Homeಮುಖಪುಟಪೂರ್ಣಗೊಳ್ಳದ ಅದಾನಿ ವಿರುದ್ದದ ಸೆಬಿ ತನಿಖೆ : ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ವಕೀಲ ವಿಶಾಲ್ ತಿವಾರಿ

ಪೂರ್ಣಗೊಳ್ಳದ ಅದಾನಿ ವಿರುದ್ದದ ಸೆಬಿ ತನಿಖೆ : ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ವಕೀಲ ವಿಶಾಲ್ ತಿವಾರಿ

- Advertisement -
- Advertisement -

ಉದ್ಯಮಿ ಗೌತಮ್ ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ದಂಪತಿಯ ಪಾಲುದಾರಿಕೆ ಇದೆ ಎಂಬ ಹಿಂಡೆನ್‌ಬರ್ಗ್ ವರದಿ ಸಂಚಲನ ಸೃಷ್ಟಿಸಿರುವ ನಡುವೆ, ಸುಪ್ರೀಂ ಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.

ಈ ಹಿಂದೆ, 2023ರಲ್ಲಿ ಅದಾನಿ ಶೇರು ಹಗರಣ ಸಂಬಂಧ ತನಿಖೆ ಕೋರಿ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಈ ಬಾರಿಯೂ ಅರ್ಜಿ ಸಲ್ಲಿಸಿದ್ದು, ಅದಾನಿ ಸಮೂಹ ಸಂಸ್ಥೆಗಳ ಕುರಿತ ತನಿಖೆ ಪೂರ್ಣಗೊಳಿಸುವಂತೆ ಸೆಬಿಗೆ ನಿರ್ದೇಶಿಸಲು ಕೋರಿದ್ದಾರೆ.

ಅದಾನಿ ಸಮೂಹದ ಸಂಸ್ಥೆಗಳ ಲೆಕ್ಕಪತ್ರ ವಂಚನೆ ಮತ್ತು ಷೇರು ತಿರುಚುವಿಕೆ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಹೊರಿಸಲಾದ ಆರೋಪಗಳ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಗೆ ಆದೇಶಿಸಲು ವಕೀಲ ವಿಶಾಲ್ ತಿವಾರಿ ನವೆಂಬರ್ 24, 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು.

ಸೆಬಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರಲ್ಲಿ ಹಸ್ತಕ್ಷೇಪ ಮಾಡಲು ಯಾವುದೆ ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿತ್ತು.

ಈ ವೇಳೆ ಅದಾನಿ ಸಮೂಹದ ವಿರುದ್ಧದ 24 ಪ್ರಕರಣಗಳ ಪೈಕಿ 22 ಪ್ರಕರಣಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿದೆ ಎಂದು ಕೋರ್ಟ್ ಗಮನಿಸಿತ್ತು. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು, ಉಳಿದ 2 ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಿತ್ತು.

ಸೆಬಿ ತನಿಖೆಯನ್ನು ಅನುಮಾನಿಸಿ ಅರ್ಜಿದಾರರು ಪತ್ರಿಕೆಯ ವರದಿಗಳು ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ವರದಿ ತೋರಿಸಿರುವುದನ್ನು ಮಾನ್ಯ ಮಾಡಲು ನ್ಯಾಯಾಲಯ ನಿರಾಕರಿಸಿತ್ತು. ಆಧಾರ ರಹಿತ ಸುದ್ದಿ ವರದಿಗಳು ಮತ್ತು ಮೂರನೇ ಪಕ್ಷದ ಸಂಸ್ಥೆಗಳ ವರದಿಗಳ ಆಧಾರದ ಮೇಲೆ ಶಾಸನಬದ್ಧ ಸಂಸ್ಥೆಯ ತನಿಖೆಯನ್ನು ಅನುಮಾನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

ನಂತರ, ಈ ವರ್ಷದ ಜೂನ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿದ್ದ ವಿಶಾಲ್ ತಿವಾರಿ, ಜನವರಿಯಲ್ಲಿ ನೀಡಿದ ಆದೇಶದಂತೆ ಕಾಲಾವಧಿಯ ಒಳಗೆ ತನಿಖೆ ಪೂರ್ಣಗೊಳಿಸಲು ಸೆಬಿಗೆ ನಿರ್ದೇಶಿಸುವಂತೆ ಕೋರಿದ್ದರು. ಆದರೆ, ಈ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ (ಲಿಸ್ಟಿಂಗ್‌), ನ್ಯಾಯಾಲಯ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಿಲ್ಲ ಎಂದಿದ್ದರು.

ಇದೀಗ ಅದಾನಿ ಸಮೂಹಕ್ಕೆ ಸಂಬಂಧಪಟ್ಟಂತೆ ಸೆಬಿ ಅಧ್ಯಕ್ಷೆಯ ವಿರುದ್ದವೇ ಹಿಂಡನ್‌ಬರ್ಗ್‌ ಆರೋಪ ಮಾಡಿರುವ ಹಿನ್ನೆಲೆ, ತನಿಖೆ ಪೂರ್ಣಗೊಳಿಸುವಂತೆ ಸೆಬಿಗೆ ನಿರ್ದೇಶಿಸಲು ವಿಶಾಲ್ ತಿವಾರಿ ಮತ್ತೊಮ್ಮೆ ನ್ಯಾಯಾಲಯವನ್ನು ಕೋರಿದ್ದಾರೆ.

ಪ್ರಕರಣದ ಹಿನ್ನೆಲೆ

ಅದಾನಿ ಸಮೂಹ ತನ್ನ ಷೇರು ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅವುಗಳನ್ನು ತಿರುಚುತ್ತಿದೆ ಎಂದು  ಆರೋಪಿಸಿ ಜನವರಿ 24,2023ರಂದು, ಹಿಂಡೆನ್‌ಬರ್ಗ್ ರಿಸರ್ಚ್ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಯಾಗಿ, ಅದಾನಿ ಸಮೂಹವು 413 ಪುಟಗಳ ಸಮಗ್ರ ಉತ್ತರವನ್ನು ಪ್ರಕಟಿಸುವ ಮೂಲಕ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು.

ಈ ಬೆನ್ನಲ್ಲೇ ವಕೀಲರಾದ ವಿಶಾಲ್ ತಿವಾರಿ, ಎಂ.ಎಲ್ ಶರ್ಮಾ, ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಮತ್ತು ಸಾಮಾಜಿಕ ಕಾರ್ಯಕರ್ತೆ ಅನಾಮಿಕಾ ಜೈಸ್ವಾಲ್ ಅವರು ಅದಾನಿ ಸಮೂಹದ ವಂಚನೆಯ ಆರೋಪಗಳ ಕುರಿತು ತನಿಖೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

ಮಾರ್ಚ್ 2ರಂದು ಈ ವಿಷಯದಲ್ಲಿ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಅದಾನಿ ಸಮೂಹದ ವಿಚಾರವಾಗಿ ಯಾವುದೇ ನಿಯಂತ್ರಕ ವೈಫಲ್ಯವನ್ನು ಹೊಂದಿದ್ದರೆ ತನಿಖೆ ನಡೆಸಲು ಸೆಬಿಯ ತಜ್ಞರ ಸಮಿತಿ ರಚಿಸಿತ್ತು. ತನಿಖಾ ಸಮಿತಿಯು ಒಪಿ ಭಟ್ (ಎಸ್‌ಬಿಐನ ಮಾಜಿ ಅಧ್ಯಕ್ಷ), ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರನ್ ಸುಂದರೇಶನ್ ಅವರನ್ನು ಒಳಗೊಂಡಿದ್ದು, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ ಸಪ್ರೆ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಮಾರ್ಚ್ 2ರ ಆದೇಶದಂತೆ ಸೆಬಿಗೆ ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ನೀಡಿದ್ದ ಎರಡು ತಿಂಗಳ ಸಮಯವು ಮೇ 2 ರಂದು ಕೊನೆಗೊಂಡಿತ್ತು. ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೆಬಿ, ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಅವಧಿಯನ್ನು ವಿಸ್ತರಿಸುವಂತೆ ಕೋರಿತ್ತು.

ಪ್ರಕರಣದ ವಹಿವಾಟುಗಳು ಸಂಕೀರ್ಣವಾಗಿವೆ ಮತ್ತು ಪರಿಶೀಲಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸೆಬಿ ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಕನಿಷ್ಠ ಸಾರ್ವಜನಿಕ ಷೇರುದಾರರ (MPS) ನಿಯಮಗಳ ತನಿಖೆಗೆ ಸಂಬಂಧಿಸಿದಂತೆ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸೆಕ್ಯುರಿಟೀಸ್ ಕಮಿಷನ್ಸ್ (IOSCO) ನೊಂದಿಗೆ ಬಹುಪಕ್ಷೀಯ ತಿಳುವಳಿಕೆ (MMOU) ಅಡಿಯಲ್ಲಿ ಈಗಾಗಲೇ ಹನ್ನೊಂದು ಸಾಗರೋತ್ತರ ನಿಯಂತ್ರಕರನ್ನು ಸಂಪರ್ಕಿಸಿದೆ ಎಂದು ಸೆಬಿ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿತ್ತು.

ಸೆಬಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆರಂಭದಲ್ಲಿ ಸಂಪೂರ್ಣ ಆರು ತಿಂಗಳ ಅವಧಿ ವಿಸ್ತರಣೆ ಮಾಡಲು ನಿರಾಕರಿಸಿತ್ತು. ಆಗಸ್ಟ್ 14, 2023ರವರೆಗೆ ಗಡುವನ್ನು ವಿಸ್ತರಿಸಿ, ಮೇ 17 ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆದರೆ, ಆಗಸ್ಟ್ 14ರಂದು ಕೂಡ ತನಿಖಾ ವರದಿ ಸಲ್ಲಿಸಲು ಸೆಬಿ ವಿಫಲವಾಗಿತ್ತು.

ಈ ಹಿನ್ನೆಲೆ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಸೆಬಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು. ಸೆಬಿಯಿಂದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಕಳೆದ ವರ್ಷ ನವೆಂಬರ್ 24ರಂದು ಆದೇಶ ಕಾಯ್ದಿರಿಸಿತ್ತು.

ಇದನ್ನೂ ಓದಿ : ಪತಂಜಲಿ ದಾರಿತಪ್ಪಿಸುವ ಜಾಹೀರಾತು ಪ್ರಕರಣ: ರಾಮ್‌ದೇವ್, ಎಂಡಿ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...