ರೀತಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ವಿಭಾಗದಲ್ಲಿ 19 ಖಾಲಿ ಹುದ್ದೆಗಳಿವೆ. ಆದರೆ ಒಂದೇ ಒಂದನ್ನು ಮಾತ್ರ ತೋರಿಸುತ್ತಿದೆ. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಎರಡು ಹುದ್ದೆ ಇದ್ದರೂ ಒಂದು ಮಾತ್ರ ತೋರಿಸುತ್ತಿದೆ. ಈ ರೀತಿಯಾಗಿ ಕರ್ನಾಟಕದಲ್ಲಿರುವ ಒಟ್ಟು 14 ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಷ್ಟು ಸೀಟುಗಳನ್ನು ಮುಚ್ಚಿಟ್ಟಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದ ಹಲವು ಮೆಡಿಕಲ್ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅಲ್ಲಿಗೆ ನೇಮಕಾತಿ ಮಾಡುತ್ತಿಲ್ಲ, ಬದಲಿಗೆ ಪ್ರವೇಟ್, ಮ್ಯಾನೇಜ್ ಮೆಂಟ್ ಸೇರಿ ದುಡ್ಡು ಕೊಟ್ಟವರಿಗೆ ಈ ಹುದ್ದೆಗಳನ್ನು ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೈದ್ಯೆಯೊಬ್ಬರು, “2022ರ ಮೇ ಒಳಗೆ ನಮ್ಮ ಕಡ್ಡಾಯ ಸೇವೆ ಸೇರಿ ಕೋರ್ಸ್ ಮುಗಿದಿರಬೇಕು. ಆದರೆ ಈ ರೀತಿ ವಿಳಂಬವಾಗುತ್ತಿರುವುದು ಹಲವರ ವೃತ್ತಿ ಬದುಕಿನಲ್ಲಿ ಕೆಟ್ಟ ಪರಿಣಾಮ ಬೀರಲಿದೆ. ನಾವು ರಾಜ್ಯದ ಯಾವುದೇ ಭಾಗಕ್ಕೆ ಹೋಗಿ ಸೇವೆ ಮಾಡಲು ಸಿದ್ದರಿದ್ದೇವೆ. ಆದರೆ ಮೆರಿಟ್ ಪಡೆದವರು ಸೌಲಭ್ಯ ಇಲ್ಲದೆ ಕಡೆ ಹೋಗಬೇಕು ಮತ್ತು ಲಂಚ ಕೊಟ್ಟವರು ಬೆಂಗಳೂರಿನಲ್ಲಿಯೇ ಕೆಲಸ ಮಾಡಬಹುದು ಎಂಬುದು ಯಾವ ನ್ಯಾಯ? ಅದಕ್ಕಾಗಿ ವಕೀಲರ ಮೂಲಕ ಹೈಕೋರ್ಟ್‌ನಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುತ್ತೇವೆ” ಎಂದಿದ್ದಾರೆ.

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...