Homeಸಿನಿಮಾಕ್ರೀಡೆವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ: ಕಂಚು ಗೆದ್ದ ಕುಂದಾಪುರದ ಗುರುರಾಜ್‌

ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ: ಕಂಚು ಗೆದ್ದ ಕುಂದಾಪುರದ ಗುರುರಾಜ್‌

- Advertisement -
- Advertisement -

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಎರಡನೇ ದಿನವಾದ ಇಂದು ಭಾರತಕ್ಕೆ ಎರಡನೇ ಪದಕ ಲಭಿಸಿದೆ. 61 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಕುಂದಾಪುರದ ಗುರುರಾಜ್‌ ಪೂಜಾರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಸ್ನಾಚ್ ವಿಭಾಗದಲ್ಲಿ 118 ಕೆಜಿ ಭಾರ ಎತ್ತಿದ ಅವರು, ಕ್ಲೀನ್ ಅಂಡ್ ಜರ್ಕ್‌ ವಿಭಾಗದಲ್ಲಿ 151 ಕೆಜಿ ಭಾರ ಎತ್ತುವ ಮೂಲಕ ಒಟ್ಟು 269 ಕೆಜಿ ಭಾರ ಎತ್ತಿ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಇನ್ನು 55 ಕೆಜಿ ವಿಭಾಗದಲ್ಲಿ 113 ಕೆಜಿ ಭಾರ ಎತ್ತಿರುವ ಭಾರತದ ಸ್ಪರ್ಧೆಯಲ್ಲಿ ಸಂಕೇತ್ ಸರ್ಗರ್ ಕ್ಲೀನ್ ಅಂಡ್ ಜರ್ಕ್‌ನಲ್ಲಿ ಒಟ್ಟು 135 ಕೆಜಿ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಭಾಜನರಾದರು.

ಮಲೇಷ್ಯಾದ ಮೊಹಮ್ಮದ್ ಅನಿಕ್ ಕ್ಲೀನ್ ಮತ್ತು ಜರ್ಕ್‌ನಲ್ಲಿ 142 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಸಂಕೇತ್ ಸರ್ಗರ್ 139 ಕೆಜಿ ಭಾರ ಎತ್ತುವಾಗ ಸತತವಾಗಿ ಎರಡು ಬಾರಿ ಪೌಲ್ ಆದರು ಮತ್ತು ಗಾಯಕ್ಕೊಳಗಾಗಿದ್ದರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

22 ವರ್ಷದ ಸಂಕೇತ್ ಸರ್ಗರ್ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯವರು. ಬಹುಶಿಸ್ತೀನಿ ಸ್ಪರ್ಧೆಯಲ್ಲಿ ಇದು ಅವರ ಮೊದಲ ಪದಕವಾಗಿದೆ.

ಇಂದು ಸ್ಟಾರ್ ವೇಟ್ ಲಿಫ್ಟರ್ ಮೀರಾಭಾಯಿ ಚಾನು ರವರು ಭಾರತದ ಪರವಾಗಿ ಕಣಕ್ಕಿಳಿದಿದ್ದಾರೆ. ಟೋಕಿಯೋ ಒಲಂಪಿಕ್ಸ್ ನ ಬೆಳ್ಳಿ ವಿಜೇತೆ ಆಗಿರುವ ಚಾನು ಕಾಮನ್ ವೆಲ್ತ್ ನ ಪದಕವನ್ನು ಗೆಲ್ಲುವ ಫೆವರೀಟ್‌ಗಳಲ್ಲಿ ಒಬ್ಬರಾಗಿದ್ದಾರೆ.

ಭಾರತದ ಶ್ರೀ ಹರಿ ನಟರಾಜ್ ಪುರುಷರ ವಿಭಾಗದ 100 ಮೀ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು ಪದಕದ ಭರವಸೆ ಮೂಡಿಸಿದ್ದಾರೆ. ಶುಕ್ರವಾರದ ಪಂದ್ಯದಲ್ಲಿ 54.68. ಸೆ.ಗಳೊಂದಿಗೆ 3 ನೇ ಸ್ಥಾನ ಹಾಗೂ ಪಂದ್ಯದಲ್ಲಿ ಒಟ್ಟಾರೆ 5 ನೇ ಸ್ಥಾನ ಪಡೆದು ಸೆಮಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಮಹಿಳಾ ಬಾಕ್ಸರ್ ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಮತ್ತು 2018 ಮತ್ತು 2019 ರ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಪಡೆದಿರುವ ಲವ್ಲೀನಾ ಬೊರ್ಗೊಹೈನ್ ಕಾಮನ್ ವೆಲ್ತ್ ಗೇಮ್ಸ್ ನ ಬಾಕ್ಸಿಂಗ್ ತಂಡದ ನೇತೃತ್ವ ವಹಿಸಿಕೊಂಡಿದ್ದು ಸ್ವರ್ಣ ಪದಕ ಗೆದ್ದುಕೊಡಬಲ್ಲ ನಿರೀಕ್ಷೆ ಹುಟ್ಟಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಬಂತು ಮೊದಲ ಪದಕ: ವೇಟ್ ಲಿಫ್ಟಿಂಗ್‌ನಲ್ಲಿ ಸಂಕೇತ್ ಸರ್ಗರ್‌ಗೆ ಬೆಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...