Homeಮುಖಪುಟದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

- Advertisement -
- Advertisement -

ದಲಿತ ಸಮುದಾಯಕ್ಕೆ ಅವಮಾನ ಮಾಡಿದ ನಟ ಉಪೇಂದ್ರ ಅವರ ವಿರುದ್ಧ ಎರಡನೇ ಪ್ರಕರಣ  ದಾಖಲಾಗಿದೆ.

ಲೈವ್ ವಿಡಿಯೋದಲ್ಲಿ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು  ಹೇಳಿಕೆ ನೀಡಿದ್ದ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಹರೀಶ್ ಕುಮಾರ್ ಎಂಬವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹರೀಶ್ ಕುಮಾರ್ ಅವರು, ಭಾರತೀಯ ದಂಡಸಂಹಿತೆಯ 505(1)(B)(C), 153a, 295, 295A, sc st prevention of atrocities act 1989 ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದು ಗಾದೆಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಇದರ ಬೆನ್ನಲ್ಲೇ ಉಪೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮೊದಲ ಎಫ್ಐಆರ್ ದಾಖಲಾಗಿತ್ತು.

ದೀಪು ಗೌಡ್ರು ಎಂಬವರು ಈ ಕುರಿತು ಪ್ರತಿಕ್ರಿಯಿಸಿ,”ಅಲ್ಲ ಈತನ ಯಾವುದೋ ಒಂದು ಪಕ್ಷದ ಸಿದ್ದಾಂತದ ವಿರುದ್ಧ ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರೆ, ಆ ಜನರನ್ನು “ಹೊಲ್ಗೇರಿ”ಗೆ ಹೊಲಿಸೋದು ಎಷ್ಟರ ಮಟ್ಟಕ್ಕೆ ಸರಿ..?? ಹಾಗಾದರೆ ಈ ಮನುಷ್ಯನ ಪ್ರಕಾರ ಹೊಲ್ಗೇರಿಯಲ್ಲಿ ಬದುಕುವ ಜನರೆಲ್ಲರು ಕೆಟ್ಟವರಾ? ಇಂತಹ ಕೆಟ್ಟ ಮನಸ್ಥಿತಿಗೆನೇ ನಾವು ಬ್ರಾಹ್ಮಣ್ಯ ಅಂತ ಉಗಿಯೋದು.. ಅಲ್ಲ್ರೀ ಸ್ವಾಮಿ ನಿಮಗೆ ನಿಜವಾಗಿಯೂ ಸಮಾಜದ ಮೇಲೆ ಕಾಳಜಿ ಇದಿದ್ದಿದ್ರೆ ಊರಿನಲ್ಲಿ ಹೊಲ್ಗೇರಿನೆ ಇರಬಾರದು ಅನ್ನೋ ಸಮಾನತೆಯ ಸಮಾಜದ ಬಗ್ಗೆ ಯೋಚನೆ ಮಾಡ್ತಿದ್ರಿ” ಎಂದು ಬರೆದಿದ್ದಾರೆ.

ಕರ್ನಾಟಕ ರಾಜ್ಯ ಭೀಮ್ ಆರ್ಮಿ ಅಧ್ಯಕ್ಷರಾದ ರಾಜಗೋಪಾಲ್. ಡಿ ಅವರು ಪ್ರತಿಕ್ರಿಯಿಸಿ, ಉಪೇಂದ್ರ ಅವರೆ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಹೇಳುವುದರ ಮೂಲಕ ನೀವು ದಲಿತರನ್ನು ಅಪಮಾನಿಸುತ್ತಾ ಇದ್ದಿರಿ… ಕೂಡಲೆ ನಿಮ್ಮ ಹೇಳಿಕೆ ವಾಪಸ್ಸು ಪಡೆದುಕೋಳ್ಳಬೇಕು ಮತ್ತೆ ಈ ದಲಿತ ಸಮಾಜಕ್ಕೆ ಕ್ಷಮೆ ಕೇಳಬೇಕು.ಇಲ್ಲದಿದ್ದಲ್ಲಿ ನಿಮ್ಮ ವಿರುದ್ದ ಭೀಮ್ ಆರ್ಮಿ ಮತ್ತು ದಲಿತ ಸಂಘಟನೆಗಳಿಂದ ಹೋರಾಟ ಮಾಡಬೇಕಾಗುತ್ತದೆ ಮತ್ತೆ ದೌರ್ಜನ್ಯ ಕಾಯ್ದೆ ಅಡಿ ನಿಮ್ಮ ಮೇಲೆ ಕೇಸು ದಾಖಲಿಸಬೇಕಾಗುತ್ತದೆ ಎಂದು ಹೇಳಿದ್ದರು.

ಉಪೇಂದ್ರ ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪನೆಯನ್ನು ಕೇಳಿದ್ದು, ಬಾಯಿ ತಪ್ಪಿನಿಂದ  ಗಾದೆ ಮಾತು ಬಂದಿದೆ. ಇದರಿಂದ ಹಲವರ ಭಾವನೆಗಳು ಧಕ್ಕೆಯಾಗಿರುವುದನ್ನು ಗಮನಿಸಿ ತಕ್ಷಣ ಲೈವ್ ವಿಡಿಯೋವನ್ನು ಡಿಲಿಟ್ ಮಾಡಿದ್ದೇನೆ. ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದರು.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚಿಸಿದ ನಟ ಉಪೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...