Homeಮುಖಪುಟಉನ್ನತ ಶಿಕ್ಷಣ ಸಚಿವರ ಎರಡನೇ ಸಮಾವೇಶ : ಯುಜಿಸಿ ಕರಡು ನಿಯಮಗಳ ವಿರುದ್ಧ ಜಂಟಿ ನಿರ್ಣಯ

ಉನ್ನತ ಶಿಕ್ಷಣ ಸಚಿವರ ಎರಡನೇ ಸಮಾವೇಶ : ಯುಜಿಸಿ ಕರಡು ನಿಯಮಗಳ ವಿರುದ್ಧ ಜಂಟಿ ನಿರ್ಣಯ

- Advertisement -
- Advertisement -

ಬಿಜೆಪಿಯೇತರ ಆಡಳಿತದ ದಕ್ಷಿಣ ರಾಜ್ಯಗಳ ಸಚಿವರು ಭಾಗವಹಿಸಿದ್ದ ಕೇರಳ ಸರ್ಕಾರ ಪ್ರಾಯೋಜಿತ ‘ಯುಜಿಸಿ ಕರಡು ನಿಯಮಗಳು- 2025’ರ ರಾಷ್ಟ್ರೀಯ ಸಮಾವೇಶದಲ್ಲಿ, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಯಮಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಯುಜಿಸಿ ಕರಡು ನಿಯಮಗಳು ಉನ್ನತ ಶಿಕ್ಷಣದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ದುರ್ಬಲಗೊಳಿಸುವ, ಧಾರ್ಮಿಕ ಮತ್ತು ಕೋಮು ಸಿದ್ಧಾಂತಗಳನ್ನು ಉತ್ತೇಜಿಸುವವರ ನಿಯಂತ್ರಣದಲ್ಲಿ ಶಿಕ್ಷಣ ವಲಯವನ್ನು ಇರಿಸುವ ಪ್ರಯತ್ನದ ಭಾಗ” ಎಂದಿದ್ದಾರೆ.

“ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಕಾನೂನು ರಚಿಸುವ ರಾಜ್ಯಗಳ ಅಧಿಕಾರವನ್ನು ಯುಜಿಸಿ ಕರಡು ನಿಯಮಗಳು ಕಿತ್ತುಕೊಳ್ಳಲಿದೆ. ಈ ಮೂಲಕ ಇದು ದೇಶದ ಒಕ್ಕೂಟ ವ್ಯವಸ್ಥೆಯ ಅಡಿಪಾಯವನ್ನೇ ಹಾಳು ಮಾಡಲಿದೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಯುಜಿಸಿ ರಾಜ್ಯ ಸರ್ಕಾರಗಳನ್ನು ವಿಶ್ವವಿದ್ಯಾಲಯಗಳ ಆಡಳಿತದಿಂದ ಹೊರಗಿಡಲು ಪ್ರಯತ್ನಿಸುತ್ತಿವೆ. ಹೊಸ ನಿಯಮಗಳು ಜಾರಿಯಾದರೆ, ರಾಜ್ಯ ವಿಧಾನಸಭೆಗಳು ಜಾರಿಗೆ ತಂದ ಕಾನೂನುಗಳಿಂದ ಸ್ಥಾಪಿಸಲಾದ ಮತ್ತು ರಾಜ್ಯಗಳ ಹಣಕಾಸು ಮತ್ತು ಆಡಳಿತ ಸಂಪನ್ಮೂಲಗಳನ್ನು ಬಳಸಿಕೊಂಡು ನಡೆಸುವ ವಿಶ್ವವಿದ್ಯಾಲಯಗಳ ಮೇಲೆ ರಾಜ್ಯಗಳು ನಿಯಂತ್ರಣ ಕಳೆದುಕೊಳ್ಳಲಿವೆ” ಎಂದಿದ್ದಾರೆ.

ಸಮಾವೇಶವ ಆಯೋಜಿಸಿದಕ್ಕೆ ಸರ್ಕಾರವನ್ನು ಶ್ಲಾಘಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, “ಯುಜಿಸಿ ತನ್ನ ಸಾಂವಿಧಾನಿಕ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸಬೇಕು” ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು “ಕರಡು ನಿಯಮಗಳು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುವುದಲ್ಲದೆ, ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುವ ಅಪಾಯವನ್ನು ಸೂಚಿಸುತ್ತಿವೆ” ಎಂದು ತಿಳಿಸಿದ್ದಾರೆ.

ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮಾತನಾಡಿ, “ಯುಜಿಸಿ ಕರಡು ನಿಯಮಗಳು ಜಾರಿಯಾದರೆ, ರಾಜ್ಯಗಳನ್ನು ತಮ್ಮದೇ ವಿಶ್ವವಿದ್ಯಾಲಯಗಳಲ್ಲಿ ಕೇವಲ ವೀಕ್ಷಕರಾಗಿ ಮಾತ್ರ ಉಳಿಯಲಿವೆ” ಎಂದು ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಯುಜಿಸಿಯ ಕರಡು ನಿಯಮಗಳ ವಿರುದ್ಧ ಇದೇ ರೀತಿಯ ಅಭಿಪ್ರಾಯಗಳನ್ನು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಮತ್ತು ತಮಿಳುನಾಡಿ ಉನ್ನತ ಶಿಕ್ಷಣ ಸಚಿವ ಗೋವಿ ಚೆಝಿಯಾನ್ ವ್ಯಕ್ತಪಡಿಸಿದ್ದಾರೆ.

ಯುಜಿಸಿ ಕರಡು ನಿಯಮಗಳ ವಿರುದ್ದ ಫೆ.5ರಂದು ಬೆಂಗಳೂರಿನಲ್ಲಿ ಮೊದಲ ಉನ್ನತ ಶಿಕ್ಷಣ ಸಚಿವರ ಸಭೆ ನಡೆದಿತ್ತು. ಈ ಸಭೆಯಲ್ಲಿ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ. ಅದೇ ಅಂಶಗಳೊಂದಿಗೆ ಕೇರಳದಲ್ಲಿ ನಡೆದ ಎರಡನೇ ಸಭೆಯಲ್ಲೂ ನಿರ್ಣಯ ಅಂಗೀಕರಿಸಲಾಗಿದೆ.

ಶಿಕ್ಷಣ ಸಂಸ್ಥೆಗಳ ಹೆಸರಿನಿಂದ ಜಾತಿ ಸೂಚಕವನ್ನು ಏಕೆ ತೆಗೆದುಹಾಕಬಾರದು? : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...