Homeಮುಖಪುಟಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

ಕಾಂಗ್ರೆಸ್‌ ಜತೆಗಿನ ಸೀಟು ಹಂಚಿಕೆ ಮಾತುಕತೆ ವಿಳಂಬ; ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಆಪ್!

- Advertisement -
- Advertisement -

ಗುಜರಾತ್‌ನ ಎರಡು ಲೋಕಸಭಾ ಸ್ಥಾನಗಳಿಗೆ ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಆಮ್ ಆದ್ಮಿ ಪಕ್ಷ (ಎಎಪಿ)ವು ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳಲ್ಲಿ ಆರು, ಗುಜರಾತ್‌ನ 26 ಕ್ಷೇತ್ರಗಳ 8ರಲ್ಲಿ ಮತ್ತು ಗೋವಾ ರಾಜ್ಯದ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸುವುದಾಗಿ ಹೇಳಿದೆ. ಗೋವಾದಲ್ಲಿರುವ ಎರಡು ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಾಲುದಾರ ಕಾಂಗ್ರೆಸ್ ಜೊತೆ ಆಪ್ ಒಪ್ಪಂದ ಮಾಡಿಕೊಂಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್, ‘ದೆಹಲಿಯಲ್ಲಿ ಅದರ ಹಿಂದಿನ ಚುನಾವಣಾ ಸಾಧನೆಗಳ ಆಧಾರದ ಮೇಲೆ ಕಾಂಗ್ರೆಸ್ ಪಕ್ಷವು ಒಂದಕ್ಕಿಂತ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಲು ಅರ್ಹವಾಗಿಲ್ಲ’ ಎಂದು ಹೇಳಿದರು.

ಆದರೆ,  ಗುಜರಾತ್‌ನ ಎರಡು ಮತ್ತು ಗೋವಾದ ಒಂದು ಲೋಕಸಭಾ ಸ್ಥಾನಕ್ಕೆ ಆಪ್ ತನ್ನ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದೆ. ಎಎಪಿ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ವೆಂಜಿ ವಿಗಾಸ್ ದಕ್ಷಿಣ ಗೋವಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಚೈತಾರ್ ವಾಸವ ಮತ್ತು ಉಮೇಶ್ ಭಾಯಿ ಮಕ್ವಾನಾ ಕ್ರಮವಾಗಿ ಗುಜರಾತ್‌ನ ಭರೂಚ್ ಮತ್ತು ಭಾವನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆರಕ್ಕೆ ಎಎಪಿ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಿದ್ದು, ಕಾಂಗ್ರೆಸ್‌ಗೆ ಒಂದು ಸ್ಥಾನ ಬಿಟ್ಟುಕೊಡಲಿದೆ ಎಂದು ಪಾಠಕ್ ಹೇಳಿದ್ದಾರೆ. ಆದಾಗ್ಯೂ, ಎಎಪಿ ಸ್ಪರ್ಧಿಸಲು ಬಯಸುವ ಆರು ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ ಬಿಡಲು ಬಯಸುತ್ತಿರುವ ಸ್ಥಾನವನ್ನು ಅವರು ಇನ್ನೂ ಘೋಷಿಸಿಲ್ಲ. ದೆಹಲಿಯ ಎಲ್ಲ ಏಳು ಲೋಕಸಭಾ ಸ್ಥಾನಗಳೂ 2014ರಿಂದಲೂ ಬಿಜೆಪಿ ವಶದಲ್ಲಿವೆ.

‘ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆಯಲ್ಲಿ ಇನ್ನೂ ಯಾವುದೇ ಪ್ರಗತಿಯಿಲ್ಲದ ಕಾರಣ ಭಾರವಾದ ಹೃದಯದಿಂದ ಈ ಘೋಷಣೆಗಳನ್ನು ಮಾಡುತ್ತಿದ್ದೇನೆ’ ಎಂದು ಪಾಠಕ್ ಹೇಳಿದರು.

‘ಕಾಂಗ್ರೆಸ್ ದೆಹಲಿಯಲ್ಲಿ ಶೂನ್ಯ ಲೋಕಸಭಾ ಸ್ಥಾನಗಳನ್ನು ಹೊಂದಿದೆ ಹಾಗೂ ಅದು ದೆಹಲಿ ವಿಧಾನಸಭೆಯಲ್ಲಿ ಶೂನ್ಯ ಸ್ಥಾನಗಳನ್ನು ಹೊಂದಿದೆ. 250 ವಾರ್ಡ್‌ಗಳಲ್ಲಿ (2022) ಎಂಸಿಡಿ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದಿದೆ. ಅರ್ಹತೆಯ ಆಧಾರದಲ್ಲಿಯೂ ಸಹ, ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್ ಪಕ್ಷವು ಒಂದೇ ಒಂದು ಸ್ಥಾನಕ್ಕೆ ಅರ್ಹವಾಗಿಲ್ಲ. ಆದರೆ, ಡೇಟಾ ಮಾತ್ರ ಮುಖ್ಯವಲ್ಲ; ಮೈತ್ರಿ ಧರ್ಮದ ಪ್ರಕಾರ ನಾವು ಕಾಂಗ್ರೆಸ್‌ಗೆ ಒಂದು ಸ್ಥಾನ ನೀಡಲು ಸಿದ್ಧರಿದ್ದೇವೆ. ನಾವು ಇಂದು ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ. ದೆಹಲಿಯ ಸೀಟು ಹಂಚಿಕೆಯ ಮಾತುಕತೆಗಳು ಶೀಘ್ರದಲ್ಲೇ ಅಂತಿಮಗೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನಾವು ಒಟ್ಟಿಗೆ ಕೆಲಸ ಮಾಡಬಹುದು, ಯಾವುದೇ ತೀರ್ಮಾನವನ್ನು ಶೀಘ್ರವಾಗಿ ಮಾಡದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುತ್ತೇವೆ. ನಮ್ಮ ಕೆಲಸವನ್ನು ಪ್ರಾರಂಭಿಸುತ್ತೇವೆ’ ಎಂದು ಪಾಠಕ್ ಕಾಂಗ್ರೆಸ್ಸಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

‘ಕಾಂಗ್ರೆಸ್‌ನಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಲಭ್ಯವಿಲ್ಲ; ನಾವು ಅದನ್ನು ಸ್ವೀಕರಿಸಿದ ಕೂಡಲೇ ನಮ್ಮ ನಿರ್ಧಾರಗಳನ್ನು ನವೀಕರಿಸುತ್ತೇವೆ. ವಿಪಕ್ಷಗಳ ಗುಂಪು ಇಂಡಿಯಾ ಬಣದ ಭಾಗವಾಗಿ, ಎಎಪಿ ಮತ್ತು ಕಾಂಗ್ರೆಸ್ ಗೋವಾ, ಗುಜರಾತ್, ಹರಿಯಾಣ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ಹಲವು ವಾರಗಳಿಂದ ಸೀಟು ಹಂಚಿಕೆ ಮಾತುಕತೆ ನಡೆಸುತ್ತಿವೆ. ಆದರೆ, ಈವರೆಗೆ ಅದರಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.

‘ಹಲವು ವಾರಗಳ ಸೀಟು ಹಂಚಿಕೆ ಚರ್ಚೆಗಳಿಂದ ಆಪ್ ಬೇಸತ್ತಿದೆ; ಚುನಾವಣೆಯ ಸಮಯದ ಕೊರತೆಯನ್ನು ಉಲ್ಲೇಖಿಸಿ ಲೋಕಸಭೆ ಚುನಾವಣೆಗೆ ಬೇಗನೆ ಸಿದ್ಧತೆಗಳನ್ನು ಪ್ರಾರಂಭಿಸಲು ಬಯಸಿದೆ. ಕೇಜ್ರಿವಾಲ್ ಈಗಾಗಲೇ ಫೆಬ್ರವರಿ 10 ರಂದು ಪಂಜಾಬ್ ಮತ್ತು ಚಂಡೀಗಢದ ಎಲ್ಲ 13 ಲೋಕಸಭಾ ಸ್ಥಾನಗಳಿಗೆ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ’ ಎಂದು ಪಾಠಕ್ ಹೇಳಿದರು.

ಬಿಜೆಪಿ ಲೇವಡಿ:

ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಮಾತನಾಡಿ, ‘ಎಎಪಿ ಮತ್ತು ಕಾಂಗ್ರೆಸ್ ಪರಸ್ಪರ ನಂಬಿಕೆ ಹೊಂದಿಲ್ಲ; ಬಿಜೆಪಿಯ ಭಯದಿಂದ ಹೇಗಾದರೂ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ’ ಎಂದು ಲೇವಡಿ ಮಾಡಿದ್ದಾರೆ.

‘ಕಾಂಗ್ರೆಸ್ ಮತ್ತು ಎಎಪಿ ನಡುವೆ ಗಂಭೀರ ನಂಬಿಕೆ ಬಿಕ್ಕಟ್ಟು ಇದೆ. ಮೊದಲ ಅವಕಾಶದಲ್ಲಿ ಎಎಪಿ ದ್ರೋಹ ಮಾಡುತ್ತದೆ ಎಂದು ಕಾಂಗ್ರೆಸ್‌ಗೆ ತಿಳಿದಿದೆ. ಕಾಂಗ್ರೆಸ್‌ಗೆ ಅದೇ ರೀತಿ ಮಾಡುತ್ತದೆ ಎಂದು ಎಎಪಿಗೂ ತಿಳಿದಿದೆ. ದೆಹಲಿಯ ಜನರು ಎಲ್ಲಾ ಏಳು ಸ್ಥಾನಗಳನ್ನು ಮತ್ತೊಮ್ಮೆ ಬಿಜೆಪಿಗೆ ನೀಡಲು ನಿರ್ಧರಿಸಿದ್ದಾರೆ. ಏಕೆಂದರೆ, ಬಿಜೆಪಿ ಅವರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ, ಇದು ಆಪ್‌ಗಿಂತ ಭಿನ್ನವಾಗಿ ತನ್ನ ರಾಜಕೀಯ ವಿಸ್ತರಣೆಯನ್ನು ಮಾಡಲು ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ’ ಎಂದು ಕಪೂರ್ ಹೇಳಿದರು.

ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ರೈತರ ಪ್ರತಿಭಟನೆಗೆ ಪಂಜಾಬ್ ಕಾಂಗ್ರೆಸ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...