Homeಸಿನಿಮಾಕ್ರೀಡೆವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ: ಕಂಚು ಗೆದ್ದ ಕುಂದಾಪುರದ ಗುರುರಾಜ್‌

ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ: ಕಂಚು ಗೆದ್ದ ಕುಂದಾಪುರದ ಗುರುರಾಜ್‌

- Advertisement -
- Advertisement -

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಎರಡನೇ ದಿನವಾದ ಇಂದು ಭಾರತಕ್ಕೆ ಎರಡನೇ ಪದಕ ಲಭಿಸಿದೆ. 61 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಕುಂದಾಪುರದ ಗುರುರಾಜ್‌ ಪೂಜಾರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಸ್ನಾಚ್ ವಿಭಾಗದಲ್ಲಿ 118 ಕೆಜಿ ಭಾರ ಎತ್ತಿದ ಅವರು, ಕ್ಲೀನ್ ಅಂಡ್ ಜರ್ಕ್‌ ವಿಭಾಗದಲ್ಲಿ 151 ಕೆಜಿ ಭಾರ ಎತ್ತುವ ಮೂಲಕ ಒಟ್ಟು 269 ಕೆಜಿ ಭಾರ ಎತ್ತಿ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಇನ್ನು 55 ಕೆಜಿ ವಿಭಾಗದಲ್ಲಿ 113 ಕೆಜಿ ಭಾರ ಎತ್ತಿರುವ ಭಾರತದ ಸ್ಪರ್ಧೆಯಲ್ಲಿ ಸಂಕೇತ್ ಸರ್ಗರ್ ಕ್ಲೀನ್ ಅಂಡ್ ಜರ್ಕ್‌ನಲ್ಲಿ ಒಟ್ಟು 135 ಕೆಜಿ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಭಾಜನರಾದರು.

ಮಲೇಷ್ಯಾದ ಮೊಹಮ್ಮದ್ ಅನಿಕ್ ಕ್ಲೀನ್ ಮತ್ತು ಜರ್ಕ್‌ನಲ್ಲಿ 142 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಸಂಕೇತ್ ಸರ್ಗರ್ 139 ಕೆಜಿ ಭಾರ ಎತ್ತುವಾಗ ಸತತವಾಗಿ ಎರಡು ಬಾರಿ ಪೌಲ್ ಆದರು ಮತ್ತು ಗಾಯಕ್ಕೊಳಗಾಗಿದ್ದರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

22 ವರ್ಷದ ಸಂಕೇತ್ ಸರ್ಗರ್ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯವರು. ಬಹುಶಿಸ್ತೀನಿ ಸ್ಪರ್ಧೆಯಲ್ಲಿ ಇದು ಅವರ ಮೊದಲ ಪದಕವಾಗಿದೆ.

ಇಂದು ಸ್ಟಾರ್ ವೇಟ್ ಲಿಫ್ಟರ್ ಮೀರಾಭಾಯಿ ಚಾನು ರವರು ಭಾರತದ ಪರವಾಗಿ ಕಣಕ್ಕಿಳಿದಿದ್ದಾರೆ. ಟೋಕಿಯೋ ಒಲಂಪಿಕ್ಸ್ ನ ಬೆಳ್ಳಿ ವಿಜೇತೆ ಆಗಿರುವ ಚಾನು ಕಾಮನ್ ವೆಲ್ತ್ ನ ಪದಕವನ್ನು ಗೆಲ್ಲುವ ಫೆವರೀಟ್‌ಗಳಲ್ಲಿ ಒಬ್ಬರಾಗಿದ್ದಾರೆ.

ಭಾರತದ ಶ್ರೀ ಹರಿ ನಟರಾಜ್ ಪುರುಷರ ವಿಭಾಗದ 100 ಮೀ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು ಪದಕದ ಭರವಸೆ ಮೂಡಿಸಿದ್ದಾರೆ. ಶುಕ್ರವಾರದ ಪಂದ್ಯದಲ್ಲಿ 54.68. ಸೆ.ಗಳೊಂದಿಗೆ 3 ನೇ ಸ್ಥಾನ ಹಾಗೂ ಪಂದ್ಯದಲ್ಲಿ ಒಟ್ಟಾರೆ 5 ನೇ ಸ್ಥಾನ ಪಡೆದು ಸೆಮಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಮಹಿಳಾ ಬಾಕ್ಸರ್ ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಮತ್ತು 2018 ಮತ್ತು 2019 ರ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಪಡೆದಿರುವ ಲವ್ಲೀನಾ ಬೊರ್ಗೊಹೈನ್ ಕಾಮನ್ ವೆಲ್ತ್ ಗೇಮ್ಸ್ ನ ಬಾಕ್ಸಿಂಗ್ ತಂಡದ ನೇತೃತ್ವ ವಹಿಸಿಕೊಂಡಿದ್ದು ಸ್ವರ್ಣ ಪದಕ ಗೆದ್ದುಕೊಡಬಲ್ಲ ನಿರೀಕ್ಷೆ ಹುಟ್ಟಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಬಂತು ಮೊದಲ ಪದಕ: ವೇಟ್ ಲಿಫ್ಟಿಂಗ್‌ನಲ್ಲಿ ಸಂಕೇತ್ ಸರ್ಗರ್‌ಗೆ ಬೆಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...