Homeಮುಖಪುಟಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ವೈದ್ಯರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೋವಿಡ್ ಇದ್ದ ಕಾರಣ ಎರಡು ವರ್ಷ ದುಡಿದಿದ್ದೇವೆ. ಮೇ ತಿಂಗಳಿನಲ್ಲಿಯೇ ಕಡ್ಡಾಯ ಸೇವೆಗೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಅದು ಆಗಲಿಲ್ಲ, ಹೋಗಲಿ ಈಗಲಾದರೂ ನೇಮಕಾತಿ ಮಾಡಿಕೊಳ್ಳಿ ಎಂದರೆ ನಾವು ಪಡೆದ ಮೆರಿಟ್‌ಗೂ ಖಾಲಿ ಇರುವ ಹುದ್ದೆಗಳಿಗೂ ತಾಳೆಯೇ ಆಗುತ್ತಿಲ್ಲ. ನಾನು ಎಂಡಿ ಎಮರ್ಜೆನ್ಸಿ ಮೆಡಿಸನ್ ಮಾಡಿದ್ದೀನಿ. ಬಿಎಂಸಿಯಲ್ಲಿ ಎರಡು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಎರಡು ಖಾಲಿ ಹುದ್ದೆ ಇವೆ ಎಂದು ನಮಗೆ ಗೊತ್ತು. ಆದರೆ ಅಲ್ಲಿ ಆಯ್ಕೆ ಮಾಡಿಕೊಳ್ಳಲು ಹೋದರೆ ತೋರಿಸುತ್ತಿಲ್ಲ.. ಇದು ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸಿರುವ ತಜ್ಞ ವೈದ್ಯೆಯೊಬ್ಬರ ಅಳಲಾಗಿದೆ..

ಸ್ನಾತಕೋತ್ತರ ವೈದ್ಯಕೀಯ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಲ್ಲಿ ಪದವಿ ಪಡೆದಿರುವ ತಜ್ಞ ವೈದ್ಯರನ್ನು ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜಿಸುವ ಪ್ರಕ್ರಿಯೆ ನಾಲ್ಕು ತಿಂಗಳು ವಿಳಂಬವಾಗಿದೆ. ಮೆರಿಟ್ ಲಿಸ್ಟ್‌ಗೆ ಅನುಗುಣವಾಗಿ ಸೀಟು ಆಯ್ಕೆ ಮಾಡಿಕೊಳ್ಳಲು ಹೋದರೆ ಖಾಲಿ ಹುದ್ದೆಗಳೇ ತೋರಿಸುತ್ತಿಲ್ಲ. ಒಂದು ಕಾಲೇಜಿನಲ್ಲಿ 30 ಖಾಲಿ ಹುದ್ದೆಗಳಿದ್ದರೂ ಕೇವಲ 05 ಹುದ್ದೆಗಳು ಮಾತ್ರ ತೋರಿಸುತ್ತಿದೆ. ಇದರ ಹಿಂದೆ ಸೀಟ್ ಬ್ಲಾಕಿಂಗ್ ದಂಧೆ ನಡೆದಿರಬಹುದು ಎಂದು ವೈದ್ಯರು ಆರೋಪಿಸಿದ್ದಾರೆ.

ಈ ಕುರಿತು ದಯಾನಂದ್ ಸಾಗರ್ ಎಂಬುವವರು 18 ನಿಮಿಷದ ವಿಡಿಯೋ ಒಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ, ಮೆರಿಟ್ ಪಡೆದವರಿಗೆ ತಮಗೆ ಬೇಕಾದ ಕಡೆ ಆಯ್ಕೆ ಸಿಗುತ್ತಿಲ್ಲ, ಪ್ರಮುಖ ನಗರ ಮತ್ತು ಪ್ರಮುಖ ಕಾಲೇಜುಗಳಲ್ಲಿ ಖಾಲಿ ಹುದ್ದೆ ಮುಚ್ಚಿಡುವ ಮೂಲಕ ಅನ್ಯಾಯವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ 40 ಹುದ್ದೆಗಳಿ ಖಾಲಿ ಇವೆ. ಆದರೆ ಸ್ಥಳ ಆಯ್ಕೆಗೆ ಲಾಗಿನ್ ಆದರೆ ಕೇವಲ 10 ಹುದ್ದೆಗಳನ್ನು ಮಾತ್ರ ತೋರಿಸಲಾಗುತ್ತಿದೆ. ಉಳಿದ 30 ಹುದ್ದೆಗಳನ್ನು ಏಕೆ ಮುಚ್ಚಿಡಲಾಗಿದೆ? ಅದೇ ರೀತಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ವಿಭಾಗದಲ್ಲಿ 19 ಖಾಲಿ ಹುದ್ದೆಗಳಿವೆ. ಆದರೆ ಒಂದೇ ಒಂದನ್ನು ಮಾತ್ರ ತೋರಿಸುತ್ತಿದೆ. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಎರಡು ಹುದ್ದೆ ಇದ್ದರೂ ಒಂದು ಮಾತ್ರ ತೋರಿಸುತ್ತಿದೆ. ಈ ರೀತಿಯಾಗಿ ಕರ್ನಾಟಕದಲ್ಲಿರುವ ಒಟ್ಟು 14 ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಷ್ಟು ಸೀಟುಗಳನ್ನು ಮುಚ್ಚಿಟ್ಟಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದ ಹಲವು ಮೆಡಿಕಲ್ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅಲ್ಲಿಗೆ ನೇಮಕಾತಿ ಮಾಡುತ್ತಿಲ್ಲ, ಬದಲಿಗೆ ಪ್ರವೇಟ್, ಮ್ಯಾನೇಜ್ ಮೆಂಟ್ ಸೇರಿ ದುಡ್ಡು ಕೊಟ್ಟವರಿಗೆ ಈ ಹುದ್ದೆಗಳನ್ನು ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೈದ್ಯೆಯೊಬ್ಬರು, “2022ರ ಮೇ ಒಳಗೆ ನಮ್ಮ ಕಡ್ಡಾಯ ಸೇವೆ ಸೇರಿ ಕೋರ್ಸ್ ಮುಗಿದಿರಬೇಕು. ಆದರೆ ಈ ರೀತಿ ವಿಳಂಬವಾಗುತ್ತಿರುವುದು ಹಲವರ ವೃತ್ತಿ ಬದುಕಿನಲ್ಲಿ ಕೆಟ್ಟ ಪರಿಣಾಮ ಬೀರಲಿದೆ. ನಾವು ರಾಜ್ಯದ ಯಾವುದೇ ಭಾಗಕ್ಕೆ ಹೋಗಿ ಸೇವೆ ಮಾಡಲು ಸಿದ್ದರಿದ್ದೇವೆ. ಆದರೆ ಮೆರಿಟ್ ಪಡೆದವರು ಸೌಲಭ್ಯ ಇಲ್ಲದೆ ಕಡೆ ಹೋಗಬೇಕು ಮತ್ತು ಲಂಚ ಕೊಟ್ಟವರು ಬೆಂಗಳೂರಿನಲ್ಲಿಯೇ ಕೆಲಸ ಮಾಡಬಹುದು ಎಂಬುದು ಯಾವ ನ್ಯಾಯ? ಅದಕ್ಕಾಗಿ ವಕೀಲರ ಮೂಲಕ ಹೈಕೋರ್ಟ್‌ನಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುತ್ತೇವೆ” ಎಂದಿದ್ದಾರೆ.

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...