Homeಮುಖಪುಟಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

- Advertisement -
- Advertisement -

ಜನವರಿ 22ರಂದು ನಡೆದಿದ್ದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್)ನ ಕ್ಯಾಂಪಸ್‌ನಲ್ಲಿ ಬಲಪಂಥೀಯ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ನಿರಾಕರಿಸುವಂತೆ ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ ಮತ್ತು ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದ ತಂಡದಲ್ಲಿದ್ದ ವಿದ್ಯಾರ್ಥಿಯನ್ನು ಮುಂಬೈನ ಗೋವಂಡಿ ಪೊಲೀಸ್ ಠಾಣೆಯು ಪೊಲೀಸರು ಬಂಧಿಸಿದ್ದಾರೆ. ಇದು ಈ ಪ್ರಕರಣದಲ್ಲಿ ಇದುವರೆಗೆ ನಡೆದ ಎರಡನೇ ಬಂಧನವಾಗಿದೆ.

ಈ ವಿದ್ಯಾರ್ಥಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಪೋಸ್ಟ್ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಜನವರಿ 22 ರಂದು ಪೊಲೀಸರು ಬಂಧಿಸಿ ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ವಿದ್ಯಾರ್ಥಿಯ ಸಹಪಾಠಿಗಳ ಪ್ರಕಾರ, ಪೊಲೀಸರು ಫೆಬ್ರವರಿ 21ರ ಮುಂಜಾನೆ ಐಐಪಿಎಸ್ ಕ್ಯಾಂಪಸ್‌ನಲ್ಲೇ ಆರೋಪಿತ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ಮತ್ತು ಅದರ ಮುಖ್ಯ ನಿರ್ವಾಹಕರು ಮತ್ತು ರಿಜಿಸ್ಟ್ರಾರ್ ಪ್ರಶಾಂತ್ ಬೋರ್ಡೆ ಅವರನ್ನು ಈ ಬಗ್ಗೆ ಮಾದ್ಯಮಗಳು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ದಿ ವೈರ್‌ ವರದಿ ಹೇಳಿದೆ. ಬಂಧನದ ಬಗ್ಗೆ ದಿ ವೈರ್‌ನ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್, ದಯವಿಟ್ಟು ನಾಳೆ ಐಐಪಿಎಸ್‌ಗೆ ಭೇಟಿ ನೀಡಿ, ಸುಳ್ಳು ಪ್ರಚಾರ ಮಾಡುವ ಬದಲು ಸತ್ಯವನ್ನು ಕಂಡುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಬಂಧನದ ಮಾಹಿತಿಯು ಸತ್ಯವಲ್ಲವೇ ಎಂದು ವರದಿಗಾರರು ಕೇಳಿದಾಗ, ಸಿಂಗ್ ಸ್ಪಷ್ಟಪಡಿಸಲಿಲ್ಲ ಎಂದು ವೈರ್‌ ವರದಿಯಲ್ಲಿ ಉಲ್ಲೇಖಿಸಿದೆ.

ರಾಮಮಂದಿರ ಉದ್ಘಾಟನೆ ವೇಳೆ ಐಐಪಿಎಸ್ ಸಂಸ್ಥೆಯಲ್ಲಿ ಬಲಪಂಥೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದ್ದರು. ಬಹುಜನ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಗುಂಪು, ಕ್ಯಾಂಪಸ್‌ನಲ್ಲಿ ಆಚರಣೆಗೆ ಅವಕಾಶ ನೀಡುವುದರ ಹಿಂದಿನ ಸಮಸ್ಯೆಯ ಕುರಿತು ಸಿಂಗ್‌ಗೆ ಪತ್ರವನ್ನು ಬರೆದಿದ್ದರು. ಪತ್ರವು ಗೌಪ್ಯವಾಗಿತ್ತು ಮತ್ತು ಅದರಲ್ಲಿ ಕನಿಷ್ಠ 35 ಮಂದಿ ವಿದ್ಯಾರ್ಥಿಗಳು ಸಹಿ ಮಾಡಿದ್ದರು. ಬಳಿಕ ಪತ್ರವು ಸೋರಿಕೆಯು ಕ್ಯಾಂಪಸ್‌ನಲ್ಲಿ ಮತ್ತು ಹೊರಗಿನ ಬಲಪಂಥೀಯ ಕಾರ್ಯಕರ್ತರಿಗೆ ತಲುಪಿದೆ.

ಸಹಿ ಮಾಡಿದವರಲ್ಲಿ ಓರ್ವನಾದ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೇರಿದ 23 ವರ್ಷದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಗಿತ್ತು. ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) ಮತ್ತು 295(A)ಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಈತ ರಾಮಮಂದಿರ ಉದ್ಘಾಟನೆ ದಿನ ಕ್ಯಾಂಪಸ್‌ನಲ್ಲಿ ಆಚರಣೆಯನ್ನು ಟೀಕಿಸುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಮಾತ್ರ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪೊಲೀಸರು ತನಿಖೆಯ ಸಮಯದಲ್ಲಿ ಪೋಸ್ಟ್‌ನ ಮೂಲವನ್ನು ಕಂಡುಹಿಡಿದರು ಮತ್ತು ಇತರ ವಿದ್ಯಾರ್ಥಿಯನ್ನು ಹಲವು ಬಾರಿ ವಿಚಾರಣೆಗೆ ಕರೆದಿದ್ದರು. ಮೂಲತಃ ಕೇರಳದ ಈ ವಿದ್ಯಾರ್ಥಿ ಕೆಲವು ವಾರಗಳ ಹಿಂದೆ ತನ್ನ ಊರಿಗೆ ಮರಳಿದ್ದ. ಇದೀಗ ವಿದ್ಯಾರ್ಥಿ ಕ್ಯಾಂಪಸ್‌ಗೆ ತೆರಳಿದ್ದು, ಆತನಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ಇತರ ವಿದ್ಯಾರ್ಥಿಗಳು ಹೇಳಿದ್ದಾರೆ. ಕೇರಳದಲ್ಲಿರುವ ವಿದ್ಯಾರ್ಥಿಯ ಕುಟುಂಬ ಕೂಡ ವಿದ್ಯಾರ್ಥಿಯ ಬಂಧನದ ಸುದ್ದಿಯನ್ನು ಖಚಿತಪಡಿಸಿದೆ. ವಿದ್ಯಾರ್ಥಿಯನ್ನು ಇಂದು ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ನಿರ್ದೇಶಕರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಹೀಗೆ ಬರೆದಿದ್ದಾರೆ: ಐಐಪಿಎಸ್ ಬಹುಸಂಸ್ಕೃತಿಯ ಕ್ಯಾಂಪಸ್ ಆಗಿದ್ದು, ಗಣೇಶ ಚತುರ್ಥಿ, ದಸರಾ, ಕ್ರಿಸ್‌ಮಸ್ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಆಚರಣೆಗಳನ್ನು ಆಯೋಜಿಸುತ್ತದೆ, ಭಾರತದಂತಹ ರಾಜ್ಯ ಇದು ವೈವಿಧ್ಯಮಯ ರಾಷ್ಟ್ರಕ್ಕೆ ಸಮೃದ್ಧಿಯನ್ನು ನೀಡಬಲ್ಲ ಜಾತ್ಯತೀತ ಯುವ ಪೀಳಿಗೆಯನ್ನು ರೂಪಿಸುವ ಭರವಸೆಯನ್ನು ಸಾರುತ್ತದೆ. ಆದರೆ ರಾಮ ಮಂದಿರದ ಪ್ರತಿಷ್ಠಾಪನೆಯ ಆಚರಣೆಯು ಐಐಪಿಎಸ್‌ನಂತಹ ಸಂಸ್ಥೆಯಲ್ಲಿ ಆಚರಿಸುವಾಗ ವಿದ್ಯಾರ್ಥಿಗಳ ಜಾತ್ಯತೀತ ಭಾವನೆಗಳಿಗೆ ಹಾನಿಯುಂಟುಮಾಡುತ್ತದೆ. ಇದು ವಿವಿಧ ಸಂಘಟನೆಗಳಿಂದ ಆಯೋಜಿಸಲಾದ ರಾಜಕೀಯ ಅಜೆಂಡಾದ ಕಾರ್ಯವಾಗಿದೆ, ಅಂತಹ ಆಚರಣೆಗಳನ್ನು ಇಲ್ಲಿ ಮಾಡಬಾರದು. ದ್ವೇಷ ಮತ್ತು ಭಯವನ್ನು ಹರಡುವ ಮೂಲಕ ವಿದ್ಯಾರ್ಥಿಗಳ ನಡುವಿನ ಭ್ರಾತೃತ್ವವನ್ನು ನಾಶಪಡಿಸುವ  ಸಾಮರ್ಥ್ಯವನ್ನು ಹೊಂದಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಚರಣೆಗಳ ಮೇಲೆ ನಿರ್ಬಂಧಗಳನ್ನು ಹೇರುವಂತೆ ಕೋರಿದ್ದರು.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...