Homeಮುಖಪುಟಪೂರ್ಣಗೊಳ್ಳದ ಅದಾನಿ ವಿರುದ್ದದ ಸೆಬಿ ತನಿಖೆ : ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ವಕೀಲ ವಿಶಾಲ್ ತಿವಾರಿ

ಪೂರ್ಣಗೊಳ್ಳದ ಅದಾನಿ ವಿರುದ್ದದ ಸೆಬಿ ತನಿಖೆ : ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ವಕೀಲ ವಿಶಾಲ್ ತಿವಾರಿ

- Advertisement -
- Advertisement -

ಉದ್ಯಮಿ ಗೌತಮ್ ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ದಂಪತಿಯ ಪಾಲುದಾರಿಕೆ ಇದೆ ಎಂಬ ಹಿಂಡೆನ್‌ಬರ್ಗ್ ವರದಿ ಸಂಚಲನ ಸೃಷ್ಟಿಸಿರುವ ನಡುವೆ, ಸುಪ್ರೀಂ ಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ.

ಈ ಹಿಂದೆ, 2023ರಲ್ಲಿ ಅದಾನಿ ಶೇರು ಹಗರಣ ಸಂಬಂಧ ತನಿಖೆ ಕೋರಿ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಈ ಬಾರಿಯೂ ಅರ್ಜಿ ಸಲ್ಲಿಸಿದ್ದು, ಅದಾನಿ ಸಮೂಹ ಸಂಸ್ಥೆಗಳ ಕುರಿತ ತನಿಖೆ ಪೂರ್ಣಗೊಳಿಸುವಂತೆ ಸೆಬಿಗೆ ನಿರ್ದೇಶಿಸಲು ಕೋರಿದ್ದಾರೆ.

ಅದಾನಿ ಸಮೂಹದ ಸಂಸ್ಥೆಗಳ ಲೆಕ್ಕಪತ್ರ ವಂಚನೆ ಮತ್ತು ಷೇರು ತಿರುಚುವಿಕೆ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಹೊರಿಸಲಾದ ಆರೋಪಗಳ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಗೆ ಆದೇಶಿಸಲು ವಕೀಲ ವಿಶಾಲ್ ತಿವಾರಿ ನವೆಂಬರ್ 24, 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು.

ಸೆಬಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರಲ್ಲಿ ಹಸ್ತಕ್ಷೇಪ ಮಾಡಲು ಯಾವುದೆ ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿತ್ತು.

ಈ ವೇಳೆ ಅದಾನಿ ಸಮೂಹದ ವಿರುದ್ಧದ 24 ಪ್ರಕರಣಗಳ ಪೈಕಿ 22 ಪ್ರಕರಣಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿದೆ ಎಂದು ಕೋರ್ಟ್ ಗಮನಿಸಿತ್ತು. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು, ಉಳಿದ 2 ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಿತ್ತು.

ಸೆಬಿ ತನಿಖೆಯನ್ನು ಅನುಮಾನಿಸಿ ಅರ್ಜಿದಾರರು ಪತ್ರಿಕೆಯ ವರದಿಗಳು ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ವರದಿ ತೋರಿಸಿರುವುದನ್ನು ಮಾನ್ಯ ಮಾಡಲು ನ್ಯಾಯಾಲಯ ನಿರಾಕರಿಸಿತ್ತು. ಆಧಾರ ರಹಿತ ಸುದ್ದಿ ವರದಿಗಳು ಮತ್ತು ಮೂರನೇ ಪಕ್ಷದ ಸಂಸ್ಥೆಗಳ ವರದಿಗಳ ಆಧಾರದ ಮೇಲೆ ಶಾಸನಬದ್ಧ ಸಂಸ್ಥೆಯ ತನಿಖೆಯನ್ನು ಅನುಮಾನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

ನಂತರ, ಈ ವರ್ಷದ ಜೂನ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿದ್ದ ವಿಶಾಲ್ ತಿವಾರಿ, ಜನವರಿಯಲ್ಲಿ ನೀಡಿದ ಆದೇಶದಂತೆ ಕಾಲಾವಧಿಯ ಒಳಗೆ ತನಿಖೆ ಪೂರ್ಣಗೊಳಿಸಲು ಸೆಬಿಗೆ ನಿರ್ದೇಶಿಸುವಂತೆ ಕೋರಿದ್ದರು. ಆದರೆ, ಈ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ (ಲಿಸ್ಟಿಂಗ್‌), ನ್ಯಾಯಾಲಯ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಿಲ್ಲ ಎಂದಿದ್ದರು.

ಇದೀಗ ಅದಾನಿ ಸಮೂಹಕ್ಕೆ ಸಂಬಂಧಪಟ್ಟಂತೆ ಸೆಬಿ ಅಧ್ಯಕ್ಷೆಯ ವಿರುದ್ದವೇ ಹಿಂಡನ್‌ಬರ್ಗ್‌ ಆರೋಪ ಮಾಡಿರುವ ಹಿನ್ನೆಲೆ, ತನಿಖೆ ಪೂರ್ಣಗೊಳಿಸುವಂತೆ ಸೆಬಿಗೆ ನಿರ್ದೇಶಿಸಲು ವಿಶಾಲ್ ತಿವಾರಿ ಮತ್ತೊಮ್ಮೆ ನ್ಯಾಯಾಲಯವನ್ನು ಕೋರಿದ್ದಾರೆ.

ಪ್ರಕರಣದ ಹಿನ್ನೆಲೆ

ಅದಾನಿ ಸಮೂಹ ತನ್ನ ಷೇರು ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅವುಗಳನ್ನು ತಿರುಚುತ್ತಿದೆ ಎಂದು  ಆರೋಪಿಸಿ ಜನವರಿ 24,2023ರಂದು, ಹಿಂಡೆನ್‌ಬರ್ಗ್ ರಿಸರ್ಚ್ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಯಾಗಿ, ಅದಾನಿ ಸಮೂಹವು 413 ಪುಟಗಳ ಸಮಗ್ರ ಉತ್ತರವನ್ನು ಪ್ರಕಟಿಸುವ ಮೂಲಕ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು.

ಈ ಬೆನ್ನಲ್ಲೇ ವಕೀಲರಾದ ವಿಶಾಲ್ ತಿವಾರಿ, ಎಂ.ಎಲ್ ಶರ್ಮಾ, ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಮತ್ತು ಸಾಮಾಜಿಕ ಕಾರ್ಯಕರ್ತೆ ಅನಾಮಿಕಾ ಜೈಸ್ವಾಲ್ ಅವರು ಅದಾನಿ ಸಮೂಹದ ವಂಚನೆಯ ಆರೋಪಗಳ ಕುರಿತು ತನಿಖೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

ಮಾರ್ಚ್ 2ರಂದು ಈ ವಿಷಯದಲ್ಲಿ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಅದಾನಿ ಸಮೂಹದ ವಿಚಾರವಾಗಿ ಯಾವುದೇ ನಿಯಂತ್ರಕ ವೈಫಲ್ಯವನ್ನು ಹೊಂದಿದ್ದರೆ ತನಿಖೆ ನಡೆಸಲು ಸೆಬಿಯ ತಜ್ಞರ ಸಮಿತಿ ರಚಿಸಿತ್ತು. ತನಿಖಾ ಸಮಿತಿಯು ಒಪಿ ಭಟ್ (ಎಸ್‌ಬಿಐನ ಮಾಜಿ ಅಧ್ಯಕ್ಷ), ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರನ್ ಸುಂದರೇಶನ್ ಅವರನ್ನು ಒಳಗೊಂಡಿದ್ದು, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ ಸಪ್ರೆ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಮಾರ್ಚ್ 2ರ ಆದೇಶದಂತೆ ಸೆಬಿಗೆ ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ನೀಡಿದ್ದ ಎರಡು ತಿಂಗಳ ಸಮಯವು ಮೇ 2 ರಂದು ಕೊನೆಗೊಂಡಿತ್ತು. ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೆಬಿ, ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಅವಧಿಯನ್ನು ವಿಸ್ತರಿಸುವಂತೆ ಕೋರಿತ್ತು.

ಪ್ರಕರಣದ ವಹಿವಾಟುಗಳು ಸಂಕೀರ್ಣವಾಗಿವೆ ಮತ್ತು ಪರಿಶೀಲಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸೆಬಿ ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಕನಿಷ್ಠ ಸಾರ್ವಜನಿಕ ಷೇರುದಾರರ (MPS) ನಿಯಮಗಳ ತನಿಖೆಗೆ ಸಂಬಂಧಿಸಿದಂತೆ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸೆಕ್ಯುರಿಟೀಸ್ ಕಮಿಷನ್ಸ್ (IOSCO) ನೊಂದಿಗೆ ಬಹುಪಕ್ಷೀಯ ತಿಳುವಳಿಕೆ (MMOU) ಅಡಿಯಲ್ಲಿ ಈಗಾಗಲೇ ಹನ್ನೊಂದು ಸಾಗರೋತ್ತರ ನಿಯಂತ್ರಕರನ್ನು ಸಂಪರ್ಕಿಸಿದೆ ಎಂದು ಸೆಬಿ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿತ್ತು.

ಸೆಬಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆರಂಭದಲ್ಲಿ ಸಂಪೂರ್ಣ ಆರು ತಿಂಗಳ ಅವಧಿ ವಿಸ್ತರಣೆ ಮಾಡಲು ನಿರಾಕರಿಸಿತ್ತು. ಆಗಸ್ಟ್ 14, 2023ರವರೆಗೆ ಗಡುವನ್ನು ವಿಸ್ತರಿಸಿ, ಮೇ 17 ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆದರೆ, ಆಗಸ್ಟ್ 14ರಂದು ಕೂಡ ತನಿಖಾ ವರದಿ ಸಲ್ಲಿಸಲು ಸೆಬಿ ವಿಫಲವಾಗಿತ್ತು.

ಈ ಹಿನ್ನೆಲೆ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಸೆಬಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು. ಸೆಬಿಯಿಂದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಕಳೆದ ವರ್ಷ ನವೆಂಬರ್ 24ರಂದು ಆದೇಶ ಕಾಯ್ದಿರಿಸಿತ್ತು.

ಇದನ್ನೂ ಓದಿ : ಪತಂಜಲಿ ದಾರಿತಪ್ಪಿಸುವ ಜಾಹೀರಾತು ಪ್ರಕರಣ: ರಾಮ್‌ದೇವ್, ಎಂಡಿ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಕ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...