Homeಕರ್ನಾಟಕ''ಪುರುಷರಿಗೆ ಸೀಟು ಬಿಟ್ಟುಕೊಡಿ'' - ವಿಚಿತ್ರ ಆದೇಶ ಹೊರಡಿಸಿದ ಕೆಎಸ್‌ಆರ್‌ಟಿಸಿ!

”ಪುರುಷರಿಗೆ ಸೀಟು ಬಿಟ್ಟುಕೊಡಿ” – ವಿಚಿತ್ರ ಆದೇಶ ಹೊರಡಿಸಿದ ಕೆಎಸ್‌ಆರ್‌ಟಿಸಿ!

- Advertisement -
- Advertisement -

ದೇಶಾದ್ಯಂತ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗಾಗಿ ‘ಮಹಿಳಾ ಮೀಸಲು’ ಸೀಟುಗಳಿದ್ದು, ಆ ಸೀಟುಗಳನ್ನು ಮಹಿಳೆಯರಿಗೆ ಬಿಟ್ಟುಕೊಡಬೇಕು ಎಂಬ ನಿಯಮವಿದೆ. ಆದರೆ, ಕೆಎಸ್‌ಆರ್‌ಟಿಸಿಯ ಮೈಸೂರು ವಿಭಾಗವು ಸಾರಿಗೆ ಬಸ್‌ಗಳಲ್ಲಿ ಪುರುಷರಿಗೆ ಸೀಟುಗಳನ್ನು ಬಿಟ್ಟುಕೊಡಿ ಎಂಬ ವಿಚಿತ್ರ ಆದೇಶ ಹೊರಡಿಸಿದ್ದು, ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಬಸ್‌ಗಳಲ್ಲಿ ಪುರುಷರಿಗೆ ಸೀಟು ಬಿಟ್ಟುಕೊಡುವಂತೆ ಆದೇಶ ಹೊರಡಿಸಿರುವ ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ, “ಮೈಸೂರು ನಗರ ಸಾರಿಗೆ ವಾಹನಗಳಲ್ಲಿ ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿದ್ದು, ಪುರುಷ ಪ್ರಯಾಣಿಕರಿಗೆ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ವಿಷ್ಣುವರ್ಧನ ಎಸ್ ಎಂಬವರು ಕೇಂದ್ರ ಕಚೇರಿಗೆ ದೂರು ಸಲ್ಲಿಸಿದ್ದಾರೆ.” ಎಂದು ಆದೇಶದಲ್ಲಿ ಹೇಳಿದ್ದಾರೆ. ಆದರೆ, ಯಾವುದೆ ಕೆಎಸ್‌ಆರ್‌ಟಿಯಾಗಲಿ ಅಥವಾ ಯಾವುದೇ ಸಾರಿಗೆಗಳಲ್ಲಿ ಪುರುಷರಿಗೆ ಮೀಸಲು ಸೀಟುಗಳಿಲ್ಲ.

“ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ. ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು” ಎಂದು ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶಿಸಿದ್ದಾರೆ. ವಿಚಿತ್ರ ಆದೇಶ

ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದ ನಂತರ ಮಹಿಳೆಯರು ಮಹಿಳಾ ಮೀಸಲು ಸೀಟುಗಳನ್ನು ಬಿಟ್ಟು ಬೇರೆ ಸೀಟುಗಳಲ್ಲಿ ಕೂತರೆ ಅವರನ್ನು ಅವಹೇಳನ ಮಾಡುವ, ಬೆದರಿಸುವ ಹಲವಾರು ಘಟನೆಗಳು ವರದಿಯಾಗಿತ್ತು. ಈ ಅಪಪ್ರಚಾಕ್ಕೆ ಬೆದರಿ ಕೆಎಸ್‌ಆರ್‌ಟಿಸಿ ಪ್ರಸ್ತುತ ವಿವಾದಾತ್ಮಕ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.

ಆದೇಶದ ಪ್ರತಿ ವೈರಲ್ ಆಗುತ್ತಿದ್ದಂತೆ, ಪುರುಷ ಮೀಸಲು ಸೀಟುಗಳು ಇಲ್ಲ ಎಂಬ ಕನಿಷ್ಠ ಜ್ಞಾನವೂ ಇಲ್ಲದವರು ಕೆಎಸ್‌ಆರ್‌ಟಿಸಿಯ ಒಂದು ವಿಭಾಗದ ನಿಯಂತ್ರಣಾಧಿಕಾರಿಯಾಗಿದ್ದಾರೆ. ಅವರಿಗೆ ಬಸ್‌ ಪ್ರಯಾಣ ಮತ್ತು ಸೀಟುಗಳ ಬಗ್ಗೆ ಮೊದಲು ಅರಿವು ಮೂಡಿಸಬೇಕಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...