Homeಮುಖಪುಟಕೇಸರೀಕರಣಗೊಂಡ ವಂದೇ ಭಾರತ್‌ ರೈಲು

ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

- Advertisement -
- Advertisement -

‘ಕೇಸರೀಕರಣ’ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ವ್ಯಾಪಕವಾಗಿ ಕೇಳಿ ಬಂದ ಆರೋಪ. ಶಿಕ್ಷಣ ಸಂಸ್ಥೆಗಳು, ಪಠ್ಯ ಪುಸ್ತಕಗಳು, ಸಾರಿಗೆ ಸಂಸ್ಥೆಗಳು ಸೇರಿ ವಿವಿಧ ಇಲಾಖೆಗಳಲ್ಲಿ ಇದಕ್ಕೆ ಪೂರಕವಾದ ಬೆಳವಣಿಗೆಗಳು ಕಂಡು ಬಂದಿದ್ದವು. ಇದೀಗ ರೈಲ್ವೇ ಇಲಾಖೆಯಲ್ಲೂ ಕೇಸರೀಕರಣ ಆರೋಪ ಕೇಳಿ ಬಂದಿದೆ. ದೇಶದ ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಲಿದ್ದಾರೆ.

ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿ ಇದಕ್ಕೆ ಮೊದಲು ರೈಲ್ವೇ ನಿಲ್ಧಾಣ, ಬಸ್‌ ನಿಲ್ಧಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿತ್ತು. ನಗರಗಳ ಹೆಸರನ್ನು ಬದಲಿಸಲಾಗಿತ್ತು. ಉತ್ತರಪ್ರದೇಶದಲ್ಲಿ ಯೋಗಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾ ಮಕ್ಕಳ ಬ್ಯಾಗನ್ನು ಕೇಸರೀಕರಣಗೊಳಿಸಿದ್ದರು. ಈ ಮೊದಲು ಉತ್ತರಪ್ರದೇಶದಲ್ಲಿ
ಲಕ್ಷಣ್ ಮತ್ತು ರಾಣಿಲಕ್ಷ್ಮೀಬಾಯಿ ಪ್ರಶಸ್ತಿ ಸಮಾರಂಭವನ್ನು ಸಂಪೂರ್ಣ ಕೇಸರೀಕರಣಗೊಳಿಸಿದ್ದ ಯೋಗಿ ಸರಕಾರ ಪ್ರಶಸ್ತಿ ಪತ್ರ, ಬುಕ್ಲೆಟ್, ಪ್ರಶಸ್ತಿ ವಿಜೇತ ಸಮಾರಂಭದ ಉಸ್ತುವಾರಿಗಳ ಉಡುಗೆತೊಡುಗೆಯನ್ನೂ ಕೇಸರಿಮಯಗೊಳಿಸಿತ್ತು. ಇದಲ್ಲದೆ ರಾಜ್ಯ ರಸ್ತೆಸಾರಿಗೆ ಸಂಸ್ಥೆಯ 50 ಕೇಸರಿ ಬಸ್‌ಗಳನ್ನು ಬಿಡುಗಡೆಗೊಳಿಸಿತ್ತು. ಈ ಬಸ್ಸುಗಳಿಗೆ ‘ಸಂಕಲ್ಪ ಸೇವಾ’ ಎಂದು ಹೆಸರಿಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್ಸುಗಳ ಓಡಾಟ ನಡೆಸುತ್ತಿದೆ.

ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲು ಸಂಚಾರ ಆರಂಭ:

ವಾರಣಾಸಿ ಮತ್ತು ನವದೆಹಲಿ ನಡುವಿನ ಎರಡನೇ ವಂದೇ ಭಾರತ್ ರೈಲನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದು, ಇದು ಕೇಸರಿ ಬಣ್ಣದಲ್ಲಿ ಇರಲಿದೆ ಮತ್ತು ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಮತ್ತು ರೈಲ್ವೇ ಸಚಿವಾಲಯವು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಕೇಸರಿ ಬಣ್ಣದ ರೈಲಿನ ಫೋಟೋವನ್ನು ಹಂಚಿಕೊಂಡಿದೆ.

ನೂತನ ರೈಲು ವೈ-ಫೈ ಸೌಲಭ್ಯ, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಪ್ಲಶ್ ಇಂಟೀರಿಯರ್‌ಗಳು, ಟಚ್ ಮಾಡದೆ ತೆರೆಯುವಂತಹ ಬಯೋ-ವ್ಯಾಕ್ಯೂಮ್ ಟಾಯ್ಲೆಟ್‌ಗಳು, ಎಲ್ಇಡಿ ಲೈಟಿಂಗ್, ಪ್ರತಿ ಸೀಟಿನ ಕೆಳಗೆ ಚಾರ್ಜಿಂಗ್ ಪಾಯಿಂಟ್‌ಗಳು, ಉತ್ತಮ ಹವಾನಿಯಂತ್ರಣ ವ್ಯವಸ್ಥೆ ಕೂಡ ಹೊಂದಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ಇಂದು ಮಧ್ಯಾಹ್ನ  2:15ಕ್ಕೆ ರೈಲಿನ ಉದ್ಘಾಟನೆ ನಡೆಯಲಿದ್ದು, ವಾರಣಾಸಿಯಿಂದ ನವದೆಹಲಿಗೆ ಅದರ ಉದ್ಘಾಟನೆಯ ಅಂಗವಾಗಿ ರೈಲು ಸಂಚರಿಸಲಿದೆ. ಮಂಗಳವಾರ ಹೊರತುಪಡಿಸಿ ವಾರದಲ್ಲಿ 6 ದಿನಗಳು ರೈಲು ವಾರಣಾಸಿಯಿಂದ ನವದೆಹಲಿಗೆ ಬೆಳಿಗ್ಗೆ 6 ಗಂಟೆಗೆ ಸಂಚರಿಸಲಿದೆ. ರೈಲು ಮಧ್ಯಾಹ್ನ 2.5ಕ್ಕೆ ನವದೆಹಲಿ ತಲುಪುತ್ತದೆ ಮತ್ತು 55 ನಿಮಿಷಗಳ ನಂತರ 3 ಗಂಟೆಗೆ ವಾಪಾಸ್ಸು ವಾರಣಾಸಿಗೆ ಹೊರಡಲಿದೆ.

ರೈಲ್ವೇ ಇಲಾಖೆಯು ತನ್ನ ಮೊದಲ ಕೇಸರಿ-ಬೂದು ಬಣ್ಣದ ವಂದೇ ಭಾರತ್ ರೈಲನ್ನು ಸೆ.24ರಂದು ಕೇರಳದ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಪ್ರಾರಂಭಿಸಿತ್ತು. ಸೆ.24ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನ ಮಂತ್ರಿಗಳು ಉದ್ಘಾಟನೆ ಮಾಡಿದ ಒಂಬತ್ತು ವಂದೇ ಭಾರತ್ ರೈಲುಗಳಲ್ಲಿ ಇದೂ ಒಂದಾಗಿತ್ತು. ಈ ವೇಳೆ ರೈಲ್ವೇಗಳ ಕೇಸರೀಕರಣದ ಬಗ್ಗೆ ಚರ್ಚೆಯಾಗಿತ್ತು.

ಪತ್ರಕರ್ತ ಮೊಹಮ್ಮದ್ ಜುಬೇರ್, ಈ ವಂದೇ ಭಾರತ್‌ನಲ್ಲಿನ ಹಸಿರು ಬಣ್ಣವು ‘ಅಚ್ಛೇ ದಿನ್” ರೀತಿ ಕಾಣೆಯಾಗಿದೆ. ರೈಲಿನಲ್ಲಿ ತ್ರಿವರ್ಣ ಕಾಣೆಯಾಗಿದೆ ಎಂದು ಹೇಳಿದ್ದರು. ಸಾಮಾಜಿಕ ಜಾಲತಾಣಗಳ ಬಳಕೆದಾರರು ಕೇಸರಿ ಮತ್ತು ಬಿಳಿ ಬಣ್ಣ ಇದೆ ಆದರೆ ಹಸಿರು ಎಲ್ಲಿದೆ?  ಅದರ ನಡುವೆ ಧರ್ಮಚಕ್ರ ಕಾಣೆಯಾಗಿದೆ ಎಂದು ಹೇಳಿದ್ದರು.

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಇತ್ತೀಚೆಗೆ ಪತ್ರಕರ್ತರೊಂದಿಗೆ ಮಾತನಾಡುವಾಗ ಕೇಸರಿ ಬಣ್ಣದಲ್ಲೇ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದರ ಹಿಂದಿನ ರಾಜಕೀಯ ಲೆಕ್ಕಾಚಾರದ ಬಗ್ಗೆ ಉತ್ತರಿಸಲು ನಿರಾಕರಿಸಿದ್ದರು. ವಂದೇ ಭಾರತ್‌ ರೈಲಿಗೆ ಕೇಸರಿ ಬಣ್ಣದ ಆಯ್ಕೆಯು ವೈಜ್ಞಾನಿಕ ಚಿಂತನೆಯಿಂದ ಕೂಡಿದೆ. ಮಾನವನ ಕಣ್ಣಿಗೆ ಗೋಚರತೆಯ ದೃಷ್ಟಿಕೋನದಿಂದ ಈ ಬಣ್ಣಗಳನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದರು.

ವಂದೇ ಭಾರತ್ ರೈಲು:

2019ರಲ್ಲಿ ಭಾರತದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಾಲನೆಗೊಂಡಿತ್ತು. 16 ಬೋಗಿಗಳಿರುವ ಈ ಒಂದು ಎಕ್ಸ್‌ಪ್ರೆಸ್ ರೈಲಿನ ನಿರ್ಮಾಣಕ್ಕೆ ಅಂದಾಜು 115 ಕೋಟಿ ರೂ ತಗುಲುತ್ತದೆ ಎಂದು ಹೇಳಲಾಗಿದೆ. ಭಾರತದಲ್ಲಿ ಸದ್ಯ ಒಟ್ಟು 34 ವಂದೇ ಭಾರತ್ ರೈಲುಗಳು ದೈನಂದಿನ ಕಾರ್ಯಾಚರಣೆಯಲ್ಲಿ ತೊಡಗಿವೆ. ಬ್ರಾಡ್ ಗೇಜ್  ವಿದ್ಯುದೀಕೃತ ನೆಟ್‌ವರ್ಕ್ ಹೊಂದಿರುವ ರಾಜ್ಯಗಳಲ್ಲಿ ಈ ನೂತನ ಒಂದೇ ಭಾರತ್ ರೈಲು ಸಂಚಾರ ನಡೆಸಲಿವೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ನಿರ್ಮಿತ ಮತ್ತು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿವೆ.

ಕಳೆದ ಡಿ.8ರಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2047ರ ವೇಳೆಗೆ ದೇಶದಲ್ಲಿ 4,500 ವಂದೇ ಭಾರತ್ ರೈಲುಗಳು ಓಡಾಡಲಿದೆ ಎಂದು ಹೇಳಿದ್ದರು. ಇತ್ತೀಚೆಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ 12,000ಕ್ಕೂ ಹೆಚ್ಚು ಹೊಸ ರೈಲುಗಳ ತಯಾರಿ ಬಗ್ಗೆ ಮಾಹಿತಿ ನೀಡಿದ್ದರು.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...