Homeಕರೋನಾ ತಲ್ಲಣಮುಂದಿನವಾರ 2-6 ವರ್ಷದ ಮಕ್ಕಳಿಗೆ ಕೋವಾಕ್ಸಿನ್‌ 2ನೇ ಡೋಸ್‌ ಪ್ರಯೋಗ

ಮುಂದಿನವಾರ 2-6 ವರ್ಷದ ಮಕ್ಕಳಿಗೆ ಕೋವಾಕ್ಸಿನ್‌ 2ನೇ ಡೋಸ್‌ ಪ್ರಯೋಗ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ 2 ರಿಂದ 6 ವರ್ಷದ ಮಕ್ಕಳಿಗೆ ನೀಡಲಾಗುತ್ತಿರುವ ಭಾರತ್‌ ಬಯೋಟಿಕ್‌ ಉತ್ಪಾದಿಸಿರುವ ಕೋವಾಕ್ಸಿನ್‌ ಲಸಿಕೆಯ ಎರಡನೇ ಡೋಸ್‌ನ ಪ್ರಯೋಗವನ್ನು ಮುಂದಿನವಾರ ಆರಂಭಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಈಗಾಗಲೇ ಈ ವಯಸ್ಸಿನ ಮಕ್ಕಳು ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ ಎಂದು ಹೇಳಲಾಗಿದೆ. 6 ರಿಂದ 12 ವರ್ಷದ ಮಕ್ಕಳಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಾಕ್ಸಿನ್‌ ಲಸಿಕೆಯ ಎರಡನೇ ಡೋಸ್‌ ನೀಡಲಾಗಿದೆ ಎಂದು ತಿಳಿದು ಬಂದಿದೆ.

ದೆಹಲಿಯ ಏಮ್ಸ್ ಆಸ್ಪತ್ರೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡುವ ಪ್ರಯೋಗ ಕೇಂದ್ರಗಳಲ್ಲಿ ಒಂದಾಗಿದೆ. ಎಲ್ಲಾ ವಯೋಮಾನದವರಿಗೂ ಲಸಿಕೆ ನೀಡಲು ಪ್ರಯೋಗಗಳು ಪೂರ್ಣಗೊಂಡ ನಂತರ ಒಂದು ತಿಂಗಳಲ್ಲಿ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳು ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ಮಕ್ಕಳನ್ನು ವಯಸ್ಸಿನ ಆಧಾರದ ಮೇಲೆ ವಿಂಗಡಿಸಿ, ಮೂರು ಹಂತಗಳಲ್ಲಿ ಲಸಿಕಾ ಪ್ರಯೋಗವನ್ನು ನಡೆಸಲಾಗುತ್ತದೆ. ಮೊದಲ ಪ್ರಯೋಗವನ್ನು 12 ರಿಂದ 18 ವರ್ಷ ವಯಸ್ಸಿನವರಲ್ಲಿ ಪ್ರಾರಂಭಿಸಲಾಗಿತ್ತು. 2ನೇ ಹಂತದಲ್ಲಿ 6 ರಿಂದ 12 ವರ್ಷಗಳ ಮಕ್ಕಳ ಮೇಲೆ ನಡೆಸಿದ್ದು, ಇದೀಗ 3ನೇ ಹಂತದಲ್ಲಿ 2 ರಿಂದ 6 ವರ್ಷ ವಯಸ್ಸಿನ ಮಕ್ಕಳ ಮೇಲೆ ಪ್ರಯೋಗಗಳು ನಡೆಯುತ್ತಿವೆ.

ಭಾರತ್ ಬಯೋಟೆಕ್‌ನ ಸ್ವದೇಶಿ ನಿರ್ಮಿತ ಮಕ್ಕಳ ಲಸಿಕೆಯ ಕ್ಲಿನಿಕಲ್ ಟ್ರಯಲ್‌ಗಳು ಆರಂಭವಾಗಿವೆ. ಸೆಪ್ಟೆಂಬರ್ ಹೊತ್ತಿಗೆ ಲಸಿಕೆ ಪರಿಣಾಮಗಳ ಮಾಹಿತಿ ಸಿಗಲಿದೆ. 2022 ರ ಜನವರಿ ಫೆಬ್ರವರಿ ಹೊತ್ತಿಗೆ ಸ್ವದೇಶಿ ನಿರ್ಮಿತ ಮಕ್ಕಳ ಲಸಿಕೆ ಮುಕ್ತ ಮಾರುಕಟ್ಟೆಯಲ್ಲಿ ಸಿಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಅರೋರಾ ಈ ಹಿಂದೆ ತಿಳಿಸಿದ್ದರು.

ಇನ್ನು, ಸೆಪ್ಟೆಂಬರ್‌ ಹೊತ್ತಿಗೆ  12 ರಿಂದ 18 ವಯೋಮಾನದ ಮಕ್ಕಳಿಗೆ ಝೈಡಸ್‌ ಕ್ಯಾಡಿಲಾ ಲಸಿಕೆ ಸಿಗಲಿದೆ ಎಂದು ರಾಷ್ಟ್ರೀಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಎನ್‌.ಕೆ. ಅರೋರಾ ತಿಳಿಸಿದ್ದರು.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ ಎಂದು ಇತ್ತೀಚೆಗೆ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.


ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ; ಸಾಕ್ಷ್ಯಗಳು ಹೀಗಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...