Homeಮುಖಪುಟಕೇಸರೀಕರಣಗೊಂಡ ವಂದೇ ಭಾರತ್‌ ರೈಲು

ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

- Advertisement -
- Advertisement -

‘ಕೇಸರೀಕರಣ’ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ವ್ಯಾಪಕವಾಗಿ ಕೇಳಿ ಬಂದ ಆರೋಪ. ಶಿಕ್ಷಣ ಸಂಸ್ಥೆಗಳು, ಪಠ್ಯ ಪುಸ್ತಕಗಳು, ಸಾರಿಗೆ ಸಂಸ್ಥೆಗಳು ಸೇರಿ ವಿವಿಧ ಇಲಾಖೆಗಳಲ್ಲಿ ಇದಕ್ಕೆ ಪೂರಕವಾದ ಬೆಳವಣಿಗೆಗಳು ಕಂಡು ಬಂದಿದ್ದವು. ಇದೀಗ ರೈಲ್ವೇ ಇಲಾಖೆಯಲ್ಲೂ ಕೇಸರೀಕರಣ ಆರೋಪ ಕೇಳಿ ಬಂದಿದೆ. ದೇಶದ ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಲಿದ್ದಾರೆ.

ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿ ಇದಕ್ಕೆ ಮೊದಲು ರೈಲ್ವೇ ನಿಲ್ಧಾಣ, ಬಸ್‌ ನಿಲ್ಧಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿತ್ತು. ನಗರಗಳ ಹೆಸರನ್ನು ಬದಲಿಸಲಾಗಿತ್ತು. ಉತ್ತರಪ್ರದೇಶದಲ್ಲಿ ಯೋಗಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾ ಮಕ್ಕಳ ಬ್ಯಾಗನ್ನು ಕೇಸರೀಕರಣಗೊಳಿಸಿದ್ದರು. ಈ ಮೊದಲು ಉತ್ತರಪ್ರದೇಶದಲ್ಲಿ
ಲಕ್ಷಣ್ ಮತ್ತು ರಾಣಿಲಕ್ಷ್ಮೀಬಾಯಿ ಪ್ರಶಸ್ತಿ ಸಮಾರಂಭವನ್ನು ಸಂಪೂರ್ಣ ಕೇಸರೀಕರಣಗೊಳಿಸಿದ್ದ ಯೋಗಿ ಸರಕಾರ ಪ್ರಶಸ್ತಿ ಪತ್ರ, ಬುಕ್ಲೆಟ್, ಪ್ರಶಸ್ತಿ ವಿಜೇತ ಸಮಾರಂಭದ ಉಸ್ತುವಾರಿಗಳ ಉಡುಗೆತೊಡುಗೆಯನ್ನೂ ಕೇಸರಿಮಯಗೊಳಿಸಿತ್ತು. ಇದಲ್ಲದೆ ರಾಜ್ಯ ರಸ್ತೆಸಾರಿಗೆ ಸಂಸ್ಥೆಯ 50 ಕೇಸರಿ ಬಸ್‌ಗಳನ್ನು ಬಿಡುಗಡೆಗೊಳಿಸಿತ್ತು. ಈ ಬಸ್ಸುಗಳಿಗೆ ‘ಸಂಕಲ್ಪ ಸೇವಾ’ ಎಂದು ಹೆಸರಿಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್ಸುಗಳ ಓಡಾಟ ನಡೆಸುತ್ತಿದೆ.

ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲು ಸಂಚಾರ ಆರಂಭ:

ವಾರಣಾಸಿ ಮತ್ತು ನವದೆಹಲಿ ನಡುವಿನ ಎರಡನೇ ವಂದೇ ಭಾರತ್ ರೈಲನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದು, ಇದು ಕೇಸರಿ ಬಣ್ಣದಲ್ಲಿ ಇರಲಿದೆ ಮತ್ತು ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಮತ್ತು ರೈಲ್ವೇ ಸಚಿವಾಲಯವು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಕೇಸರಿ ಬಣ್ಣದ ರೈಲಿನ ಫೋಟೋವನ್ನು ಹಂಚಿಕೊಂಡಿದೆ.

ನೂತನ ರೈಲು ವೈ-ಫೈ ಸೌಲಭ್ಯ, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಪ್ಲಶ್ ಇಂಟೀರಿಯರ್‌ಗಳು, ಟಚ್ ಮಾಡದೆ ತೆರೆಯುವಂತಹ ಬಯೋ-ವ್ಯಾಕ್ಯೂಮ್ ಟಾಯ್ಲೆಟ್‌ಗಳು, ಎಲ್ಇಡಿ ಲೈಟಿಂಗ್, ಪ್ರತಿ ಸೀಟಿನ ಕೆಳಗೆ ಚಾರ್ಜಿಂಗ್ ಪಾಯಿಂಟ್‌ಗಳು, ಉತ್ತಮ ಹವಾನಿಯಂತ್ರಣ ವ್ಯವಸ್ಥೆ ಕೂಡ ಹೊಂದಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ಇಂದು ಮಧ್ಯಾಹ್ನ  2:15ಕ್ಕೆ ರೈಲಿನ ಉದ್ಘಾಟನೆ ನಡೆಯಲಿದ್ದು, ವಾರಣಾಸಿಯಿಂದ ನವದೆಹಲಿಗೆ ಅದರ ಉದ್ಘಾಟನೆಯ ಅಂಗವಾಗಿ ರೈಲು ಸಂಚರಿಸಲಿದೆ. ಮಂಗಳವಾರ ಹೊರತುಪಡಿಸಿ ವಾರದಲ್ಲಿ 6 ದಿನಗಳು ರೈಲು ವಾರಣಾಸಿಯಿಂದ ನವದೆಹಲಿಗೆ ಬೆಳಿಗ್ಗೆ 6 ಗಂಟೆಗೆ ಸಂಚರಿಸಲಿದೆ. ರೈಲು ಮಧ್ಯಾಹ್ನ 2.5ಕ್ಕೆ ನವದೆಹಲಿ ತಲುಪುತ್ತದೆ ಮತ್ತು 55 ನಿಮಿಷಗಳ ನಂತರ 3 ಗಂಟೆಗೆ ವಾಪಾಸ್ಸು ವಾರಣಾಸಿಗೆ ಹೊರಡಲಿದೆ.

ರೈಲ್ವೇ ಇಲಾಖೆಯು ತನ್ನ ಮೊದಲ ಕೇಸರಿ-ಬೂದು ಬಣ್ಣದ ವಂದೇ ಭಾರತ್ ರೈಲನ್ನು ಸೆ.24ರಂದು ಕೇರಳದ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಪ್ರಾರಂಭಿಸಿತ್ತು. ಸೆ.24ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನ ಮಂತ್ರಿಗಳು ಉದ್ಘಾಟನೆ ಮಾಡಿದ ಒಂಬತ್ತು ವಂದೇ ಭಾರತ್ ರೈಲುಗಳಲ್ಲಿ ಇದೂ ಒಂದಾಗಿತ್ತು. ಈ ವೇಳೆ ರೈಲ್ವೇಗಳ ಕೇಸರೀಕರಣದ ಬಗ್ಗೆ ಚರ್ಚೆಯಾಗಿತ್ತು.

ಪತ್ರಕರ್ತ ಮೊಹಮ್ಮದ್ ಜುಬೇರ್, ಈ ವಂದೇ ಭಾರತ್‌ನಲ್ಲಿನ ಹಸಿರು ಬಣ್ಣವು ‘ಅಚ್ಛೇ ದಿನ್” ರೀತಿ ಕಾಣೆಯಾಗಿದೆ. ರೈಲಿನಲ್ಲಿ ತ್ರಿವರ್ಣ ಕಾಣೆಯಾಗಿದೆ ಎಂದು ಹೇಳಿದ್ದರು. ಸಾಮಾಜಿಕ ಜಾಲತಾಣಗಳ ಬಳಕೆದಾರರು ಕೇಸರಿ ಮತ್ತು ಬಿಳಿ ಬಣ್ಣ ಇದೆ ಆದರೆ ಹಸಿರು ಎಲ್ಲಿದೆ?  ಅದರ ನಡುವೆ ಧರ್ಮಚಕ್ರ ಕಾಣೆಯಾಗಿದೆ ಎಂದು ಹೇಳಿದ್ದರು.

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಇತ್ತೀಚೆಗೆ ಪತ್ರಕರ್ತರೊಂದಿಗೆ ಮಾತನಾಡುವಾಗ ಕೇಸರಿ ಬಣ್ಣದಲ್ಲೇ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದರ ಹಿಂದಿನ ರಾಜಕೀಯ ಲೆಕ್ಕಾಚಾರದ ಬಗ್ಗೆ ಉತ್ತರಿಸಲು ನಿರಾಕರಿಸಿದ್ದರು. ವಂದೇ ಭಾರತ್‌ ರೈಲಿಗೆ ಕೇಸರಿ ಬಣ್ಣದ ಆಯ್ಕೆಯು ವೈಜ್ಞಾನಿಕ ಚಿಂತನೆಯಿಂದ ಕೂಡಿದೆ. ಮಾನವನ ಕಣ್ಣಿಗೆ ಗೋಚರತೆಯ ದೃಷ್ಟಿಕೋನದಿಂದ ಈ ಬಣ್ಣಗಳನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದರು.

ವಂದೇ ಭಾರತ್ ರೈಲು:

2019ರಲ್ಲಿ ಭಾರತದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಾಲನೆಗೊಂಡಿತ್ತು. 16 ಬೋಗಿಗಳಿರುವ ಈ ಒಂದು ಎಕ್ಸ್‌ಪ್ರೆಸ್ ರೈಲಿನ ನಿರ್ಮಾಣಕ್ಕೆ ಅಂದಾಜು 115 ಕೋಟಿ ರೂ ತಗುಲುತ್ತದೆ ಎಂದು ಹೇಳಲಾಗಿದೆ. ಭಾರತದಲ್ಲಿ ಸದ್ಯ ಒಟ್ಟು 34 ವಂದೇ ಭಾರತ್ ರೈಲುಗಳು ದೈನಂದಿನ ಕಾರ್ಯಾಚರಣೆಯಲ್ಲಿ ತೊಡಗಿವೆ. ಬ್ರಾಡ್ ಗೇಜ್  ವಿದ್ಯುದೀಕೃತ ನೆಟ್‌ವರ್ಕ್ ಹೊಂದಿರುವ ರಾಜ್ಯಗಳಲ್ಲಿ ಈ ನೂತನ ಒಂದೇ ಭಾರತ್ ರೈಲು ಸಂಚಾರ ನಡೆಸಲಿವೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ನಿರ್ಮಿತ ಮತ್ತು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿವೆ.

ಕಳೆದ ಡಿ.8ರಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2047ರ ವೇಳೆಗೆ ದೇಶದಲ್ಲಿ 4,500 ವಂದೇ ಭಾರತ್ ರೈಲುಗಳು ಓಡಾಡಲಿದೆ ಎಂದು ಹೇಳಿದ್ದರು. ಇತ್ತೀಚೆಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ 12,000ಕ್ಕೂ ಹೆಚ್ಚು ಹೊಸ ರೈಲುಗಳ ತಯಾರಿ ಬಗ್ಗೆ ಮಾಹಿತಿ ನೀಡಿದ್ದರು.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...