Homeಮುಖಪುಟದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

- Advertisement -
- Advertisement -

ದಲಿತ ಸಮುದಾಯಕ್ಕೆ ಅವಮಾನ ಮಾಡಿದ ನಟ ಉಪೇಂದ್ರ ಅವರ ವಿರುದ್ಧ ಎರಡನೇ ಪ್ರಕರಣ  ದಾಖಲಾಗಿದೆ.

ಲೈವ್ ವಿಡಿಯೋದಲ್ಲಿ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು  ಹೇಳಿಕೆ ನೀಡಿದ್ದ ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಹರೀಶ್ ಕುಮಾರ್ ಎಂಬವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹರೀಶ್ ಕುಮಾರ್ ಅವರು, ಭಾರತೀಯ ದಂಡಸಂಹಿತೆಯ 505(1)(B)(C), 153a, 295, 295A, sc st prevention of atrocities act 1989 ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದು ಗಾದೆಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಇದರ ಬೆನ್ನಲ್ಲೇ ಉಪೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮೊದಲ ಎಫ್ಐಆರ್ ದಾಖಲಾಗಿತ್ತು.

ದೀಪು ಗೌಡ್ರು ಎಂಬವರು ಈ ಕುರಿತು ಪ್ರತಿಕ್ರಿಯಿಸಿ,”ಅಲ್ಲ ಈತನ ಯಾವುದೋ ಒಂದು ಪಕ್ಷದ ಸಿದ್ದಾಂತದ ವಿರುದ್ಧ ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರೆ, ಆ ಜನರನ್ನು “ಹೊಲ್ಗೇರಿ”ಗೆ ಹೊಲಿಸೋದು ಎಷ್ಟರ ಮಟ್ಟಕ್ಕೆ ಸರಿ..?? ಹಾಗಾದರೆ ಈ ಮನುಷ್ಯನ ಪ್ರಕಾರ ಹೊಲ್ಗೇರಿಯಲ್ಲಿ ಬದುಕುವ ಜನರೆಲ್ಲರು ಕೆಟ್ಟವರಾ? ಇಂತಹ ಕೆಟ್ಟ ಮನಸ್ಥಿತಿಗೆನೇ ನಾವು ಬ್ರಾಹ್ಮಣ್ಯ ಅಂತ ಉಗಿಯೋದು.. ಅಲ್ಲ್ರೀ ಸ್ವಾಮಿ ನಿಮಗೆ ನಿಜವಾಗಿಯೂ ಸಮಾಜದ ಮೇಲೆ ಕಾಳಜಿ ಇದಿದ್ದಿದ್ರೆ ಊರಿನಲ್ಲಿ ಹೊಲ್ಗೇರಿನೆ ಇರಬಾರದು ಅನ್ನೋ ಸಮಾನತೆಯ ಸಮಾಜದ ಬಗ್ಗೆ ಯೋಚನೆ ಮಾಡ್ತಿದ್ರಿ” ಎಂದು ಬರೆದಿದ್ದಾರೆ.

ಕರ್ನಾಟಕ ರಾಜ್ಯ ಭೀಮ್ ಆರ್ಮಿ ಅಧ್ಯಕ್ಷರಾದ ರಾಜಗೋಪಾಲ್. ಡಿ ಅವರು ಪ್ರತಿಕ್ರಿಯಿಸಿ, ಉಪೇಂದ್ರ ಅವರೆ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಹೇಳುವುದರ ಮೂಲಕ ನೀವು ದಲಿತರನ್ನು ಅಪಮಾನಿಸುತ್ತಾ ಇದ್ದಿರಿ… ಕೂಡಲೆ ನಿಮ್ಮ ಹೇಳಿಕೆ ವಾಪಸ್ಸು ಪಡೆದುಕೋಳ್ಳಬೇಕು ಮತ್ತೆ ಈ ದಲಿತ ಸಮಾಜಕ್ಕೆ ಕ್ಷಮೆ ಕೇಳಬೇಕು.ಇಲ್ಲದಿದ್ದಲ್ಲಿ ನಿಮ್ಮ ವಿರುದ್ದ ಭೀಮ್ ಆರ್ಮಿ ಮತ್ತು ದಲಿತ ಸಂಘಟನೆಗಳಿಂದ ಹೋರಾಟ ಮಾಡಬೇಕಾಗುತ್ತದೆ ಮತ್ತೆ ದೌರ್ಜನ್ಯ ಕಾಯ್ದೆ ಅಡಿ ನಿಮ್ಮ ಮೇಲೆ ಕೇಸು ದಾಖಲಿಸಬೇಕಾಗುತ್ತದೆ ಎಂದು ಹೇಳಿದ್ದರು.

ಉಪೇಂದ್ರ ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪನೆಯನ್ನು ಕೇಳಿದ್ದು, ಬಾಯಿ ತಪ್ಪಿನಿಂದ  ಗಾದೆ ಮಾತು ಬಂದಿದೆ. ಇದರಿಂದ ಹಲವರ ಭಾವನೆಗಳು ಧಕ್ಕೆಯಾಗಿರುವುದನ್ನು ಗಮನಿಸಿ ತಕ್ಷಣ ಲೈವ್ ವಿಡಿಯೋವನ್ನು ಡಿಲಿಟ್ ಮಾಡಿದ್ದೇನೆ. ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದರು.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚಿಸಿದ ನಟ ಉಪೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...