Homeಮುಖಪುಟಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ವೈದ್ಯರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೋವಿಡ್ ಇದ್ದ ಕಾರಣ ಎರಡು ವರ್ಷ ದುಡಿದಿದ್ದೇವೆ. ಮೇ ತಿಂಗಳಿನಲ್ಲಿಯೇ ಕಡ್ಡಾಯ ಸೇವೆಗೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಅದು ಆಗಲಿಲ್ಲ, ಹೋಗಲಿ ಈಗಲಾದರೂ ನೇಮಕಾತಿ ಮಾಡಿಕೊಳ್ಳಿ ಎಂದರೆ ನಾವು ಪಡೆದ ಮೆರಿಟ್‌ಗೂ ಖಾಲಿ ಇರುವ ಹುದ್ದೆಗಳಿಗೂ ತಾಳೆಯೇ ಆಗುತ್ತಿಲ್ಲ. ನಾನು ಎಂಡಿ ಎಮರ್ಜೆನ್ಸಿ ಮೆಡಿಸನ್ ಮಾಡಿದ್ದೀನಿ. ಬಿಎಂಸಿಯಲ್ಲಿ ಎರಡು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಎರಡು ಖಾಲಿ ಹುದ್ದೆ ಇವೆ ಎಂದು ನಮಗೆ ಗೊತ್ತು. ಆದರೆ ಅಲ್ಲಿ ಆಯ್ಕೆ ಮಾಡಿಕೊಳ್ಳಲು ಹೋದರೆ ತೋರಿಸುತ್ತಿಲ್ಲ.. ಇದು ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸಿರುವ ತಜ್ಞ ವೈದ್ಯೆಯೊಬ್ಬರ ಅಳಲಾಗಿದೆ..

ಸ್ನಾತಕೋತ್ತರ ವೈದ್ಯಕೀಯ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಲ್ಲಿ ಪದವಿ ಪಡೆದಿರುವ ತಜ್ಞ ವೈದ್ಯರನ್ನು ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜಿಸುವ ಪ್ರಕ್ರಿಯೆ ನಾಲ್ಕು ತಿಂಗಳು ವಿಳಂಬವಾಗಿದೆ. ಮೆರಿಟ್ ಲಿಸ್ಟ್‌ಗೆ ಅನುಗುಣವಾಗಿ ಸೀಟು ಆಯ್ಕೆ ಮಾಡಿಕೊಳ್ಳಲು ಹೋದರೆ ಖಾಲಿ ಹುದ್ದೆಗಳೇ ತೋರಿಸುತ್ತಿಲ್ಲ. ಒಂದು ಕಾಲೇಜಿನಲ್ಲಿ 30 ಖಾಲಿ ಹುದ್ದೆಗಳಿದ್ದರೂ ಕೇವಲ 05 ಹುದ್ದೆಗಳು ಮಾತ್ರ ತೋರಿಸುತ್ತಿದೆ. ಇದರ ಹಿಂದೆ ಸೀಟ್ ಬ್ಲಾಕಿಂಗ್ ದಂಧೆ ನಡೆದಿರಬಹುದು ಎಂದು ವೈದ್ಯರು ಆರೋಪಿಸಿದ್ದಾರೆ.

ಈ ಕುರಿತು ದಯಾನಂದ್ ಸಾಗರ್ ಎಂಬುವವರು 18 ನಿಮಿಷದ ವಿಡಿಯೋ ಒಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ, ಮೆರಿಟ್ ಪಡೆದವರಿಗೆ ತಮಗೆ ಬೇಕಾದ ಕಡೆ ಆಯ್ಕೆ ಸಿಗುತ್ತಿಲ್ಲ, ಪ್ರಮುಖ ನಗರ ಮತ್ತು ಪ್ರಮುಖ ಕಾಲೇಜುಗಳಲ್ಲಿ ಖಾಲಿ ಹುದ್ದೆ ಮುಚ್ಚಿಡುವ ಮೂಲಕ ಅನ್ಯಾಯವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ 40 ಹುದ್ದೆಗಳಿ ಖಾಲಿ ಇವೆ. ಆದರೆ ಸ್ಥಳ ಆಯ್ಕೆಗೆ ಲಾಗಿನ್ ಆದರೆ ಕೇವಲ 10 ಹುದ್ದೆಗಳನ್ನು ಮಾತ್ರ ತೋರಿಸಲಾಗುತ್ತಿದೆ. ಉಳಿದ 30 ಹುದ್ದೆಗಳನ್ನು ಏಕೆ ಮುಚ್ಚಿಡಲಾಗಿದೆ? ಅದೇ ರೀತಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ವಿಭಾಗದಲ್ಲಿ 19 ಖಾಲಿ ಹುದ್ದೆಗಳಿವೆ. ಆದರೆ ಒಂದೇ ಒಂದನ್ನು ಮಾತ್ರ ತೋರಿಸುತ್ತಿದೆ. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಎರಡು ಹುದ್ದೆ ಇದ್ದರೂ ಒಂದು ಮಾತ್ರ ತೋರಿಸುತ್ತಿದೆ. ಈ ರೀತಿಯಾಗಿ ಕರ್ನಾಟಕದಲ್ಲಿರುವ ಒಟ್ಟು 14 ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಷ್ಟು ಸೀಟುಗಳನ್ನು ಮುಚ್ಚಿಟ್ಟಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದ ಹಲವು ಮೆಡಿಕಲ್ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅಲ್ಲಿಗೆ ನೇಮಕಾತಿ ಮಾಡುತ್ತಿಲ್ಲ, ಬದಲಿಗೆ ಪ್ರವೇಟ್, ಮ್ಯಾನೇಜ್ ಮೆಂಟ್ ಸೇರಿ ದುಡ್ಡು ಕೊಟ್ಟವರಿಗೆ ಈ ಹುದ್ದೆಗಳನ್ನು ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೈದ್ಯೆಯೊಬ್ಬರು, “2022ರ ಮೇ ಒಳಗೆ ನಮ್ಮ ಕಡ್ಡಾಯ ಸೇವೆ ಸೇರಿ ಕೋರ್ಸ್ ಮುಗಿದಿರಬೇಕು. ಆದರೆ ಈ ರೀತಿ ವಿಳಂಬವಾಗುತ್ತಿರುವುದು ಹಲವರ ವೃತ್ತಿ ಬದುಕಿನಲ್ಲಿ ಕೆಟ್ಟ ಪರಿಣಾಮ ಬೀರಲಿದೆ. ನಾವು ರಾಜ್ಯದ ಯಾವುದೇ ಭಾಗಕ್ಕೆ ಹೋಗಿ ಸೇವೆ ಮಾಡಲು ಸಿದ್ದರಿದ್ದೇವೆ. ಆದರೆ ಮೆರಿಟ್ ಪಡೆದವರು ಸೌಲಭ್ಯ ಇಲ್ಲದೆ ಕಡೆ ಹೋಗಬೇಕು ಮತ್ತು ಲಂಚ ಕೊಟ್ಟವರು ಬೆಂಗಳೂರಿನಲ್ಲಿಯೇ ಕೆಲಸ ಮಾಡಬಹುದು ಎಂಬುದು ಯಾವ ನ್ಯಾಯ? ಅದಕ್ಕಾಗಿ ವಕೀಲರ ಮೂಲಕ ಹೈಕೋರ್ಟ್‌ನಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುತ್ತೇವೆ” ಎಂದಿದ್ದಾರೆ.

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...