Homeಮುಖಪುಟದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

- Advertisement -
- Advertisement -

ದಲಿತ ಸಮುದಾಯಕ್ಕೆ ಅವಮಾನ ಮಾಡಿದ ನಟ ಉಪೇಂದ್ರ ಅವರ ವಿರುದ್ಧ ಎರಡನೇ ಪ್ರಕರಣ  ದಾಖಲಾಗಿದೆ.

ಲೈವ್ ವಿಡಿಯೋದಲ್ಲಿ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು  ಹೇಳಿಕೆ ನೀಡಿದ್ದ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಹರೀಶ್ ಕುಮಾರ್ ಎಂಬವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹರೀಶ್ ಕುಮಾರ್ ಅವರು, ಭಾರತೀಯ ದಂಡಸಂಹಿತೆಯ 505(1)(B)(C), 153a, 295, 295A, sc st prevention of atrocities act 1989 ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದು ಗಾದೆಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಇದರ ಬೆನ್ನಲ್ಲೇ ಉಪೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮೊದಲ ಎಫ್ಐಆರ್ ದಾಖಲಾಗಿತ್ತು.

ದೀಪು ಗೌಡ್ರು ಎಂಬವರು ಈ ಕುರಿತು ಪ್ರತಿಕ್ರಿಯಿಸಿ,”ಅಲ್ಲ ಈತನ ಯಾವುದೋ ಒಂದು ಪಕ್ಷದ ಸಿದ್ದಾಂತದ ವಿರುದ್ಧ ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರೆ, ಆ ಜನರನ್ನು “ಹೊಲ್ಗೇರಿ”ಗೆ ಹೊಲಿಸೋದು ಎಷ್ಟರ ಮಟ್ಟಕ್ಕೆ ಸರಿ..?? ಹಾಗಾದರೆ ಈ ಮನುಷ್ಯನ ಪ್ರಕಾರ ಹೊಲ್ಗೇರಿಯಲ್ಲಿ ಬದುಕುವ ಜನರೆಲ್ಲರು ಕೆಟ್ಟವರಾ? ಇಂತಹ ಕೆಟ್ಟ ಮನಸ್ಥಿತಿಗೆನೇ ನಾವು ಬ್ರಾಹ್ಮಣ್ಯ ಅಂತ ಉಗಿಯೋದು.. ಅಲ್ಲ್ರೀ ಸ್ವಾಮಿ ನಿಮಗೆ ನಿಜವಾಗಿಯೂ ಸಮಾಜದ ಮೇಲೆ ಕಾಳಜಿ ಇದಿದ್ದಿದ್ರೆ ಊರಿನಲ್ಲಿ ಹೊಲ್ಗೇರಿನೆ ಇರಬಾರದು ಅನ್ನೋ ಸಮಾನತೆಯ ಸಮಾಜದ ಬಗ್ಗೆ ಯೋಚನೆ ಮಾಡ್ತಿದ್ರಿ” ಎಂದು ಬರೆದಿದ್ದಾರೆ.

ಕರ್ನಾಟಕ ರಾಜ್ಯ ಭೀಮ್ ಆರ್ಮಿ ಅಧ್ಯಕ್ಷರಾದ ರಾಜಗೋಪಾಲ್. ಡಿ ಅವರು ಪ್ರತಿಕ್ರಿಯಿಸಿ, ಉಪೇಂದ್ರ ಅವರೆ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಹೇಳುವುದರ ಮೂಲಕ ನೀವು ದಲಿತರನ್ನು ಅಪಮಾನಿಸುತ್ತಾ ಇದ್ದಿರಿ… ಕೂಡಲೆ ನಿಮ್ಮ ಹೇಳಿಕೆ ವಾಪಸ್ಸು ಪಡೆದುಕೋಳ್ಳಬೇಕು ಮತ್ತೆ ಈ ದಲಿತ ಸಮಾಜಕ್ಕೆ ಕ್ಷಮೆ ಕೇಳಬೇಕು.ಇಲ್ಲದಿದ್ದಲ್ಲಿ ನಿಮ್ಮ ವಿರುದ್ದ ಭೀಮ್ ಆರ್ಮಿ ಮತ್ತು ದಲಿತ ಸಂಘಟನೆಗಳಿಂದ ಹೋರಾಟ ಮಾಡಬೇಕಾಗುತ್ತದೆ ಮತ್ತೆ ದೌರ್ಜನ್ಯ ಕಾಯ್ದೆ ಅಡಿ ನಿಮ್ಮ ಮೇಲೆ ಕೇಸು ದಾಖಲಿಸಬೇಕಾಗುತ್ತದೆ ಎಂದು ಹೇಳಿದ್ದರು.

ಉಪೇಂದ್ರ ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪನೆಯನ್ನು ಕೇಳಿದ್ದು, ಬಾಯಿ ತಪ್ಪಿನಿಂದ  ಗಾದೆ ಮಾತು ಬಂದಿದೆ. ಇದರಿಂದ ಹಲವರ ಭಾವನೆಗಳು ಧಕ್ಕೆಯಾಗಿರುವುದನ್ನು ಗಮನಿಸಿ ತಕ್ಷಣ ಲೈವ್ ವಿಡಿಯೋವನ್ನು ಡಿಲಿಟ್ ಮಾಡಿದ್ದೇನೆ. ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದರು.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚಿಸಿದ ನಟ ಉಪೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...