Homeಮುಖಪುಟಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆಯಲ್ಲಿ ಸೀಟ್‌ ಹಂಚಿಕೆ ಬಗ್ಗೆ ಚರ್ಚೆ

ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆಯಲ್ಲಿ ಸೀಟ್‌ ಹಂಚಿಕೆ ಬಗ್ಗೆ ಚರ್ಚೆ

- Advertisement -
- Advertisement -

ಇಂಡಿಯಾ ಮೈತ್ರಿಕೂಟದ ಮೊದಲ ಸಮನ್ವಯ ಸಮಿತಿ ಸಭೆಯಲ್ಲಿ ಸೀಟ್‌ ಹಂಚಿಕೆ ಬಗ್ಗೆ ಮಾತುಕತೆ ನಡೆಯಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

ಮೊದಲ ಸಮನ್ವಯ ಸಭೆ ನಾಳೆ (ಸೆ.13)ರಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆಯಲಿದೆ. ಸೆ.1ರಂದು ಮುಂಬೈನಲ್ಲಿ ನಡೆದ ಮೂರನೇ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟ 14 ಸದಸ್ಯರ ಸಮನ್ವಯ ಸಮಿತಿಯನ್ನು ಘೋಷಿಸಿತ್ತು.

ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯಲ್ಲಿ ಶರದ್ ಪವಾರ್,  ಕಾಂಗ್ರೆಸ್‌ನ ಕೆಸಿ ವೇಣುಗೋಪಾಲ್, ಡಿಎಂಕೆಯ ಟಿಆರ್ ಬಾಲು, ಜೆಎಂಎಂನ ಹೇಮಂತ್ ಸೊರೆನ್, ಶಿವಸೇನೆಯ ಸಂಜಯ್ ರಾವತ್, ಆರ್‌ಜೆಡಿಯ ತೇಜಸ್ವಿ ಯಾದವ್, ತೃಣಮೂಲ ಕಾಂಗ್ರೆಸ್‌ನ ಅಭಿಷೇಕ್ ಬ್ಯಾನರ್ಜಿ, ಎಎಪಿಯ ರಾಘವ್ ಚಡ್ಡಾ, ಸಮಾಜವಾದಿ ಪಕ್ಷದ ಜಾವೆದ್ ಅಲಿ ಖಾನ್‌, ಸಿಪಿಐನ ಡಿ ರಾಜಾ, ನ್ಯಾಷನಲ್ ಕಾನ್ಫರೆನ್ಸ್ ಒಮರ್ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ ಸದಸ್ಯರಾಗಿದ್ದಾರೆ.

ಸಮಿತಿಗೆ ಸಿಪಿಐಎಂ ಇನ್ನೂ ತಮ್ಮ ಪಕ್ಷದ ನಾಯಕರ ಹೆಸರನ್ನು ಅಂತಿಮಗೊಳಿಸಿಲ್ಲ. ಇಂಡಿಯಾ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಸೀಟು ಹಂಚಿಕೆ ವಿಷಯ ಚರ್ಚೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ನಡೆದ ಮೂರು ಸಭೆಗಳಲ್ಲಿ ಇಲ್ಲಿಯವರೆಗೂ ಸೀಟು ಹಂಚಿಕೆ ಕುರಿತು ಇಂಡಿಯಾ ಮೈತ್ರಿಕೂಟದ ನಾಯಕರು ಒಂದೇ ಒಂದು ಚರ್ಚೆಯನ್ನೂ ನಡೆಸಿಲ್ಲ. ನಾಳಿನ ಸಭೆಯಲ್ಲಿ ಬಿಹಾರ, ಉತ್ತರ ಪ್ರದೇಶ ಪ.ಬಂಗಾಳ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಚರ್ಚೆಯು  ಅಜೆಂಡಾದಲ್ಲಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ: ಇಬ್ಬರು ಮುಸ್ಲಿಂ ಯುವಕರ ಹತ್ಯೆ ಪ್ರಕರಣ: ಸ್ವಯಂಘೋಷಿತ ಗೋರಕ್ಷಕ ಮೋನು ಮಾನೇಸರ್‌ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...