Homeಮುಖಪುಟಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

- Advertisement -
- Advertisement -

ಜನವರಿ 22ರಂದು ನಡೆದಿದ್ದ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸೈನ್ಸಸ್ (ಐಐಪಿಎಸ್)ನ ಕ್ಯಾಂಪಸ್‌ನಲ್ಲಿ ಬಲಪಂಥೀಯ ಕಾರ್ಯಕರ್ತರ ಸಂಭ್ರಮಾಚರಣೆಗೆ ಅವಕಾಶ ನಿರಾಕರಿಸುವಂತೆ ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ ಮತ್ತು ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದ ತಂಡದಲ್ಲಿದ್ದ ವಿದ್ಯಾರ್ಥಿಯನ್ನು ಮುಂಬೈನ ಗೋವಂಡಿ ಪೊಲೀಸ್ ಠಾಣೆಯು ಪೊಲೀಸರು ಬಂಧಿಸಿದ್ದಾರೆ. ಇದು ಈ ಪ್ರಕರಣದಲ್ಲಿ ಇದುವರೆಗೆ ನಡೆದ ಎರಡನೇ ಬಂಧನವಾಗಿದೆ.

ಈ ವಿದ್ಯಾರ್ಥಿಯ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಪೋಸ್ಟ್ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಜನವರಿ 22 ರಂದು ಪೊಲೀಸರು ಬಂಧಿಸಿ ಎರಡು ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ವಿದ್ಯಾರ್ಥಿಯ ಸಹಪಾಠಿಗಳ ಪ್ರಕಾರ, ಪೊಲೀಸರು ಫೆಬ್ರವರಿ 21ರ ಮುಂಜಾನೆ ಐಐಪಿಎಸ್ ಕ್ಯಾಂಪಸ್‌ನಲ್ಲೇ ಆರೋಪಿತ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ಮತ್ತು ಅದರ ಮುಖ್ಯ ನಿರ್ವಾಹಕರು ಮತ್ತು ರಿಜಿಸ್ಟ್ರಾರ್ ಪ್ರಶಾಂತ್ ಬೋರ್ಡೆ ಅವರನ್ನು ಈ ಬಗ್ಗೆ ಮಾದ್ಯಮಗಳು ಸಂಪರ್ಕಿಸಿದಾಗ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ದಿ ವೈರ್‌ ವರದಿ ಹೇಳಿದೆ. ಬಂಧನದ ಬಗ್ಗೆ ದಿ ವೈರ್‌ನ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ನಿರ್ದೇಶಕ ಡಾ.ಎಸ್.ಕೆ. ಸಿಂಗ್, ದಯವಿಟ್ಟು ನಾಳೆ ಐಐಪಿಎಸ್‌ಗೆ ಭೇಟಿ ನೀಡಿ, ಸುಳ್ಳು ಪ್ರಚಾರ ಮಾಡುವ ಬದಲು ಸತ್ಯವನ್ನು ಕಂಡುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ಬಂಧನದ ಮಾಹಿತಿಯು ಸತ್ಯವಲ್ಲವೇ ಎಂದು ವರದಿಗಾರರು ಕೇಳಿದಾಗ, ಸಿಂಗ್ ಸ್ಪಷ್ಟಪಡಿಸಲಿಲ್ಲ ಎಂದು ವೈರ್‌ ವರದಿಯಲ್ಲಿ ಉಲ್ಲೇಖಿಸಿದೆ.

ರಾಮಮಂದಿರ ಉದ್ಘಾಟನೆ ವೇಳೆ ಐಐಪಿಎಸ್ ಸಂಸ್ಥೆಯಲ್ಲಿ ಬಲಪಂಥೀಯ ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದ್ದರು. ಬಹುಜನ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಗುಂಪು, ಕ್ಯಾಂಪಸ್‌ನಲ್ಲಿ ಆಚರಣೆಗೆ ಅವಕಾಶ ನೀಡುವುದರ ಹಿಂದಿನ ಸಮಸ್ಯೆಯ ಕುರಿತು ಸಿಂಗ್‌ಗೆ ಪತ್ರವನ್ನು ಬರೆದಿದ್ದರು. ಪತ್ರವು ಗೌಪ್ಯವಾಗಿತ್ತು ಮತ್ತು ಅದರಲ್ಲಿ ಕನಿಷ್ಠ 35 ಮಂದಿ ವಿದ್ಯಾರ್ಥಿಗಳು ಸಹಿ ಮಾಡಿದ್ದರು. ಬಳಿಕ ಪತ್ರವು ಸೋರಿಕೆಯು ಕ್ಯಾಂಪಸ್‌ನಲ್ಲಿ ಮತ್ತು ಹೊರಗಿನ ಬಲಪಂಥೀಯ ಕಾರ್ಯಕರ್ತರಿಗೆ ತಲುಪಿದೆ.

ಸಹಿ ಮಾಡಿದವರಲ್ಲಿ ಓರ್ವನಾದ ಮಹಾರಾಷ್ಟ್ರದ ದಲಿತ ಸಮುದಾಯಕ್ಕೆ ಸೇರಿದ 23 ವರ್ಷದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಗಿತ್ತು. ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) ಮತ್ತು 295(A)ಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. ಈತ ರಾಮಮಂದಿರ ಉದ್ಘಾಟನೆ ದಿನ ಕ್ಯಾಂಪಸ್‌ನಲ್ಲಿ ಆಚರಣೆಯನ್ನು ಟೀಕಿಸುವ ಪೋಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ಮಾತ್ರ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪೊಲೀಸರು ತನಿಖೆಯ ಸಮಯದಲ್ಲಿ ಪೋಸ್ಟ್‌ನ ಮೂಲವನ್ನು ಕಂಡುಹಿಡಿದರು ಮತ್ತು ಇತರ ವಿದ್ಯಾರ್ಥಿಯನ್ನು ಹಲವು ಬಾರಿ ವಿಚಾರಣೆಗೆ ಕರೆದಿದ್ದರು. ಮೂಲತಃ ಕೇರಳದ ಈ ವಿದ್ಯಾರ್ಥಿ ಕೆಲವು ವಾರಗಳ ಹಿಂದೆ ತನ್ನ ಊರಿಗೆ ಮರಳಿದ್ದ. ಇದೀಗ ವಿದ್ಯಾರ್ಥಿ ಕ್ಯಾಂಪಸ್‌ಗೆ ತೆರಳಿದ್ದು, ಆತನಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ಇತರ ವಿದ್ಯಾರ್ಥಿಗಳು ಹೇಳಿದ್ದಾರೆ. ಕೇರಳದಲ್ಲಿರುವ ವಿದ್ಯಾರ್ಥಿಯ ಕುಟುಂಬ ಕೂಡ ವಿದ್ಯಾರ್ಥಿಯ ಬಂಧನದ ಸುದ್ದಿಯನ್ನು ಖಚಿತಪಡಿಸಿದೆ. ವಿದ್ಯಾರ್ಥಿಯನ್ನು ಇಂದು ಮುಂಬೈನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ನಿರ್ದೇಶಕರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳು ಹೀಗೆ ಬರೆದಿದ್ದಾರೆ: ಐಐಪಿಎಸ್ ಬಹುಸಂಸ್ಕೃತಿಯ ಕ್ಯಾಂಪಸ್ ಆಗಿದ್ದು, ಗಣೇಶ ಚತುರ್ಥಿ, ದಸರಾ, ಕ್ರಿಸ್‌ಮಸ್ ಇತ್ಯಾದಿಗಳನ್ನು ಒಳಗೊಂಡಂತೆ ವಿವಿಧ ಆಚರಣೆಗಳನ್ನು ಆಯೋಜಿಸುತ್ತದೆ, ಭಾರತದಂತಹ ರಾಜ್ಯ ಇದು ವೈವಿಧ್ಯಮಯ ರಾಷ್ಟ್ರಕ್ಕೆ ಸಮೃದ್ಧಿಯನ್ನು ನೀಡಬಲ್ಲ ಜಾತ್ಯತೀತ ಯುವ ಪೀಳಿಗೆಯನ್ನು ರೂಪಿಸುವ ಭರವಸೆಯನ್ನು ಸಾರುತ್ತದೆ. ಆದರೆ ರಾಮ ಮಂದಿರದ ಪ್ರತಿಷ್ಠಾಪನೆಯ ಆಚರಣೆಯು ಐಐಪಿಎಸ್‌ನಂತಹ ಸಂಸ್ಥೆಯಲ್ಲಿ ಆಚರಿಸುವಾಗ ವಿದ್ಯಾರ್ಥಿಗಳ ಜಾತ್ಯತೀತ ಭಾವನೆಗಳಿಗೆ ಹಾನಿಯುಂಟುಮಾಡುತ್ತದೆ. ಇದು ವಿವಿಧ ಸಂಘಟನೆಗಳಿಂದ ಆಯೋಜಿಸಲಾದ ರಾಜಕೀಯ ಅಜೆಂಡಾದ ಕಾರ್ಯವಾಗಿದೆ, ಅಂತಹ ಆಚರಣೆಗಳನ್ನು ಇಲ್ಲಿ ಮಾಡಬಾರದು. ದ್ವೇಷ ಮತ್ತು ಭಯವನ್ನು ಹರಡುವ ಮೂಲಕ ವಿದ್ಯಾರ್ಥಿಗಳ ನಡುವಿನ ಭ್ರಾತೃತ್ವವನ್ನು ನಾಶಪಡಿಸುವ  ಸಾಮರ್ಥ್ಯವನ್ನು ಹೊಂದಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಚರಣೆಗಳ ಮೇಲೆ ನಿರ್ಬಂಧಗಳನ್ನು ಹೇರುವಂತೆ ಕೋರಿದ್ದರು.

ಇದನ್ನು ಓದಿ: ರಾಮನಗರ: ವಕೀಲರ ಪ್ರತಿಭಟನೆ; ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...