Homeಮುಖಪುಟಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಎರಡನೇ ಸಭೆ: 24 ಪಕ್ಷಗಳ ನಾಯಕರಿಗೆ ಆಹ್ವಾನ

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಎರಡನೇ ಸಭೆ: 24 ಪಕ್ಷಗಳ ನಾಯಕರಿಗೆ ಆಹ್ವಾನ

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿರೋಧಪಕ್ಷಗಳು ಕಾರ್ಯತಂತ್ರ ರೂಪಿಸಲು ಮುಂದಿನ ವಾರ ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಸಲಿದ್ದಾರೆ. ಈ ಸಭೆಗೆ 24 ವಿರೋಧ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಪಿಟಿಐ ಬುಧವಾರ ವರದಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಿಂದ ಆಡಳಿತಾತ್ಮಕ ಸೇವೆಗಳ ನಿಯಂತ್ರಣವನ್ನು ಕಸಿದುಕೊಂಡಿರುವ ಕೇಂದ್ರದ ಸುಗ್ರೀವಾಜ್ಞೆಯ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಿದ ನಂತರವೇ ಸಭೆಗೆ ಹಾಜರಾಗುವ ಬಗ್ಗೆ ನಿರ್ಧರಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ.

ಜೂನ್ 23ರಂದು ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷ ಸಭೆಯಲ್ಲಿ 15 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಕಾಂಗ್ರೆಸ್ ಸುಗ್ರೀವಾಜ್ಞೆಯನ್ನು ಸಾರ್ವಜನಿಕವಾಗಿ ವಿರೋಧಿಸದ ಕಾರಣ ಯಾವುದೇ ಮೈತ್ರಿಕೂಟದ ಭಾಗವಾಗಲು ”ಬಹಳ ಕಷ್ಟ” ಎಂದು ಎಎಪಿ ಘೋಷಿಸಿತ್ತು.

ಜುಲೈ 17 ರಂದು ಬೆಂಗಳೂರಿನಲ್ಲಿ ನಡೆಯುವ ಎರಡನೇ ಸಭೆಯಲ್ಲಿ ಭಾಗಿಯಾಗಲಿರುವ ಹೊಸ ಪಕ್ಷಗಳು: ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ಕೊಂಗುನಾಡು ಮಕ್ಕಳ್ ದೇಶಿಯ ಕಚ್ಚಿ, ವಿದುತಲೈ ಚಿರುತೈಗಲ್ ಕಚ್ಚಿ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಕೇರಳ ಕಾಂಗ್ರೆಸ್ (ಜೋಸೆಫ್) ಮತ್ತು ಕೇರಳ ಕಾಂಗ್ರೆಸ್ (ಮಣಿ)

ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ ಮತ್ತು ಕೊಂಗುನಾಡು ಮಕ್ಕಳ್ ದೇಶಿಯ ಕಚ್ಚಿ 2014ರ ಚುನಾವಣೆಯಲ್ಲಿ ಬಿಜೆಪಿಯ ಮಿತ್ರಪಕ್ಷಗಳಾಗಿದ್ದವು.

ಮುಂದಿನ ವಾರದ ಸಭೆಯಲ್ಲಿ ಬಿಜೆಪಿಯೇತರ ಪಕ್ಷಗಳು ವಿರೋಧ ಪಕ್ಷದ ಹೆಸರು ಮತ್ತು ಸೀಟು ಹಂಚಿಕೆಯ ವಿವರಗಳನ್ನು ಚರ್ಚಿಸಬಹುದು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

24 ವಿರೋಧ ಪಕ್ಷಗಳು ಒಟ್ಟಾಗಿ ಸುಮಾರು 150 ಲೋಕಸಭಾ ಸದಸ್ಯರನ್ನು ಹೊಂದಿದ್ದು, ತಮ್ಮ ನೆಲೆಯನ್ನು ವಿಸ್ತರಿಸಲು ಪ್ರಯತ್ನಿಸುತ್ತಿವೆ ಎಂದು ಪಿಟಿಐ ವರದಿ ಮಾಡಿದೆ.

”ಫ್ಯಾಸಿಸ್ಟ್ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳನ್ನು ಸೋಲಿಸುವ ವಿರೋಧ ಪಕ್ಷಗಳು ಒಂದಾಗುತ್ತಿವೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...