Homeಮುಖಪುಟಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಎರಡನೇ ಸಭೆ: 24 ಪಕ್ಷಗಳ ನಾಯಕರಿಗೆ ಆಹ್ವಾನ

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಎರಡನೇ ಸಭೆ: 24 ಪಕ್ಷಗಳ ನಾಯಕರಿಗೆ ಆಹ್ವಾನ

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧಪಕ್ಷಗಳು ಕಾರ್ಯತಂತ್ರ ರೂಪಿಸಲು ಮುಂದಿನ ವಾರ ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಸಲಿದ್ದಾರೆ. ಈ ಸಭೆಗೆ 24 ವಿರೋಧ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಪಿಟಿಐ ಬುಧವಾರ ವರದಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಿಂದ ಆಡಳಿತಾತ್ಮಕ ಸೇವೆಗಳ ನಿಯಂತ್ರಣವನ್ನು ಕಸಿದುಕೊಂಡಿರುವ ಕೇಂದ್ರದ ಸುಗ್ರೀವಾಜ್ಞೆಯ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಿದ ನಂತರವೇ ಸಭೆಗೆ ಹಾಜರಾಗುವ ಬಗ್ಗೆ ನಿರ್ಧರಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ.

ಜೂನ್ 23ರಂದು ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷ ಸಭೆಯಲ್ಲಿ 15 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಕಾಂಗ್ರೆಸ್ ಸುಗ್ರೀವಾಜ್ಞೆಯನ್ನು ಸಾರ್ವಜನಿಕವಾಗಿ ವಿರೋಧಿಸದ ಕಾರಣ ಯಾವುದೇ ಮೈತ್ರಿಕೂಟದ ಭಾಗವಾಗಲು ”ಬಹಳ ಕಷ್ಟ” ಎಂದು ಎಎಪಿ ಘೋಷಿಸಿತ್ತು.

ಜುಲೈ 17 ರಂದು ಬೆಂಗಳೂರಿನಲ್ಲಿ ನಡೆಯುವ ಎರಡನೇ ಸಭೆಯಲ್ಲಿ ಭಾಗಿಯಾಗಲಿರುವ ಹೊಸ ಪಕ್ಷಗಳು: ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ಕೊಂಗುನಾಡು ಮಕ್ಕಳ್ ದೇಶಿಯ ಕಚ್ಚಿ, ವಿದುತಲೈ ಚಿರುತೈಗಲ್ ಕಚ್ಚಿ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಕೇರಳ ಕಾಂಗ್ರೆಸ್ (ಜೋಸೆಫ್) ಮತ್ತು ಕೇರಳ ಕಾಂಗ್ರೆಸ್ (ಮಣಿ)

ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ ಮತ್ತು ಕೊಂಗುನಾಡು ಮಕ್ಕಳ್ ದೇಶಿಯ ಕಚ್ಚಿ 2014ರ ಚುನಾವಣೆಯಲ್ಲಿ ಬಿಜೆಪಿಯ ಮಿತ್ರಪಕ್ಷಗಳಾಗಿದ್ದವು.

ಮುಂದಿನ ವಾರದ ಸಭೆಯಲ್ಲಿ ಬಿಜೆಪಿಯೇತರ ಪಕ್ಷಗಳು ವಿರೋಧ ಪಕ್ಷದ ಹೆಸರು ಮತ್ತು ಸೀಟು ಹಂಚಿಕೆಯ ವಿವರಗಳನ್ನು ಚರ್ಚಿಸಬಹುದು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

24 ವಿರೋಧ ಪಕ್ಷಗಳು ಒಟ್ಟಾಗಿ ಸುಮಾರು 150 ಲೋಕಸಭಾ ಸದಸ್ಯರನ್ನು ಹೊಂದಿದ್ದು, ತಮ್ಮ ನೆಲೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿವೆ ಎಂದು ಪಿಟಿಐ ವರದಿ ಮಾಡಿದೆ.

”ಫ್ಯಾಸಿಸ್ಟ್ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳನ್ನು ಸೋಲಿಸುವ ವಿರೋಧ ಪಕ್ಷಗಳು ಒಂದಾಗುತ್ತಿವೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...