Homeಮುಖಪುಟಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

- Advertisement -
- Advertisement -

ಜನವರಿ 22ರಂದು ನಡೆದಿದ್ದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್)ನ ಕ್ಯಾಂಪಸ್‌ನಲ್ಲಿ ಬಲಪಂಥೀಯ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ನಿರಾಕರಿಸುವಂತೆ ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ ಮತ್ತು ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದ ತಂಡದಲ್ಲಿದ್ದ ವಿದ್ಯಾರ್ಥಿಯನ್ನು ಮುಂಬೈನ ಗೋವಂಡಿ ಪೊಲೀಸ್ ಠಾಣೆಯು ಪೊಲೀಸರು ಬಂಧಿಸಿದ್ದಾರೆ. ಇದು ಈ ಪ್ರಕರಣದಲ್ಲಿ ಇದುವರೆಗೆ ನಡೆದ ಎರಡನೇ ಬಂಧನವಾಗಿದೆ.

ಈ ವಿದ್ಯಾರ್ಥಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಪೋಸ್ಟ್ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಜನವರಿ 22 ರಂದು ಪೊಲೀಸರು ಬಂಧಿಸಿ ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ವಿದ್ಯಾರ್ಥಿಯ ಸಹಪಾಠಿಗಳ ಪ್ರಕಾರ, ಪೊಲೀಸರು ಫೆಬ್ರವರಿ 21ರ ಮುಂಜಾನೆ ಐಐಪಿಎಸ್ ಕ್ಯಾಂಪಸ್‌ನಲ್ಲೇ ಆರೋಪಿತ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ಮತ್ತು ಅದರ ಮುಖ್ಯ ನಿರ್ವಾಹಕರು ಮತ್ತು ರಿಜಿಸ್ಟ್ರಾರ್ ಪ್ರಶಾಂತ್ ಬೋರ್ಡೆ ಅವರನ್ನು ಈ ಬಗ್ಗೆ ಮಾದ್ಯಮಗಳು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ದಿ ವೈರ್‌ ವರದಿ ಹೇಳಿದೆ. ಬಂಧನದ ಬಗ್ಗೆ ದಿ ವೈರ್‌ನ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್, ದಯವಿಟ್ಟು ನಾಳೆ ಐಐಪಿಎಸ್‌ಗೆ ಭೇಟಿ ನೀಡಿ, ಸುಳ್ಳು ಪ್ರಚಾರ ಮಾಡುವ ಬದಲು ಸತ್ಯವನ್ನು ಕಂಡುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಬಂಧನದ ಮಾಹಿತಿಯು ಸತ್ಯವಲ್ಲವೇ ಎಂದು ವರದಿಗಾರರು ಕೇಳಿದಾಗ, ಸಿಂಗ್ ಸ್ಪಷ್ಟಪಡಿಸಲಿಲ್ಲ ಎಂದು ವೈರ್‌ ವರದಿಯಲ್ಲಿ ಉಲ್ಲೇಖಿಸಿದೆ.

ರಾಮಮಂದಿರ ಉದ್ಘಾಟನೆ ವೇಳೆ ಐಐಪಿಎಸ್ ಸಂಸ್ಥೆಯಲ್ಲಿ ಬಲಪಂಥೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದ್ದರು. ಬಹುಜನ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಗುಂಪು, ಕ್ಯಾಂಪಸ್‌ನಲ್ಲಿ ಆಚರಣೆಗೆ ಅವಕಾಶ ನೀಡುವುದರ ಹಿಂದಿನ ಸಮಸ್ಯೆಯ ಕುರಿತು ಸಿಂಗ್‌ಗೆ ಪತ್ರವನ್ನು ಬರೆದಿದ್ದರು. ಪತ್ರವು ಗೌಪ್ಯವಾಗಿತ್ತು ಮತ್ತು ಅದರಲ್ಲಿ ಕನಿಷ್ಠ 35 ಮಂದಿ ವಿದ್ಯಾರ್ಥಿಗಳು ಸಹಿ ಮಾಡಿದ್ದರು. ಬಳಿಕ ಪತ್ರವು ಸೋರಿಕೆಯು ಕ್ಯಾಂಪಸ್‌ನಲ್ಲಿ ಮತ್ತು ಹೊರಗಿನ ಬಲಪಂಥೀಯ ಕಾರ್ಯಕರ್ತರಿಗೆ ತಲುಪಿದೆ.

ಸಹಿ ಮಾಡಿದವರಲ್ಲಿ ಓರ್ವನಾದ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೇರಿದ 23 ವರ್ಷದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಗಿತ್ತು. ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) ಮತ್ತು 295(A)ಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಈತ ರಾಮಮಂದಿರ ಉದ್ಘಾಟನೆ ದಿನ ಕ್ಯಾಂಪಸ್‌ನಲ್ಲಿ ಆಚರಣೆಯನ್ನು ಟೀಕಿಸುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಮಾತ್ರ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪೊಲೀಸರು ತನಿಖೆಯ ಸಮಯದಲ್ಲಿ ಪೋಸ್ಟ್‌ನ ಮೂಲವನ್ನು ಕಂಡುಹಿಡಿದರು ಮತ್ತು ಇತರ ವಿದ್ಯಾರ್ಥಿಯನ್ನು ಹಲವು ಬಾರಿ ವಿಚಾರಣೆಗೆ ಕರೆದಿದ್ದರು. ಮೂಲತಃ ಕೇರಳದ ಈ ವಿದ್ಯಾರ್ಥಿ ಕೆಲವು ವಾರಗಳ ಹಿಂದೆ ತನ್ನ ಊರಿಗೆ ಮರಳಿದ್ದ. ಇದೀಗ ವಿದ್ಯಾರ್ಥಿ ಕ್ಯಾಂಪಸ್‌ಗೆ ತೆರಳಿದ್ದು, ಆತನಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ಇತರ ವಿದ್ಯಾರ್ಥಿಗಳು ಹೇಳಿದ್ದಾರೆ. ಕೇರಳದಲ್ಲಿರುವ ವಿದ್ಯಾರ್ಥಿಯ ಕುಟುಂಬ ಕೂಡ ವಿದ್ಯಾರ್ಥಿಯ ಬಂಧನದ ಸುದ್ದಿಯನ್ನು ಖಚಿತಪಡಿಸಿದೆ. ವಿದ್ಯಾರ್ಥಿಯನ್ನು ಇಂದು ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ನಿರ್ದೇಶಕರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಹೀಗೆ ಬರೆದಿದ್ದಾರೆ: ಐಐಪಿಎಸ್ ಬಹುಸಂಸ್ಕೃತಿಯ ಕ್ಯಾಂಪಸ್ ಆಗಿದ್ದು, ಗಣೇಶ ಚತುರ್ಥಿ, ದಸರಾ, ಕ್ರಿಸ್‌ಮಸ್ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಆಚರಣೆಗಳನ್ನು ಆಯೋಜಿಸುತ್ತದೆ, ಭಾರತದಂತಹ ರಾಜ್ಯ ಇದು ವೈವಿಧ್ಯಮಯ ರಾಷ್ಟ್ರಕ್ಕೆ ಸಮೃದ್ಧಿಯನ್ನು ನೀಡಬಲ್ಲ ಜಾತ್ಯತೀತ ಯುವ ಪೀಳಿಗೆಯನ್ನು ರೂಪಿಸುವ ಭರವಸೆಯನ್ನು ಸಾರುತ್ತದೆ. ಆದರೆ ರಾಮ ಮಂದಿರದ ಪ್ರತಿಷ್ಠಾಪನೆಯ ಆಚರಣೆಯು ಐಐಪಿಎಸ್‌ನಂತಹ ಸಂಸ್ಥೆಯಲ್ಲಿ ಆಚರಿಸುವಾಗ ವಿದ್ಯಾರ್ಥಿಗಳ ಜಾತ್ಯತೀತ ಭಾವನೆಗಳಿಗೆ ಹಾನಿಯುಂಟುಮಾಡುತ್ತದೆ. ಇದು ವಿವಿಧ ಸಂಘಟನೆಗಳಿಂದ ಆಯೋಜಿಸಲಾದ ರಾಜಕೀಯ ಅಜೆಂಡಾದ ಕಾರ್ಯವಾಗಿದೆ, ಅಂತಹ ಆಚರಣೆಗಳನ್ನು ಇಲ್ಲಿ ಮಾಡಬಾರದು. ದ್ವೇಷ ಮತ್ತು ಭಯವನ್ನು ಹರಡುವ ಮೂಲಕ ವಿದ್ಯಾರ್ಥಿಗಳ ನಡುವಿನ ಭ್ರಾತೃತ್ವವನ್ನು ನಾಶಪಡಿಸುವ  ಸಾಮರ್ಥ್ಯವನ್ನು ಹೊಂದಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಚರಣೆಗಳ ಮೇಲೆ ನಿರ್ಬಂಧಗಳನ್ನು ಹೇರುವಂತೆ ಕೋರಿದ್ದರು.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...