Homeಮುಖಪುಟಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ವೈದ್ಯರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೋವಿಡ್ ಇದ್ದ ಕಾರಣ ಎರಡು ವರ್ಷ ದುಡಿದಿದ್ದೇವೆ. ಮೇ ತಿಂಗಳಿನಲ್ಲಿಯೇ ಕಡ್ಡಾಯ ಸೇವೆಗೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಅದು ಆಗಲಿಲ್ಲ, ಹೋಗಲಿ ಈಗಲಾದರೂ ನೇಮಕಾತಿ ಮಾಡಿಕೊಳ್ಳಿ ಎಂದರೆ ನಾವು ಪಡೆದ ಮೆರಿಟ್‌ಗೂ ಖಾಲಿ ಇರುವ ಹುದ್ದೆಗಳಿಗೂ ತಾಳೆಯೇ ಆಗುತ್ತಿಲ್ಲ. ನಾನು ಎಂಡಿ ಎಮರ್ಜೆನ್ಸಿ ಮೆಡಿಸನ್ ಮಾಡಿದ್ದೀನಿ. ಬಿಎಂಸಿಯಲ್ಲಿ ಎರಡು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಎರಡು ಖಾಲಿ ಹುದ್ದೆ ಇವೆ ಎಂದು ನಮಗೆ ಗೊತ್ತು. ಆದರೆ ಅಲ್ಲಿ ಆಯ್ಕೆ ಮಾಡಿಕೊಳ್ಳಲು ಹೋದರೆ ತೋರಿಸುತ್ತಿಲ್ಲ.. ಇದು ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸಿರುವ ತಜ್ಞ ವೈದ್ಯೆಯೊಬ್ಬರ ಅಳಲಾಗಿದೆ..

ಸ್ನಾತಕೋತ್ತರ ವೈದ್ಯಕೀಯ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಲ್ಲಿ ಪದವಿ ಪಡೆದಿರುವ ತಜ್ಞ ವೈದ್ಯರನ್ನು ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜಿಸುವ ಪ್ರಕ್ರಿಯೆ ನಾಲ್ಕು ತಿಂಗಳು ವಿಳಂಬವಾಗಿದೆ. ಮೆರಿಟ್ ಲಿಸ್ಟ್‌ಗೆ ಅನುಗುಣವಾಗಿ ಸೀಟು ಆಯ್ಕೆ ಮಾಡಿಕೊಳ್ಳಲು ಹೋದರೆ ಖಾಲಿ ಹುದ್ದೆಗಳೇ ತೋರಿಸುತ್ತಿಲ್ಲ. ಒಂದು ಕಾಲೇಜಿನಲ್ಲಿ 30 ಖಾಲಿ ಹುದ್ದೆಗಳಿದ್ದರೂ ಕೇವಲ 05 ಹುದ್ದೆಗಳು ಮಾತ್ರ ತೋರಿಸುತ್ತಿದೆ. ಇದರ ಹಿಂದೆ ಸೀಟ್ ಬ್ಲಾಕಿಂಗ್ ದಂಧೆ ನಡೆದಿರಬಹುದು ಎಂದು ವೈದ್ಯರು ಆರೋಪಿಸಿದ್ದಾರೆ.

ಈ ಕುರಿತು ದಯಾನಂದ್ ಸಾಗರ್ ಎಂಬುವವರು 18 ನಿಮಿಷದ ವಿಡಿಯೋ ಒಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ, ಮೆರಿಟ್ ಪಡೆದವರಿಗೆ ತಮಗೆ ಬೇಕಾದ ಕಡೆ ಆಯ್ಕೆ ಸಿಗುತ್ತಿಲ್ಲ, ಪ್ರಮುಖ ನಗರ ಮತ್ತು ಪ್ರಮುಖ ಕಾಲೇಜುಗಳಲ್ಲಿ ಖಾಲಿ ಹುದ್ದೆ ಮುಚ್ಚಿಡುವ ಮೂಲಕ ಅನ್ಯಾಯವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ 40 ಹುದ್ದೆಗಳಿ ಖಾಲಿ ಇವೆ. ಆದರೆ ಸ್ಥಳ ಆಯ್ಕೆಗೆ ಲಾಗಿನ್ ಆದರೆ ಕೇವಲ 10 ಹುದ್ದೆಗಳನ್ನು ಮಾತ್ರ ತೋರಿಸಲಾಗುತ್ತಿದೆ. ಉಳಿದ 30 ಹುದ್ದೆಗಳನ್ನು ಏಕೆ ಮುಚ್ಚಿಡಲಾಗಿದೆ? ಅದೇ ರೀತಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ವಿಭಾಗದಲ್ಲಿ 19 ಖಾಲಿ ಹುದ್ದೆಗಳಿವೆ. ಆದರೆ ಒಂದೇ ಒಂದನ್ನು ಮಾತ್ರ ತೋರಿಸುತ್ತಿದೆ. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಎರಡು ಹುದ್ದೆ ಇದ್ದರೂ ಒಂದು ಮಾತ್ರ ತೋರಿಸುತ್ತಿದೆ. ಈ ರೀತಿಯಾಗಿ ಕರ್ನಾಟಕದಲ್ಲಿರುವ ಒಟ್ಟು 14 ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಷ್ಟು ಸೀಟುಗಳನ್ನು ಮುಚ್ಚಿಟ್ಟಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದ ಹಲವು ಮೆಡಿಕಲ್ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅಲ್ಲಿಗೆ ನೇಮಕಾತಿ ಮಾಡುತ್ತಿಲ್ಲ, ಬದಲಿಗೆ ಪ್ರವೇಟ್, ಮ್ಯಾನೇಜ್ ಮೆಂಟ್ ಸೇರಿ ದುಡ್ಡು ಕೊಟ್ಟವರಿಗೆ ಈ ಹುದ್ದೆಗಳನ್ನು ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೈದ್ಯೆಯೊಬ್ಬರು, “2022ರ ಮೇ ಒಳಗೆ ನಮ್ಮ ಕಡ್ಡಾಯ ಸೇವೆ ಸೇರಿ ಕೋರ್ಸ್ ಮುಗಿದಿರಬೇಕು. ಆದರೆ ಈ ರೀತಿ ವಿಳಂಬವಾಗುತ್ತಿರುವುದು ಹಲವರ ವೃತ್ತಿ ಬದುಕಿನಲ್ಲಿ ಕೆಟ್ಟ ಪರಿಣಾಮ ಬೀರಲಿದೆ. ನಾವು ರಾಜ್ಯದ ಯಾವುದೇ ಭಾಗಕ್ಕೆ ಹೋಗಿ ಸೇವೆ ಮಾಡಲು ಸಿದ್ದರಿದ್ದೇವೆ. ಆದರೆ ಮೆರಿಟ್ ಪಡೆದವರು ಸೌಲಭ್ಯ ಇಲ್ಲದೆ ಕಡೆ ಹೋಗಬೇಕು ಮತ್ತು ಲಂಚ ಕೊಟ್ಟವರು ಬೆಂಗಳೂರಿನಲ್ಲಿಯೇ ಕೆಲಸ ಮಾಡಬಹುದು ಎಂಬುದು ಯಾವ ನ್ಯಾಯ? ಅದಕ್ಕಾಗಿ ವಕೀಲರ ಮೂಲಕ ಹೈಕೋರ್ಟ್‌ನಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುತ್ತೇವೆ” ಎಂದಿದ್ದಾರೆ.

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...