Homeಮುಖಪುಟಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

ಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

- Advertisement -
- Advertisement -

ಗುಜರಾತ್‌ನ ಎರಡು ಲೋಕಸಭಾ ಸ್ಥಾನಗಳಿಗೆ ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಆಮ್ ಆದ್ಮಿ ಪಕ್ಷ (ಎಎಪಿ)ವು ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳಲ್ಲಿ ಆರು, ಗುಜರಾತ್‌ನ 26 ಕ್ಷೇತ್ರಗಳ 8ರಲ್ಲಿ ಮತ್ತು ಗೋವಾ ರಾಜ್ಯದ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದೆ. ಗೋವಾದಲ್ಲಿರುವ ಎರಡು ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಾಲುದಾರ ಕಾಂಗ್ರೆಸ್ ಜೊತೆ ಆಪ್ ಒಪ್ಪಂದ ಮಾಡಿಕೊಂಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್, ‘ದೆಹಲಿಯಲ್ಲಿ ಅದರ ಹಿಂದಿನ ಚುನಾವಣಾ ಸಾಧನೆಗಳ ಆಧಾರದ ಮೇಲೆ ಕಾಂಗ್ರೆಸ್ ಪಕ್ಷವು ಒಂದಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಲು ಅರ್ಹವಾಗಿಲ್ಲ’ ಎಂದು ಹೇಳಿದರು.

ಆದರೆ,  ಗುಜರಾತ್‌ನ ಎರಡು ಮತ್ತು ಗೋವಾದ ಒಂದು ಲೋಕಸಭಾ ಸ್ಥಾನಕ್ಕೆ ಆಪ್ ತನ್ನ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದೆ. ಎಎಪಿ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ವೆಂಜಿ ವಿಗಾಸ್ ದಕ್ಷಿಣ ಗೋವಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಚೈತಾರ್ ವಾಸವ ಮತ್ತು ಉಮೇಶ್ ಭಾಯಿ ಮಕ್ವಾನಾ ಕ್ರಮವಾಗಿ ಗುಜರಾತ್‌ನ ಭರೂಚ್ ಮತ್ತು ಭಾವನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆರಕ್ಕೆ ಎಎಪಿ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಿದ್ದು, ಕಾಂಗ್ರೆಸ್‌ಗೆ ಒಂದು ಸ್ಥಾನ ಬಿಟ್ಟುಕೊಡಲಿದೆ ಎಂದು ಪಾಠಕ್ ಹೇಳಿದ್ದಾರೆ. ಆದಾಗ್ಯೂ, ಎಎಪಿ ಸ್ಪರ್ಧಿಸಲು ಬಯಸುವ ಆರು ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ ಬಿಡಲು ಬಯಸುತ್ತಿರುವ ಸ್ಥಾನವನ್ನು ಅವರು ಇನ್ನೂ ಘೋಷಿಸಿಲ್ಲ. ದೆಹಲಿಯ ಎಲ್ಲ ಏಳು ಲೋಕಸಭಾ ಸ್ಥಾನಗಳೂ 2014ರಿಂದಲೂ ಬಿಜೆಪಿ ವಶದಲ್ಲಿವೆ.

‘ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆಯಲ್ಲಿ ಇನ್ನೂ ಯಾವುದೇ ಪ್ರಗತಿಯಿಲ್ಲದ ಕಾರಣ ಭಾರವಾದ ಹೃದಯದಿಂದ ಈ ಘೋಷಣೆಗಳನ್ನು ಮಾಡುತ್ತಿದ್ದೇನೆ’ ಎಂದು ಪಾಠಕ್ ಹೇಳಿದರು.

‘ಕಾಂಗ್ರೆಸ್ ದೆಹಲಿಯಲ್ಲಿ ಶೂನ್ಯ ಲೋಕಸಭಾ ಸ್ಥಾನಗಳನ್ನು ಹೊಂದಿದೆ ಹಾಗೂ ಅದು ದೆಹಲಿ ವಿಧಾನಸಭೆಯಲ್ಲಿ ಶೂನ್ಯ ಸ್ಥಾನಗಳನ್ನು ಹೊಂದಿದೆ. 250 ವಾರ್ಡ್‌ಗಳಲ್ಲಿ (2022) ಎಂಸಿಡಿ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದಿದೆ. ಅರ್ಹತೆಯ ಆಧಾರದಲ್ಲಿಯೂ ಸಹ, ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ ಪಕ್ಷವು ಒಂದೇ ಒಂದು ಸ್ಥಾನಕ್ಕೆ ಅರ್ಹವಾಗಿಲ್ಲ. ಆದರೆ, ಡೇಟಾ ಮಾತ್ರ ಮುಖ್ಯವಲ್ಲ; ಮೈತ್ರಿ ಧರ್ಮದ ಪ್ರಕಾರ ನಾವು ಕಾಂಗ್ರೆಸ್‌ಗೆ ಒಂದು ಸ್ಥಾನ ನೀಡಲು ಸಿದ್ಧರಿದ್ದೇವೆ. ನಾವು ಇಂದು ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ. ದೆಹಲಿಯ ಸೀಟು ಹಂಚಿಕೆಯ ಮಾತುಕತೆಗಳು ಶೀಘ್ರದಲ್ಲೇ ಅಂತಿಮಗೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನಾವು ಒಟ್ಟಿಗೆ ಕೆಲಸ ಮಾಡಬಹುದು, ಯಾವುದೇ ತೀರ್ಮಾನವನ್ನು ಶೀಘ್ರವಾಗಿ ಮಾಡದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ. ನಮ್ಮ ಕೆಲಸವನ್ನು ಪ್ರಾರಂಭಿಸುತ್ತೇವೆ’ ಎಂದು ಪಾಠಕ್ ಕಾಂಗ್ರೆಸ್ಸಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಕಾಂಗ್ರೆಸ್‌ನಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಲಭ್ಯವಿಲ್ಲ; ನಾವು ಅದನ್ನು ಸ್ವೀಕರಿಸಿದ ಕೂಡಲೇ ನಮ್ಮ ನಿರ್ಧಾರಗಳನ್ನು ನವೀಕರಿಸುತ್ತೇವೆ. ವಿಪಕ್ಷಗಳ ಗುಂಪು ಇಂಡಿಯಾ ಬಣದ ಭಾಗವಾಗಿ, ಎಎಪಿ ಮತ್ತು ಕಾಂಗ್ರೆಸ್ ಗೋವಾ, ಗುಜರಾತ್, ಹರಿಯಾಣ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ಹಲವು ವಾರಗಳಿಂದ ಸೀಟು ಹಂಚಿಕೆ ಮಾತುಕತೆ ನಡೆಸುತ್ತಿವೆ. ಆದರೆ, ಈವರೆಗೆ ಅದರಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.

‘ಹಲವು ವಾರಗಳ ಸೀಟು ಹಂಚಿಕೆ ಚರ್ಚೆಗಳಿಂದ ಆಪ್ ಬೇಸತ್ತಿದೆ; ಚುನಾವಣೆಯ ಸಮಯದ ಕೊರತೆಯನ್ನು ಉಲ್ಲೇಖಿಸಿ ಲೋಕಸಭೆ ಚುನಾವಣೆಗೆ ಬೇಗನೆ ಸಿದ್ಧತೆಗಳನ್ನು ಪ್ರಾರಂಭಿಸಲು ಬಯಸಿದೆ. ಕೇಜ್ರಿವಾಲ್ ಈಗಾಗಲೇ ಫೆಬ್ರವರಿ 10 ರಂದು ಪಂಜಾಬ್ ಮತ್ತು ಚಂಡೀಗಢದ ಎಲ್ಲ 13 ಲೋಕಸಭಾ ಸ್ಥಾನಗಳಿಗೆ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ’ ಎಂದು ಪಾಠಕ್ ಹೇಳಿದರು.

ಬಿಜೆಪಿ ಲೇವಡಿ:

ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಮಾತನಾಡಿ, ‘ಎಎಪಿ ಮತ್ತು ಕಾಂಗ್ರೆಸ್ ಪರಸ್ಪರ ನಂಬಿಕೆ ಹೊಂದಿಲ್ಲ; ಬಿಜೆಪಿಯ ಭಯದಿಂದ ಹೇಗಾದರೂ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ’ ಎಂದು ಲೇವಡಿ ಮಾಡಿದ್ದಾರೆ.

‘ಕಾಂಗ್ರೆಸ್ ಮತ್ತು ಎಎಪಿ ನಡುವೆ ಗಂಭೀರ ನಂಬಿಕೆ ಬಿಕ್ಕಟ್ಟು ಇದೆ. ಮೊದಲ ಅವಕಾಶದಲ್ಲಿ ಎಎಪಿ ದ್ರೋಹ ಮಾಡುತ್ತದೆ ಎಂದು ಕಾಂಗ್ರೆಸ್‌ಗೆ ತಿಳಿದಿದೆ. ಕಾಂಗ್ರೆಸ್‌ಗೆ ಅದೇ ರೀತಿ ಮಾಡುತ್ತದೆ ಎಂದು ಎಎಪಿಗೂ ತಿಳಿದಿದೆ. ದೆಹಲಿಯ ಜನರು ಎಲ್ಲಾ ಏಳು ಸ್ಥಾನಗಳನ್ನು ಮತ್ತೊಮ್ಮೆ ಬಿಜೆಪಿಗೆ ನೀಡಲು ನಿರ್ಧರಿಸಿದ್ದಾರೆ. ಏಕೆಂದರೆ, ಬಿಜೆಪಿ ಅವರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ, ಇದು ಆಪ್‌ಗಿಂತ ಭಿನ್ನವಾಗಿ ತನ್ನ ರಾಜಕೀಯ ವಿಸ್ತರಣೆಯನ್ನು ಮಾಡಲು ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ’ ಎಂದು ಕಪೂರ್ ಹೇಳಿದರು.

ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ರೈತರ ಪ್ರತಿಭಟನೆಗೆ ಪಂಜಾಬ್ ಕಾಂಗ್ರೆಸ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...