Homeಮುಖಪುಟಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ವೈದ್ಯರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೋವಿಡ್ ಇದ್ದ ಕಾರಣ ಎರಡು ವರ್ಷ ದುಡಿದಿದ್ದೇವೆ. ಮೇ ತಿಂಗಳಿನಲ್ಲಿಯೇ ಕಡ್ಡಾಯ ಸೇವೆಗೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಅದು ಆಗಲಿಲ್ಲ, ಹೋಗಲಿ ಈಗಲಾದರೂ ನೇಮಕಾತಿ ಮಾಡಿಕೊಳ್ಳಿ ಎಂದರೆ ನಾವು ಪಡೆದ ಮೆರಿಟ್‌ಗೂ ಖಾಲಿ ಇರುವ ಹುದ್ದೆಗಳಿಗೂ ತಾಳೆಯೇ ಆಗುತ್ತಿಲ್ಲ. ನಾನು ಎಂಡಿ ಎಮರ್ಜೆನ್ಸಿ ಮೆಡಿಸನ್ ಮಾಡಿದ್ದೀನಿ. ಬಿಎಂಸಿಯಲ್ಲಿ ಎರಡು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಎರಡು ಖಾಲಿ ಹುದ್ದೆ ಇವೆ ಎಂದು ನಮಗೆ ಗೊತ್ತು. ಆದರೆ ಅಲ್ಲಿ ಆಯ್ಕೆ ಮಾಡಿಕೊಳ್ಳಲು ಹೋದರೆ ತೋರಿಸುತ್ತಿಲ್ಲ.. ಇದು ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸಿರುವ ತಜ್ಞ ವೈದ್ಯೆಯೊಬ್ಬರ ಅಳಲಾಗಿದೆ..

ಸ್ನಾತಕೋತ್ತರ ವೈದ್ಯಕೀಯ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಲ್ಲಿ ಪದವಿ ಪಡೆದಿರುವ ತಜ್ಞ ವೈದ್ಯರನ್ನು ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜಿಸುವ ಪ್ರಕ್ರಿಯೆ ನಾಲ್ಕು ತಿಂಗಳು ವಿಳಂಬವಾಗಿದೆ. ಮೆರಿಟ್ ಲಿಸ್ಟ್‌ಗೆ ಅನುಗುಣವಾಗಿ ಸೀಟು ಆಯ್ಕೆ ಮಾಡಿಕೊಳ್ಳಲು ಹೋದರೆ ಖಾಲಿ ಹುದ್ದೆಗಳೇ ತೋರಿಸುತ್ತಿಲ್ಲ. ಒಂದು ಕಾಲೇಜಿನಲ್ಲಿ 30 ಖಾಲಿ ಹುದ್ದೆಗಳಿದ್ದರೂ ಕೇವಲ 05 ಹುದ್ದೆಗಳು ಮಾತ್ರ ತೋರಿಸುತ್ತಿದೆ. ಇದರ ಹಿಂದೆ ಸೀಟ್ ಬ್ಲಾಕಿಂಗ್ ದಂಧೆ ನಡೆದಿರಬಹುದು ಎಂದು ವೈದ್ಯರು ಆರೋಪಿಸಿದ್ದಾರೆ.

ಈ ಕುರಿತು ದಯಾನಂದ್ ಸಾಗರ್ ಎಂಬುವವರು 18 ನಿಮಿಷದ ವಿಡಿಯೋ ಒಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ, ಮೆರಿಟ್ ಪಡೆದವರಿಗೆ ತಮಗೆ ಬೇಕಾದ ಕಡೆ ಆಯ್ಕೆ ಸಿಗುತ್ತಿಲ್ಲ, ಪ್ರಮುಖ ನಗರ ಮತ್ತು ಪ್ರಮುಖ ಕಾಲೇಜುಗಳಲ್ಲಿ ಖಾಲಿ ಹುದ್ದೆ ಮುಚ್ಚಿಡುವ ಮೂಲಕ ಅನ್ಯಾಯವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ 40 ಹುದ್ದೆಗಳಿ ಖಾಲಿ ಇವೆ. ಆದರೆ ಸ್ಥಳ ಆಯ್ಕೆಗೆ ಲಾಗಿನ್ ಆದರೆ ಕೇವಲ 10 ಹುದ್ದೆಗಳನ್ನು ಮಾತ್ರ ತೋರಿಸಲಾಗುತ್ತಿದೆ. ಉಳಿದ 30 ಹುದ್ದೆಗಳನ್ನು ಏಕೆ ಮುಚ್ಚಿಡಲಾಗಿದೆ? ಅದೇ ರೀತಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ವಿಭಾಗದಲ್ಲಿ 19 ಖಾಲಿ ಹುದ್ದೆಗಳಿವೆ. ಆದರೆ ಒಂದೇ ಒಂದನ್ನು ಮಾತ್ರ ತೋರಿಸುತ್ತಿದೆ. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಎರಡು ಹುದ್ದೆ ಇದ್ದರೂ ಒಂದು ಮಾತ್ರ ತೋರಿಸುತ್ತಿದೆ. ಈ ರೀತಿಯಾಗಿ ಕರ್ನಾಟಕದಲ್ಲಿರುವ ಒಟ್ಟು 14 ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಷ್ಟು ಸೀಟುಗಳನ್ನು ಮುಚ್ಚಿಟ್ಟಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದ ಹಲವು ಮೆಡಿಕಲ್ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅಲ್ಲಿಗೆ ನೇಮಕಾತಿ ಮಾಡುತ್ತಿಲ್ಲ, ಬದಲಿಗೆ ಪ್ರವೇಟ್, ಮ್ಯಾನೇಜ್ ಮೆಂಟ್ ಸೇರಿ ದುಡ್ಡು ಕೊಟ್ಟವರಿಗೆ ಈ ಹುದ್ದೆಗಳನ್ನು ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೈದ್ಯೆಯೊಬ್ಬರು, “2022ರ ಮೇ ಒಳಗೆ ನಮ್ಮ ಕಡ್ಡಾಯ ಸೇವೆ ಸೇರಿ ಕೋರ್ಸ್ ಮುಗಿದಿರಬೇಕು. ಆದರೆ ಈ ರೀತಿ ವಿಳಂಬವಾಗುತ್ತಿರುವುದು ಹಲವರ ವೃತ್ತಿ ಬದುಕಿನಲ್ಲಿ ಕೆಟ್ಟ ಪರಿಣಾಮ ಬೀರಲಿದೆ. ನಾವು ರಾಜ್ಯದ ಯಾವುದೇ ಭಾಗಕ್ಕೆ ಹೋಗಿ ಸೇವೆ ಮಾಡಲು ಸಿದ್ದರಿದ್ದೇವೆ. ಆದರೆ ಮೆರಿಟ್ ಪಡೆದವರು ಸೌಲಭ್ಯ ಇಲ್ಲದೆ ಕಡೆ ಹೋಗಬೇಕು ಮತ್ತು ಲಂಚ ಕೊಟ್ಟವರು ಬೆಂಗಳೂರಿನಲ್ಲಿಯೇ ಕೆಲಸ ಮಾಡಬಹುದು ಎಂಬುದು ಯಾವ ನ್ಯಾಯ? ಅದಕ್ಕಾಗಿ ವಕೀಲರ ಮೂಲಕ ಹೈಕೋರ್ಟ್‌ನಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುತ್ತೇವೆ” ಎಂದಿದ್ದಾರೆ.

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...