Homeಮುಖಪುಟಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

ಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

- Advertisement -
- Advertisement -

ಗುಜರಾತ್‌ನ ಎರಡು ಲೋಕಸಭಾ ಸ್ಥಾನಗಳಿಗೆ ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಆಮ್ ಆದ್ಮಿ ಪಕ್ಷ (ಎಎಪಿ)ವು ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳಲ್ಲಿ ಆರು, ಗುಜರಾತ್‌ನ 26 ಕ್ಷೇತ್ರಗಳ 8ರಲ್ಲಿ ಮತ್ತು ಗೋವಾ ರಾಜ್ಯದ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದೆ. ಗೋವಾದಲ್ಲಿರುವ ಎರಡು ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಾಲುದಾರ ಕಾಂಗ್ರೆಸ್ ಜೊತೆ ಆಪ್ ಒಪ್ಪಂದ ಮಾಡಿಕೊಂಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್, ‘ದೆಹಲಿಯಲ್ಲಿ ಅದರ ಹಿಂದಿನ ಚುನಾವಣಾ ಸಾಧನೆಗಳ ಆಧಾರದ ಮೇಲೆ ಕಾಂಗ್ರೆಸ್ ಪಕ್ಷವು ಒಂದಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಲು ಅರ್ಹವಾಗಿಲ್ಲ’ ಎಂದು ಹೇಳಿದರು.

ಆದರೆ,  ಗುಜರಾತ್‌ನ ಎರಡು ಮತ್ತು ಗೋವಾದ ಒಂದು ಲೋಕಸಭಾ ಸ್ಥಾನಕ್ಕೆ ಆಪ್ ತನ್ನ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದೆ. ಎಎಪಿ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ವೆಂಜಿ ವಿಗಾಸ್ ದಕ್ಷಿಣ ಗೋವಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಚೈತಾರ್ ವಾಸವ ಮತ್ತು ಉಮೇಶ್ ಭಾಯಿ ಮಕ್ವಾನಾ ಕ್ರಮವಾಗಿ ಗುಜರಾತ್‌ನ ಭರೂಚ್ ಮತ್ತು ಭಾವನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆರಕ್ಕೆ ಎಎಪಿ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಿದ್ದು, ಕಾಂಗ್ರೆಸ್‌ಗೆ ಒಂದು ಸ್ಥಾನ ಬಿಟ್ಟುಕೊಡಲಿದೆ ಎಂದು ಪಾಠಕ್ ಹೇಳಿದ್ದಾರೆ. ಆದಾಗ್ಯೂ, ಎಎಪಿ ಸ್ಪರ್ಧಿಸಲು ಬಯಸುವ ಆರು ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ ಬಿಡಲು ಬಯಸುತ್ತಿರುವ ಸ್ಥಾನವನ್ನು ಅವರು ಇನ್ನೂ ಘೋಷಿಸಿಲ್ಲ. ದೆಹಲಿಯ ಎಲ್ಲ ಏಳು ಲೋಕಸಭಾ ಸ್ಥಾನಗಳೂ 2014ರಿಂದಲೂ ಬಿಜೆಪಿ ವಶದಲ್ಲಿವೆ.

‘ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆಯಲ್ಲಿ ಇನ್ನೂ ಯಾವುದೇ ಪ್ರಗತಿಯಿಲ್ಲದ ಕಾರಣ ಭಾರವಾದ ಹೃದಯದಿಂದ ಈ ಘೋಷಣೆಗಳನ್ನು ಮಾಡುತ್ತಿದ್ದೇನೆ’ ಎಂದು ಪಾಠಕ್ ಹೇಳಿದರು.

‘ಕಾಂಗ್ರೆಸ್ ದೆಹಲಿಯಲ್ಲಿ ಶೂನ್ಯ ಲೋಕಸಭಾ ಸ್ಥಾನಗಳನ್ನು ಹೊಂದಿದೆ ಹಾಗೂ ಅದು ದೆಹಲಿ ವಿಧಾನಸಭೆಯಲ್ಲಿ ಶೂನ್ಯ ಸ್ಥಾನಗಳನ್ನು ಹೊಂದಿದೆ. 250 ವಾರ್ಡ್‌ಗಳಲ್ಲಿ (2022) ಎಂಸಿಡಿ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದಿದೆ. ಅರ್ಹತೆಯ ಆಧಾರದಲ್ಲಿಯೂ ಸಹ, ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ ಪಕ್ಷವು ಒಂದೇ ಒಂದು ಸ್ಥಾನಕ್ಕೆ ಅರ್ಹವಾಗಿಲ್ಲ. ಆದರೆ, ಡೇಟಾ ಮಾತ್ರ ಮುಖ್ಯವಲ್ಲ; ಮೈತ್ರಿ ಧರ್ಮದ ಪ್ರಕಾರ ನಾವು ಕಾಂಗ್ರೆಸ್‌ಗೆ ಒಂದು ಸ್ಥಾನ ನೀಡಲು ಸಿದ್ಧರಿದ್ದೇವೆ. ನಾವು ಇಂದು ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ. ದೆಹಲಿಯ ಸೀಟು ಹಂಚಿಕೆಯ ಮಾತುಕತೆಗಳು ಶೀಘ್ರದಲ್ಲೇ ಅಂತಿಮಗೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನಾವು ಒಟ್ಟಿಗೆ ಕೆಲಸ ಮಾಡಬಹುದು, ಯಾವುದೇ ತೀರ್ಮಾನವನ್ನು ಶೀಘ್ರವಾಗಿ ಮಾಡದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ. ನಮ್ಮ ಕೆಲಸವನ್ನು ಪ್ರಾರಂಭಿಸುತ್ತೇವೆ’ ಎಂದು ಪಾಠಕ್ ಕಾಂಗ್ರೆಸ್ಸಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಕಾಂಗ್ರೆಸ್‌ನಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಲಭ್ಯವಿಲ್ಲ; ನಾವು ಅದನ್ನು ಸ್ವೀಕರಿಸಿದ ಕೂಡಲೇ ನಮ್ಮ ನಿರ್ಧಾರಗಳನ್ನು ನವೀಕರಿಸುತ್ತೇವೆ. ವಿಪಕ್ಷಗಳ ಗುಂಪು ಇಂಡಿಯಾ ಬಣದ ಭಾಗವಾಗಿ, ಎಎಪಿ ಮತ್ತು ಕಾಂಗ್ರೆಸ್ ಗೋವಾ, ಗುಜರಾತ್, ಹರಿಯಾಣ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ಹಲವು ವಾರಗಳಿಂದ ಸೀಟು ಹಂಚಿಕೆ ಮಾತುಕತೆ ನಡೆಸುತ್ತಿವೆ. ಆದರೆ, ಈವರೆಗೆ ಅದರಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.

‘ಹಲವು ವಾರಗಳ ಸೀಟು ಹಂಚಿಕೆ ಚರ್ಚೆಗಳಿಂದ ಆಪ್ ಬೇಸತ್ತಿದೆ; ಚುನಾವಣೆಯ ಸಮಯದ ಕೊರತೆಯನ್ನು ಉಲ್ಲೇಖಿಸಿ ಲೋಕಸಭೆ ಚುನಾವಣೆಗೆ ಬೇಗನೆ ಸಿದ್ಧತೆಗಳನ್ನು ಪ್ರಾರಂಭಿಸಲು ಬಯಸಿದೆ. ಕೇಜ್ರಿವಾಲ್ ಈಗಾಗಲೇ ಫೆಬ್ರವರಿ 10 ರಂದು ಪಂಜಾಬ್ ಮತ್ತು ಚಂಡೀಗಢದ ಎಲ್ಲ 13 ಲೋಕಸಭಾ ಸ್ಥಾನಗಳಿಗೆ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ’ ಎಂದು ಪಾಠಕ್ ಹೇಳಿದರು.

ಬಿಜೆಪಿ ಲೇವಡಿ:

ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಮಾತನಾಡಿ, ‘ಎಎಪಿ ಮತ್ತು ಕಾಂಗ್ರೆಸ್ ಪರಸ್ಪರ ನಂಬಿಕೆ ಹೊಂದಿಲ್ಲ; ಬಿಜೆಪಿಯ ಭಯದಿಂದ ಹೇಗಾದರೂ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ’ ಎಂದು ಲೇವಡಿ ಮಾಡಿದ್ದಾರೆ.

‘ಕಾಂಗ್ರೆಸ್ ಮತ್ತು ಎಎಪಿ ನಡುವೆ ಗಂಭೀರ ನಂಬಿಕೆ ಬಿಕ್ಕಟ್ಟು ಇದೆ. ಮೊದಲ ಅವಕಾಶದಲ್ಲಿ ಎಎಪಿ ದ್ರೋಹ ಮಾಡುತ್ತದೆ ಎಂದು ಕಾಂಗ್ರೆಸ್‌ಗೆ ತಿಳಿದಿದೆ. ಕಾಂಗ್ರೆಸ್‌ಗೆ ಅದೇ ರೀತಿ ಮಾಡುತ್ತದೆ ಎಂದು ಎಎಪಿಗೂ ತಿಳಿದಿದೆ. ದೆಹಲಿಯ ಜನರು ಎಲ್ಲಾ ಏಳು ಸ್ಥಾನಗಳನ್ನು ಮತ್ತೊಮ್ಮೆ ಬಿಜೆಪಿಗೆ ನೀಡಲು ನಿರ್ಧರಿಸಿದ್ದಾರೆ. ಏಕೆಂದರೆ, ಬಿಜೆಪಿ ಅವರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ, ಇದು ಆಪ್‌ಗಿಂತ ಭಿನ್ನವಾಗಿ ತನ್ನ ರಾಜಕೀಯ ವಿಸ್ತರಣೆಯನ್ನು ಮಾಡಲು ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ’ ಎಂದು ಕಪೂರ್ ಹೇಳಿದರು.

ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ರೈತರ ಪ್ರತಿಭಟನೆಗೆ ಪಂಜಾಬ್ ಕಾಂಗ್ರೆಸ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...