Homeಮುಖಪುಟಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

- Advertisement -
- Advertisement -

ಜನವರಿ 22ರಂದು ನಡೆದಿದ್ದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್)ನ ಕ್ಯಾಂಪಸ್‌ನಲ್ಲಿ ಬಲಪಂಥೀಯ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ನಿರಾಕರಿಸುವಂತೆ ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ ಮತ್ತು ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದ ತಂಡದಲ್ಲಿದ್ದ ವಿದ್ಯಾರ್ಥಿಯನ್ನು ಮುಂಬೈನ ಗೋವಂಡಿ ಪೊಲೀಸ್ ಠಾಣೆಯು ಪೊಲೀಸರು ಬಂಧಿಸಿದ್ದಾರೆ. ಇದು ಈ ಪ್ರಕರಣದಲ್ಲಿ ಇದುವರೆಗೆ ನಡೆದ ಎರಡನೇ ಬಂಧನವಾಗಿದೆ.

ಈ ವಿದ್ಯಾರ್ಥಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಪೋಸ್ಟ್ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಜನವರಿ 22 ರಂದು ಪೊಲೀಸರು ಬಂಧಿಸಿ ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ವಿದ್ಯಾರ್ಥಿಯ ಸಹಪಾಠಿಗಳ ಪ್ರಕಾರ, ಪೊಲೀಸರು ಫೆಬ್ರವರಿ 21ರ ಮುಂಜಾನೆ ಐಐಪಿಎಸ್ ಕ್ಯಾಂಪಸ್‌ನಲ್ಲೇ ಆರೋಪಿತ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ಮತ್ತು ಅದರ ಮುಖ್ಯ ನಿರ್ವಾಹಕರು ಮತ್ತು ರಿಜಿಸ್ಟ್ರಾರ್ ಪ್ರಶಾಂತ್ ಬೋರ್ಡೆ ಅವರನ್ನು ಈ ಬಗ್ಗೆ ಮಾದ್ಯಮಗಳು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ದಿ ವೈರ್‌ ವರದಿ ಹೇಳಿದೆ. ಬಂಧನದ ಬಗ್ಗೆ ದಿ ವೈರ್‌ನ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್, ದಯವಿಟ್ಟು ನಾಳೆ ಐಐಪಿಎಸ್‌ಗೆ ಭೇಟಿ ನೀಡಿ, ಸುಳ್ಳು ಪ್ರಚಾರ ಮಾಡುವ ಬದಲು ಸತ್ಯವನ್ನು ಕಂಡುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಬಂಧನದ ಮಾಹಿತಿಯು ಸತ್ಯವಲ್ಲವೇ ಎಂದು ವರದಿಗಾರರು ಕೇಳಿದಾಗ, ಸಿಂಗ್ ಸ್ಪಷ್ಟಪಡಿಸಲಿಲ್ಲ ಎಂದು ವೈರ್‌ ವರದಿಯಲ್ಲಿ ಉಲ್ಲೇಖಿಸಿದೆ.

ರಾಮಮಂದಿರ ಉದ್ಘಾಟನೆ ವೇಳೆ ಐಐಪಿಎಸ್ ಸಂಸ್ಥೆಯಲ್ಲಿ ಬಲಪಂಥೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದ್ದರು. ಬಹುಜನ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಗುಂಪು, ಕ್ಯಾಂಪಸ್‌ನಲ್ಲಿ ಆಚರಣೆಗೆ ಅವಕಾಶ ನೀಡುವುದರ ಹಿಂದಿನ ಸಮಸ್ಯೆಯ ಕುರಿತು ಸಿಂಗ್‌ಗೆ ಪತ್ರವನ್ನು ಬರೆದಿದ್ದರು. ಪತ್ರವು ಗೌಪ್ಯವಾಗಿತ್ತು ಮತ್ತು ಅದರಲ್ಲಿ ಕನಿಷ್ಠ 35 ಮಂದಿ ವಿದ್ಯಾರ್ಥಿಗಳು ಸಹಿ ಮಾಡಿದ್ದರು. ಬಳಿಕ ಪತ್ರವು ಸೋರಿಕೆಯು ಕ್ಯಾಂಪಸ್‌ನಲ್ಲಿ ಮತ್ತು ಹೊರಗಿನ ಬಲಪಂಥೀಯ ಕಾರ್ಯಕರ್ತರಿಗೆ ತಲುಪಿದೆ.

ಸಹಿ ಮಾಡಿದವರಲ್ಲಿ ಓರ್ವನಾದ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೇರಿದ 23 ವರ್ಷದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಗಿತ್ತು. ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) ಮತ್ತು 295(A)ಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಈತ ರಾಮಮಂದಿರ ಉದ್ಘಾಟನೆ ದಿನ ಕ್ಯಾಂಪಸ್‌ನಲ್ಲಿ ಆಚರಣೆಯನ್ನು ಟೀಕಿಸುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಮಾತ್ರ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪೊಲೀಸರು ತನಿಖೆಯ ಸಮಯದಲ್ಲಿ ಪೋಸ್ಟ್‌ನ ಮೂಲವನ್ನು ಕಂಡುಹಿಡಿದರು ಮತ್ತು ಇತರ ವಿದ್ಯಾರ್ಥಿಯನ್ನು ಹಲವು ಬಾರಿ ವಿಚಾರಣೆಗೆ ಕರೆದಿದ್ದರು. ಮೂಲತಃ ಕೇರಳದ ಈ ವಿದ್ಯಾರ್ಥಿ ಕೆಲವು ವಾರಗಳ ಹಿಂದೆ ತನ್ನ ಊರಿಗೆ ಮರಳಿದ್ದ. ಇದೀಗ ವಿದ್ಯಾರ್ಥಿ ಕ್ಯಾಂಪಸ್‌ಗೆ ತೆರಳಿದ್ದು, ಆತನಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ಇತರ ವಿದ್ಯಾರ್ಥಿಗಳು ಹೇಳಿದ್ದಾರೆ. ಕೇರಳದಲ್ಲಿರುವ ವಿದ್ಯಾರ್ಥಿಯ ಕುಟುಂಬ ಕೂಡ ವಿದ್ಯಾರ್ಥಿಯ ಬಂಧನದ ಸುದ್ದಿಯನ್ನು ಖಚಿತಪಡಿಸಿದೆ. ವಿದ್ಯಾರ್ಥಿಯನ್ನು ಇಂದು ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ನಿರ್ದೇಶಕರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಹೀಗೆ ಬರೆದಿದ್ದಾರೆ: ಐಐಪಿಎಸ್ ಬಹುಸಂಸ್ಕೃತಿಯ ಕ್ಯಾಂಪಸ್ ಆಗಿದ್ದು, ಗಣೇಶ ಚತುರ್ಥಿ, ದಸರಾ, ಕ್ರಿಸ್‌ಮಸ್ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಆಚರಣೆಗಳನ್ನು ಆಯೋಜಿಸುತ್ತದೆ, ಭಾರತದಂತಹ ರಾಜ್ಯ ಇದು ವೈವಿಧ್ಯಮಯ ರಾಷ್ಟ್ರಕ್ಕೆ ಸಮೃದ್ಧಿಯನ್ನು ನೀಡಬಲ್ಲ ಜಾತ್ಯತೀತ ಯುವ ಪೀಳಿಗೆಯನ್ನು ರೂಪಿಸುವ ಭರವಸೆಯನ್ನು ಸಾರುತ್ತದೆ. ಆದರೆ ರಾಮ ಮಂದಿರದ ಪ್ರತಿಷ್ಠಾಪನೆಯ ಆಚರಣೆಯು ಐಐಪಿಎಸ್‌ನಂತಹ ಸಂಸ್ಥೆಯಲ್ಲಿ ಆಚರಿಸುವಾಗ ವಿದ್ಯಾರ್ಥಿಗಳ ಜಾತ್ಯತೀತ ಭಾವನೆಗಳಿಗೆ ಹಾನಿಯುಂಟುಮಾಡುತ್ತದೆ. ಇದು ವಿವಿಧ ಸಂಘಟನೆಗಳಿಂದ ಆಯೋಜಿಸಲಾದ ರಾಜಕೀಯ ಅಜೆಂಡಾದ ಕಾರ್ಯವಾಗಿದೆ, ಅಂತಹ ಆಚರಣೆಗಳನ್ನು ಇಲ್ಲಿ ಮಾಡಬಾರದು. ದ್ವೇಷ ಮತ್ತು ಭಯವನ್ನು ಹರಡುವ ಮೂಲಕ ವಿದ್ಯಾರ್ಥಿಗಳ ನಡುವಿನ ಭ್ರಾತೃತ್ವವನ್ನು ನಾಶಪಡಿಸುವ  ಸಾಮರ್ಥ್ಯವನ್ನು ಹೊಂದಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಚರಣೆಗಳ ಮೇಲೆ ನಿರ್ಬಂಧಗಳನ್ನು ಹೇರುವಂತೆ ಕೋರಿದ್ದರು.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...