Homeಮುಖಪುಟಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

ಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

- Advertisement -
- Advertisement -

ಗುಜರಾತ್‌ನ ಎರಡು ಲೋಕಸಭಾ ಸ್ಥಾನಗಳಿಗೆ ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಆಮ್ ಆದ್ಮಿ ಪಕ್ಷ (ಎಎಪಿ)ವು ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳಲ್ಲಿ ಆರು, ಗುಜರಾತ್‌ನ 26 ಕ್ಷೇತ್ರಗಳ 8ರಲ್ಲಿ ಮತ್ತು ಗೋವಾ ರಾಜ್ಯದ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದೆ. ಗೋವಾದಲ್ಲಿರುವ ಎರಡು ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಾಲುದಾರ ಕಾಂಗ್ರೆಸ್ ಜೊತೆ ಆಪ್ ಒಪ್ಪಂದ ಮಾಡಿಕೊಂಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್, ‘ದೆಹಲಿಯಲ್ಲಿ ಅದರ ಹಿಂದಿನ ಚುನಾವಣಾ ಸಾಧನೆಗಳ ಆಧಾರದ ಮೇಲೆ ಕಾಂಗ್ರೆಸ್ ಪಕ್ಷವು ಒಂದಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಲು ಅರ್ಹವಾಗಿಲ್ಲ’ ಎಂದು ಹೇಳಿದರು.

ಆದರೆ,  ಗುಜರಾತ್‌ನ ಎರಡು ಮತ್ತು ಗೋವಾದ ಒಂದು ಲೋಕಸಭಾ ಸ್ಥಾನಕ್ಕೆ ಆಪ್ ತನ್ನ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದೆ. ಎಎಪಿ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ವೆಂಜಿ ವಿಗಾಸ್ ದಕ್ಷಿಣ ಗೋವಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಚೈತಾರ್ ವಾಸವ ಮತ್ತು ಉಮೇಶ್ ಭಾಯಿ ಮಕ್ವಾನಾ ಕ್ರಮವಾಗಿ ಗುಜರಾತ್‌ನ ಭರೂಚ್ ಮತ್ತು ಭಾವನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆರಕ್ಕೆ ಎಎಪಿ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಿದ್ದು, ಕಾಂಗ್ರೆಸ್‌ಗೆ ಒಂದು ಸ್ಥಾನ ಬಿಟ್ಟುಕೊಡಲಿದೆ ಎಂದು ಪಾಠಕ್ ಹೇಳಿದ್ದಾರೆ. ಆದಾಗ್ಯೂ, ಎಎಪಿ ಸ್ಪರ್ಧಿಸಲು ಬಯಸುವ ಆರು ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ ಬಿಡಲು ಬಯಸುತ್ತಿರುವ ಸ್ಥಾನವನ್ನು ಅವರು ಇನ್ನೂ ಘೋಷಿಸಿಲ್ಲ. ದೆಹಲಿಯ ಎಲ್ಲ ಏಳು ಲೋಕಸಭಾ ಸ್ಥಾನಗಳೂ 2014ರಿಂದಲೂ ಬಿಜೆಪಿ ವಶದಲ್ಲಿವೆ.

‘ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆಯಲ್ಲಿ ಇನ್ನೂ ಯಾವುದೇ ಪ್ರಗತಿಯಿಲ್ಲದ ಕಾರಣ ಭಾರವಾದ ಹೃದಯದಿಂದ ಈ ಘೋಷಣೆಗಳನ್ನು ಮಾಡುತ್ತಿದ್ದೇನೆ’ ಎಂದು ಪಾಠಕ್ ಹೇಳಿದರು.

‘ಕಾಂಗ್ರೆಸ್ ದೆಹಲಿಯಲ್ಲಿ ಶೂನ್ಯ ಲೋಕಸಭಾ ಸ್ಥಾನಗಳನ್ನು ಹೊಂದಿದೆ ಹಾಗೂ ಅದು ದೆಹಲಿ ವಿಧಾನಸಭೆಯಲ್ಲಿ ಶೂನ್ಯ ಸ್ಥಾನಗಳನ್ನು ಹೊಂದಿದೆ. 250 ವಾರ್ಡ್‌ಗಳಲ್ಲಿ (2022) ಎಂಸಿಡಿ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದಿದೆ. ಅರ್ಹತೆಯ ಆಧಾರದಲ್ಲಿಯೂ ಸಹ, ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ ಪಕ್ಷವು ಒಂದೇ ಒಂದು ಸ್ಥಾನಕ್ಕೆ ಅರ್ಹವಾಗಿಲ್ಲ. ಆದರೆ, ಡೇಟಾ ಮಾತ್ರ ಮುಖ್ಯವಲ್ಲ; ಮೈತ್ರಿ ಧರ್ಮದ ಪ್ರಕಾರ ನಾವು ಕಾಂಗ್ರೆಸ್‌ಗೆ ಒಂದು ಸ್ಥಾನ ನೀಡಲು ಸಿದ್ಧರಿದ್ದೇವೆ. ನಾವು ಇಂದು ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ. ದೆಹಲಿಯ ಸೀಟು ಹಂಚಿಕೆಯ ಮಾತುಕತೆಗಳು ಶೀಘ್ರದಲ್ಲೇ ಅಂತಿಮಗೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನಾವು ಒಟ್ಟಿಗೆ ಕೆಲಸ ಮಾಡಬಹುದು, ಯಾವುದೇ ತೀರ್ಮಾನವನ್ನು ಶೀಘ್ರವಾಗಿ ಮಾಡದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ. ನಮ್ಮ ಕೆಲಸವನ್ನು ಪ್ರಾರಂಭಿಸುತ್ತೇವೆ’ ಎಂದು ಪಾಠಕ್ ಕಾಂಗ್ರೆಸ್ಸಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಕಾಂಗ್ರೆಸ್‌ನಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಲಭ್ಯವಿಲ್ಲ; ನಾವು ಅದನ್ನು ಸ್ವೀಕರಿಸಿದ ಕೂಡಲೇ ನಮ್ಮ ನಿರ್ಧಾರಗಳನ್ನು ನವೀಕರಿಸುತ್ತೇವೆ. ವಿಪಕ್ಷಗಳ ಗುಂಪು ಇಂಡಿಯಾ ಬಣದ ಭಾಗವಾಗಿ, ಎಎಪಿ ಮತ್ತು ಕಾಂಗ್ರೆಸ್ ಗೋವಾ, ಗುಜರಾತ್, ಹರಿಯಾಣ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ಹಲವು ವಾರಗಳಿಂದ ಸೀಟು ಹಂಚಿಕೆ ಮಾತುಕತೆ ನಡೆಸುತ್ತಿವೆ. ಆದರೆ, ಈವರೆಗೆ ಅದರಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.

‘ಹಲವು ವಾರಗಳ ಸೀಟು ಹಂಚಿಕೆ ಚರ್ಚೆಗಳಿಂದ ಆಪ್ ಬೇಸತ್ತಿದೆ; ಚುನಾವಣೆಯ ಸಮಯದ ಕೊರತೆಯನ್ನು ಉಲ್ಲೇಖಿಸಿ ಲೋಕಸಭೆ ಚುನಾವಣೆಗೆ ಬೇಗನೆ ಸಿದ್ಧತೆಗಳನ್ನು ಪ್ರಾರಂಭಿಸಲು ಬಯಸಿದೆ. ಕೇಜ್ರಿವಾಲ್ ಈಗಾಗಲೇ ಫೆಬ್ರವರಿ 10 ರಂದು ಪಂಜಾಬ್ ಮತ್ತು ಚಂಡೀಗಢದ ಎಲ್ಲ 13 ಲೋಕಸಭಾ ಸ್ಥಾನಗಳಿಗೆ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ’ ಎಂದು ಪಾಠಕ್ ಹೇಳಿದರು.

ಬಿಜೆಪಿ ಲೇವಡಿ:

ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಮಾತನಾಡಿ, ‘ಎಎಪಿ ಮತ್ತು ಕಾಂಗ್ರೆಸ್ ಪರಸ್ಪರ ನಂಬಿಕೆ ಹೊಂದಿಲ್ಲ; ಬಿಜೆಪಿಯ ಭಯದಿಂದ ಹೇಗಾದರೂ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ’ ಎಂದು ಲೇವಡಿ ಮಾಡಿದ್ದಾರೆ.

‘ಕಾಂಗ್ರೆಸ್ ಮತ್ತು ಎಎಪಿ ನಡುವೆ ಗಂಭೀರ ನಂಬಿಕೆ ಬಿಕ್ಕಟ್ಟು ಇದೆ. ಮೊದಲ ಅವಕಾಶದಲ್ಲಿ ಎಎಪಿ ದ್ರೋಹ ಮಾಡುತ್ತದೆ ಎಂದು ಕಾಂಗ್ರೆಸ್‌ಗೆ ತಿಳಿದಿದೆ. ಕಾಂಗ್ರೆಸ್‌ಗೆ ಅದೇ ರೀತಿ ಮಾಡುತ್ತದೆ ಎಂದು ಎಎಪಿಗೂ ತಿಳಿದಿದೆ. ದೆಹಲಿಯ ಜನರು ಎಲ್ಲಾ ಏಳು ಸ್ಥಾನಗಳನ್ನು ಮತ್ತೊಮ್ಮೆ ಬಿಜೆಪಿಗೆ ನೀಡಲು ನಿರ್ಧರಿಸಿದ್ದಾರೆ. ಏಕೆಂದರೆ, ಬಿಜೆಪಿ ಅವರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ, ಇದು ಆಪ್‌ಗಿಂತ ಭಿನ್ನವಾಗಿ ತನ್ನ ರಾಜಕೀಯ ವಿಸ್ತರಣೆಯನ್ನು ಮಾಡಲು ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ’ ಎಂದು ಕಪೂರ್ ಹೇಳಿದರು.

ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ರೈತರ ಪ್ರತಿಭಟನೆಗೆ ಪಂಜಾಬ್ ಕಾಂಗ್ರೆಸ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...