Homeಮುಖಪುಟಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

- Advertisement -
- Advertisement -

ಜನವರಿ 22ರಂದು ನಡೆದಿದ್ದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್)ನ ಕ್ಯಾಂಪಸ್‌ನಲ್ಲಿ ಬಲಪಂಥೀಯ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ನಿರಾಕರಿಸುವಂತೆ ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ ಮತ್ತು ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದ ತಂಡದಲ್ಲಿದ್ದ ವಿದ್ಯಾರ್ಥಿಯನ್ನು ಮುಂಬೈನ ಗೋವಂಡಿ ಪೊಲೀಸ್ ಠಾಣೆಯು ಪೊಲೀಸರು ಬಂಧಿಸಿದ್ದಾರೆ. ಇದು ಈ ಪ್ರಕರಣದಲ್ಲಿ ಇದುವರೆಗೆ ನಡೆದ ಎರಡನೇ ಬಂಧನವಾಗಿದೆ.

ಈ ವಿದ್ಯಾರ್ಥಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಪೋಸ್ಟ್ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಜನವರಿ 22 ರಂದು ಪೊಲೀಸರು ಬಂಧಿಸಿ ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ವಿದ್ಯಾರ್ಥಿಯ ಸಹಪಾಠಿಗಳ ಪ್ರಕಾರ, ಪೊಲೀಸರು ಫೆಬ್ರವರಿ 21ರ ಮುಂಜಾನೆ ಐಐಪಿಎಸ್ ಕ್ಯಾಂಪಸ್‌ನಲ್ಲೇ ಆರೋಪಿತ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ಮತ್ತು ಅದರ ಮುಖ್ಯ ನಿರ್ವಾಹಕರು ಮತ್ತು ರಿಜಿಸ್ಟ್ರಾರ್ ಪ್ರಶಾಂತ್ ಬೋರ್ಡೆ ಅವರನ್ನು ಈ ಬಗ್ಗೆ ಮಾದ್ಯಮಗಳು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ದಿ ವೈರ್‌ ವರದಿ ಹೇಳಿದೆ. ಬಂಧನದ ಬಗ್ಗೆ ದಿ ವೈರ್‌ನ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್, ದಯವಿಟ್ಟು ನಾಳೆ ಐಐಪಿಎಸ್‌ಗೆ ಭೇಟಿ ನೀಡಿ, ಸುಳ್ಳು ಪ್ರಚಾರ ಮಾಡುವ ಬದಲು ಸತ್ಯವನ್ನು ಕಂಡುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಬಂಧನದ ಮಾಹಿತಿಯು ಸತ್ಯವಲ್ಲವೇ ಎಂದು ವರದಿಗಾರರು ಕೇಳಿದಾಗ, ಸಿಂಗ್ ಸ್ಪಷ್ಟಪಡಿಸಲಿಲ್ಲ ಎಂದು ವೈರ್‌ ವರದಿಯಲ್ಲಿ ಉಲ್ಲೇಖಿಸಿದೆ.

ರಾಮಮಂದಿರ ಉದ್ಘಾಟನೆ ವೇಳೆ ಐಐಪಿಎಸ್ ಸಂಸ್ಥೆಯಲ್ಲಿ ಬಲಪಂಥೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದ್ದರು. ಬಹುಜನ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಗುಂಪು, ಕ್ಯಾಂಪಸ್‌ನಲ್ಲಿ ಆಚರಣೆಗೆ ಅವಕಾಶ ನೀಡುವುದರ ಹಿಂದಿನ ಸಮಸ್ಯೆಯ ಕುರಿತು ಸಿಂಗ್‌ಗೆ ಪತ್ರವನ್ನು ಬರೆದಿದ್ದರು. ಪತ್ರವು ಗೌಪ್ಯವಾಗಿತ್ತು ಮತ್ತು ಅದರಲ್ಲಿ ಕನಿಷ್ಠ 35 ಮಂದಿ ವಿದ್ಯಾರ್ಥಿಗಳು ಸಹಿ ಮಾಡಿದ್ದರು. ಬಳಿಕ ಪತ್ರವು ಸೋರಿಕೆಯು ಕ್ಯಾಂಪಸ್‌ನಲ್ಲಿ ಮತ್ತು ಹೊರಗಿನ ಬಲಪಂಥೀಯ ಕಾರ್ಯಕರ್ತರಿಗೆ ತಲುಪಿದೆ.

ಸಹಿ ಮಾಡಿದವರಲ್ಲಿ ಓರ್ವನಾದ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೇರಿದ 23 ವರ್ಷದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಗಿತ್ತು. ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) ಮತ್ತು 295(A)ಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಈತ ರಾಮಮಂದಿರ ಉದ್ಘಾಟನೆ ದಿನ ಕ್ಯಾಂಪಸ್‌ನಲ್ಲಿ ಆಚರಣೆಯನ್ನು ಟೀಕಿಸುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಮಾತ್ರ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪೊಲೀಸರು ತನಿಖೆಯ ಸಮಯದಲ್ಲಿ ಪೋಸ್ಟ್‌ನ ಮೂಲವನ್ನು ಕಂಡುಹಿಡಿದರು ಮತ್ತು ಇತರ ವಿದ್ಯಾರ್ಥಿಯನ್ನು ಹಲವು ಬಾರಿ ವಿಚಾರಣೆಗೆ ಕರೆದಿದ್ದರು. ಮೂಲತಃ ಕೇರಳದ ಈ ವಿದ್ಯಾರ್ಥಿ ಕೆಲವು ವಾರಗಳ ಹಿಂದೆ ತನ್ನ ಊರಿಗೆ ಮರಳಿದ್ದ. ಇದೀಗ ವಿದ್ಯಾರ್ಥಿ ಕ್ಯಾಂಪಸ್‌ಗೆ ತೆರಳಿದ್ದು, ಆತನಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ಇತರ ವಿದ್ಯಾರ್ಥಿಗಳು ಹೇಳಿದ್ದಾರೆ. ಕೇರಳದಲ್ಲಿರುವ ವಿದ್ಯಾರ್ಥಿಯ ಕುಟುಂಬ ಕೂಡ ವಿದ್ಯಾರ್ಥಿಯ ಬಂಧನದ ಸುದ್ದಿಯನ್ನು ಖಚಿತಪಡಿಸಿದೆ. ವಿದ್ಯಾರ್ಥಿಯನ್ನು ಇಂದು ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ನಿರ್ದೇಶಕರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಹೀಗೆ ಬರೆದಿದ್ದಾರೆ: ಐಐಪಿಎಸ್ ಬಹುಸಂಸ್ಕೃತಿಯ ಕ್ಯಾಂಪಸ್ ಆಗಿದ್ದು, ಗಣೇಶ ಚತುರ್ಥಿ, ದಸರಾ, ಕ್ರಿಸ್‌ಮಸ್ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಆಚರಣೆಗಳನ್ನು ಆಯೋಜಿಸುತ್ತದೆ, ಭಾರತದಂತಹ ರಾಜ್ಯ ಇದು ವೈವಿಧ್ಯಮಯ ರಾಷ್ಟ್ರಕ್ಕೆ ಸಮೃದ್ಧಿಯನ್ನು ನೀಡಬಲ್ಲ ಜಾತ್ಯತೀತ ಯುವ ಪೀಳಿಗೆಯನ್ನು ರೂಪಿಸುವ ಭರವಸೆಯನ್ನು ಸಾರುತ್ತದೆ. ಆದರೆ ರಾಮ ಮಂದಿರದ ಪ್ರತಿಷ್ಠಾಪನೆಯ ಆಚರಣೆಯು ಐಐಪಿಎಸ್‌ನಂತಹ ಸಂಸ್ಥೆಯಲ್ಲಿ ಆಚರಿಸುವಾಗ ವಿದ್ಯಾರ್ಥಿಗಳ ಜಾತ್ಯತೀತ ಭಾವನೆಗಳಿಗೆ ಹಾನಿಯುಂಟುಮಾಡುತ್ತದೆ. ಇದು ವಿವಿಧ ಸಂಘಟನೆಗಳಿಂದ ಆಯೋಜಿಸಲಾದ ರಾಜಕೀಯ ಅಜೆಂಡಾದ ಕಾರ್ಯವಾಗಿದೆ, ಅಂತಹ ಆಚರಣೆಗಳನ್ನು ಇಲ್ಲಿ ಮಾಡಬಾರದು. ದ್ವೇಷ ಮತ್ತು ಭಯವನ್ನು ಹರಡುವ ಮೂಲಕ ವಿದ್ಯಾರ್ಥಿಗಳ ನಡುವಿನ ಭ್ರಾತೃತ್ವವನ್ನು ನಾಶಪಡಿಸುವ  ಸಾಮರ್ಥ್ಯವನ್ನು ಹೊಂದಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಚರಣೆಗಳ ಮೇಲೆ ನಿರ್ಬಂಧಗಳನ್ನು ಹೇರುವಂತೆ ಕೋರಿದ್ದರು.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...