Homeಮುಖಪುಟಕೇಸರೀಕರಣಗೊಂಡ ವಂದೇ ಭಾರತ್‌ ರೈಲು

ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

- Advertisement -
- Advertisement -

‘ಕೇಸರೀಕರಣ’ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ವ್ಯಾಪಕವಾಗಿ ಕೇಳಿ ಬಂದ ಆರೋಪ. ಶಿಕ್ಷಣ ಸಂಸ್ಥೆಗಳು, ಪಠ್ಯ ಪುಸ್ತಕಗಳು, ಸಾರಿಗೆ ಸಂಸ್ಥೆಗಳು ಸೇರಿ ವಿವಿಧ ಇಲಾಖೆಗಳಲ್ಲಿ ಇದಕ್ಕೆ ಪೂರಕವಾದ ಬೆಳವಣಿಗೆಗಳು ಕಂಡು ಬಂದಿದ್ದವು. ಇದೀಗ ರೈಲ್ವೇ ಇಲಾಖೆಯಲ್ಲೂ ಕೇಸರೀಕರಣ ಆರೋಪ ಕೇಳಿ ಬಂದಿದೆ. ದೇಶದ ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಲಿದ್ದಾರೆ.

ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿ ಇದಕ್ಕೆ ಮೊದಲು ರೈಲ್ವೇ ನಿಲ್ಧಾಣ, ಬಸ್‌ ನಿಲ್ಧಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿತ್ತು. ನಗರಗಳ ಹೆಸರನ್ನು ಬದಲಿಸಲಾಗಿತ್ತು. ಉತ್ತರಪ್ರದೇಶದಲ್ಲಿ ಯೋಗಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾ ಮಕ್ಕಳ ಬ್ಯಾಗನ್ನು ಕೇಸರೀಕರಣಗೊಳಿಸಿದ್ದರು. ಈ ಮೊದಲು ಉತ್ತರಪ್ರದೇಶದಲ್ಲಿ
ಲಕ್ಷಣ್ ಮತ್ತು ರಾಣಿಲಕ್ಷ್ಮೀಬಾಯಿ ಪ್ರಶಸ್ತಿ ಸಮಾರಂಭವನ್ನು ಸಂಪೂರ್ಣ ಕೇಸರೀಕರಣಗೊಳಿಸಿದ್ದ ಯೋಗಿ ಸರಕಾರ ಪ್ರಶಸ್ತಿ ಪತ್ರ, ಬುಕ್ಲೆಟ್, ಪ್ರಶಸ್ತಿ ವಿಜೇತ ಸಮಾರಂಭದ ಉಸ್ತುವಾರಿಗಳ ಉಡುಗೆತೊಡುಗೆಯನ್ನೂ ಕೇಸರಿಮಯಗೊಳಿಸಿತ್ತು. ಇದಲ್ಲದೆ ರಾಜ್ಯ ರಸ್ತೆಸಾರಿಗೆ ಸಂಸ್ಥೆಯ 50 ಕೇಸರಿ ಬಸ್‌ಗಳನ್ನು ಬಿಡುಗಡೆಗೊಳಿಸಿತ್ತು. ಈ ಬಸ್ಸುಗಳಿಗೆ ‘ಸಂಕಲ್ಪ ಸೇವಾ’ ಎಂದು ಹೆಸರಿಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್ಸುಗಳ ಓಡಾಟ ನಡೆಸುತ್ತಿದೆ.

ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲು ಸಂಚಾರ ಆರಂಭ:

ವಾರಣಾಸಿ ಮತ್ತು ನವದೆಹಲಿ ನಡುವಿನ ಎರಡನೇ ವಂದೇ ಭಾರತ್ ರೈಲನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದು, ಇದು ಕೇಸರಿ ಬಣ್ಣದಲ್ಲಿ ಇರಲಿದೆ ಮತ್ತು ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಮತ್ತು ರೈಲ್ವೇ ಸಚಿವಾಲಯವು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಕೇಸರಿ ಬಣ್ಣದ ರೈಲಿನ ಫೋಟೋವನ್ನು ಹಂಚಿಕೊಂಡಿದೆ.

ನೂತನ ರೈಲು ವೈ-ಫೈ ಸೌಲಭ್ಯ, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಪ್ಲಶ್ ಇಂಟೀರಿಯರ್‌ಗಳು, ಟಚ್ ಮಾಡದೆ ತೆರೆಯುವಂತಹ ಬಯೋ-ವ್ಯಾಕ್ಯೂಮ್ ಟಾಯ್ಲೆಟ್‌ಗಳು, ಎಲ್ಇಡಿ ಲೈಟಿಂಗ್, ಪ್ರತಿ ಸೀಟಿನ ಕೆಳಗೆ ಚಾರ್ಜಿಂಗ್ ಪಾಯಿಂಟ್‌ಗಳು, ಉತ್ತಮ ಹವಾನಿಯಂತ್ರಣ ವ್ಯವಸ್ಥೆ ಕೂಡ ಹೊಂದಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ಇಂದು ಮಧ್ಯಾಹ್ನ  2:15ಕ್ಕೆ ರೈಲಿನ ಉದ್ಘಾಟನೆ ನಡೆಯಲಿದ್ದು, ವಾರಣಾಸಿಯಿಂದ ನವದೆಹಲಿಗೆ ಅದರ ಉದ್ಘಾಟನೆಯ ಅಂಗವಾಗಿ ರೈಲು ಸಂಚರಿಸಲಿದೆ. ಮಂಗಳವಾರ ಹೊರತುಪಡಿಸಿ ವಾರದಲ್ಲಿ 6 ದಿನಗಳು ರೈಲು ವಾರಣಾಸಿಯಿಂದ ನವದೆಹಲಿಗೆ ಬೆಳಿಗ್ಗೆ 6 ಗಂಟೆಗೆ ಸಂಚರಿಸಲಿದೆ. ರೈಲು ಮಧ್ಯಾಹ್ನ 2.5ಕ್ಕೆ ನವದೆಹಲಿ ತಲುಪುತ್ತದೆ ಮತ್ತು 55 ನಿಮಿಷಗಳ ನಂತರ 3 ಗಂಟೆಗೆ ವಾಪಾಸ್ಸು ವಾರಣಾಸಿಗೆ ಹೊರಡಲಿದೆ.

ರೈಲ್ವೇ ಇಲಾಖೆಯು ತನ್ನ ಮೊದಲ ಕೇಸರಿ-ಬೂದು ಬಣ್ಣದ ವಂದೇ ಭಾರತ್ ರೈಲನ್ನು ಸೆ.24ರಂದು ಕೇರಳದ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಪ್ರಾರಂಭಿಸಿತ್ತು. ಸೆ.24ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನ ಮಂತ್ರಿಗಳು ಉದ್ಘಾಟನೆ ಮಾಡಿದ ಒಂಬತ್ತು ವಂದೇ ಭಾರತ್ ರೈಲುಗಳಲ್ಲಿ ಇದೂ ಒಂದಾಗಿತ್ತು. ಈ ವೇಳೆ ರೈಲ್ವೇಗಳ ಕೇಸರೀಕರಣದ ಬಗ್ಗೆ ಚರ್ಚೆಯಾಗಿತ್ತು.

ಪತ್ರಕರ್ತ ಮೊಹಮ್ಮದ್ ಜುಬೇರ್, ಈ ವಂದೇ ಭಾರತ್‌ನಲ್ಲಿನ ಹಸಿರು ಬಣ್ಣವು ‘ಅಚ್ಛೇ ದಿನ್” ರೀತಿ ಕಾಣೆಯಾಗಿದೆ. ರೈಲಿನಲ್ಲಿ ತ್ರಿವರ್ಣ ಕಾಣೆಯಾಗಿದೆ ಎಂದು ಹೇಳಿದ್ದರು. ಸಾಮಾಜಿಕ ಜಾಲತಾಣಗಳ ಬಳಕೆದಾರರು ಕೇಸರಿ ಮತ್ತು ಬಿಳಿ ಬಣ್ಣ ಇದೆ ಆದರೆ ಹಸಿರು ಎಲ್ಲಿದೆ?  ಅದರ ನಡುವೆ ಧರ್ಮಚಕ್ರ ಕಾಣೆಯಾಗಿದೆ ಎಂದು ಹೇಳಿದ್ದರು.

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಇತ್ತೀಚೆಗೆ ಪತ್ರಕರ್ತರೊಂದಿಗೆ ಮಾತನಾಡುವಾಗ ಕೇಸರಿ ಬಣ್ಣದಲ್ಲೇ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದರ ಹಿಂದಿನ ರಾಜಕೀಯ ಲೆಕ್ಕಾಚಾರದ ಬಗ್ಗೆ ಉತ್ತರಿಸಲು ನಿರಾಕರಿಸಿದ್ದರು. ವಂದೇ ಭಾರತ್‌ ರೈಲಿಗೆ ಕೇಸರಿ ಬಣ್ಣದ ಆಯ್ಕೆಯು ವೈಜ್ಞಾನಿಕ ಚಿಂತನೆಯಿಂದ ಕೂಡಿದೆ. ಮಾನವನ ಕಣ್ಣಿಗೆ ಗೋಚರತೆಯ ದೃಷ್ಟಿಕೋನದಿಂದ ಈ ಬಣ್ಣಗಳನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದರು.

ವಂದೇ ಭಾರತ್ ರೈಲು:

2019ರಲ್ಲಿ ಭಾರತದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಾಲನೆಗೊಂಡಿತ್ತು. 16 ಬೋಗಿಗಳಿರುವ ಈ ಒಂದು ಎಕ್ಸ್‌ಪ್ರೆಸ್ ರೈಲಿನ ನಿರ್ಮಾಣಕ್ಕೆ ಅಂದಾಜು 115 ಕೋಟಿ ರೂ ತಗುಲುತ್ತದೆ ಎಂದು ಹೇಳಲಾಗಿದೆ. ಭಾರತದಲ್ಲಿ ಸದ್ಯ ಒಟ್ಟು 34 ವಂದೇ ಭಾರತ್ ರೈಲುಗಳು ದೈನಂದಿನ ಕಾರ್ಯಾಚರಣೆಯಲ್ಲಿ ತೊಡಗಿವೆ. ಬ್ರಾಡ್ ಗೇಜ್  ವಿದ್ಯುದೀಕೃತ ನೆಟ್‌ವರ್ಕ್ ಹೊಂದಿರುವ ರಾಜ್ಯಗಳಲ್ಲಿ ಈ ನೂತನ ಒಂದೇ ಭಾರತ್ ರೈಲು ಸಂಚಾರ ನಡೆಸಲಿವೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ನಿರ್ಮಿತ ಮತ್ತು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿವೆ.

ಕಳೆದ ಡಿ.8ರಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2047ರ ವೇಳೆಗೆ ದೇಶದಲ್ಲಿ 4,500 ವಂದೇ ಭಾರತ್ ರೈಲುಗಳು ಓಡಾಡಲಿದೆ ಎಂದು ಹೇಳಿದ್ದರು. ಇತ್ತೀಚೆಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ 12,000ಕ್ಕೂ ಹೆಚ್ಚು ಹೊಸ ರೈಲುಗಳ ತಯಾರಿ ಬಗ್ಗೆ ಮಾಹಿತಿ ನೀಡಿದ್ದರು.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...