Homeಮುಖಪುಟಕೇಸರೀಕರಣಗೊಂಡ ವಂದೇ ಭಾರತ್‌ ರೈಲು

ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

- Advertisement -
- Advertisement -

‘ಕೇಸರೀಕರಣ’ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ವ್ಯಾಪಕವಾಗಿ ಕೇಳಿ ಬಂದ ಆರೋಪ. ಶಿಕ್ಷಣ ಸಂಸ್ಥೆಗಳು, ಪಠ್ಯ ಪುಸ್ತಕಗಳು, ಸಾರಿಗೆ ಸಂಸ್ಥೆಗಳು ಸೇರಿ ವಿವಿಧ ಇಲಾಖೆಗಳಲ್ಲಿ ಇದಕ್ಕೆ ಪೂರಕವಾದ ಬೆಳವಣಿಗೆಗಳು ಕಂಡು ಬಂದಿದ್ದವು. ಇದೀಗ ರೈಲ್ವೇ ಇಲಾಖೆಯಲ್ಲೂ ಕೇಸರೀಕರಣ ಆರೋಪ ಕೇಳಿ ಬಂದಿದೆ. ದೇಶದ ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಲಿದ್ದಾರೆ.

ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿ ಇದಕ್ಕೆ ಮೊದಲು ರೈಲ್ವೇ ನಿಲ್ಧಾಣ, ಬಸ್‌ ನಿಲ್ಧಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿತ್ತು. ನಗರಗಳ ಹೆಸರನ್ನು ಬದಲಿಸಲಾಗಿತ್ತು. ಉತ್ತರಪ್ರದೇಶದಲ್ಲಿ ಯೋಗಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾ ಮಕ್ಕಳ ಬ್ಯಾಗನ್ನು ಕೇಸರೀಕರಣಗೊಳಿಸಿದ್ದರು. ಈ ಮೊದಲು ಉತ್ತರಪ್ರದೇಶದಲ್ಲಿ
ಲಕ್ಷಣ್ ಮತ್ತು ರಾಣಿಲಕ್ಷ್ಮೀಬಾಯಿ ಪ್ರಶಸ್ತಿ ಸಮಾರಂಭವನ್ನು ಸಂಪೂರ್ಣ ಕೇಸರೀಕರಣಗೊಳಿಸಿದ್ದ ಯೋಗಿ ಸರಕಾರ ಪ್ರಶಸ್ತಿ ಪತ್ರ, ಬುಕ್ಲೆಟ್, ಪ್ರಶಸ್ತಿ ವಿಜೇತ ಸಮಾರಂಭದ ಉಸ್ತುವಾರಿಗಳ ಉಡುಗೆತೊಡುಗೆಯನ್ನೂ ಕೇಸರಿಮಯಗೊಳಿಸಿತ್ತು. ಇದಲ್ಲದೆ ರಾಜ್ಯ ರಸ್ತೆಸಾರಿಗೆ ಸಂಸ್ಥೆಯ 50 ಕೇಸರಿ ಬಸ್‌ಗಳನ್ನು ಬಿಡುಗಡೆಗೊಳಿಸಿತ್ತು. ಈ ಬಸ್ಸುಗಳಿಗೆ ‘ಸಂಕಲ್ಪ ಸೇವಾ’ ಎಂದು ಹೆಸರಿಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್ಸುಗಳ ಓಡಾಟ ನಡೆಸುತ್ತಿದೆ.

ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲು ಸಂಚಾರ ಆರಂಭ:

ವಾರಣಾಸಿ ಮತ್ತು ನವದೆಹಲಿ ನಡುವಿನ ಎರಡನೇ ವಂದೇ ಭಾರತ್ ರೈಲನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದು, ಇದು ಕೇಸರಿ ಬಣ್ಣದಲ್ಲಿ ಇರಲಿದೆ ಮತ್ತು ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಮತ್ತು ರೈಲ್ವೇ ಸಚಿವಾಲಯವು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಕೇಸರಿ ಬಣ್ಣದ ರೈಲಿನ ಫೋಟೋವನ್ನು ಹಂಚಿಕೊಂಡಿದೆ.

ನೂತನ ರೈಲು ವೈ-ಫೈ ಸೌಲಭ್ಯ, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಪ್ಲಶ್ ಇಂಟೀರಿಯರ್‌ಗಳು, ಟಚ್ ಮಾಡದೆ ತೆರೆಯುವಂತಹ ಬಯೋ-ವ್ಯಾಕ್ಯೂಮ್ ಟಾಯ್ಲೆಟ್‌ಗಳು, ಎಲ್ಇಡಿ ಲೈಟಿಂಗ್, ಪ್ರತಿ ಸೀಟಿನ ಕೆಳಗೆ ಚಾರ್ಜಿಂಗ್ ಪಾಯಿಂಟ್‌ಗಳು, ಉತ್ತಮ ಹವಾನಿಯಂತ್ರಣ ವ್ಯವಸ್ಥೆ ಕೂಡ ಹೊಂದಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ಇಂದು ಮಧ್ಯಾಹ್ನ  2:15ಕ್ಕೆ ರೈಲಿನ ಉದ್ಘಾಟನೆ ನಡೆಯಲಿದ್ದು, ವಾರಣಾಸಿಯಿಂದ ನವದೆಹಲಿಗೆ ಅದರ ಉದ್ಘಾಟನೆಯ ಅಂಗವಾಗಿ ರೈಲು ಸಂಚರಿಸಲಿದೆ. ಮಂಗಳವಾರ ಹೊರತುಪಡಿಸಿ ವಾರದಲ್ಲಿ 6 ದಿನಗಳು ರೈಲು ವಾರಣಾಸಿಯಿಂದ ನವದೆಹಲಿಗೆ ಬೆಳಿಗ್ಗೆ 6 ಗಂಟೆಗೆ ಸಂಚರಿಸಲಿದೆ. ರೈಲು ಮಧ್ಯಾಹ್ನ 2.5ಕ್ಕೆ ನವದೆಹಲಿ ತಲುಪುತ್ತದೆ ಮತ್ತು 55 ನಿಮಿಷಗಳ ನಂತರ 3 ಗಂಟೆಗೆ ವಾಪಾಸ್ಸು ವಾರಣಾಸಿಗೆ ಹೊರಡಲಿದೆ.

ರೈಲ್ವೇ ಇಲಾಖೆಯು ತನ್ನ ಮೊದಲ ಕೇಸರಿ-ಬೂದು ಬಣ್ಣದ ವಂದೇ ಭಾರತ್ ರೈಲನ್ನು ಸೆ.24ರಂದು ಕೇರಳದ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಪ್ರಾರಂಭಿಸಿತ್ತು. ಸೆ.24ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನ ಮಂತ್ರಿಗಳು ಉದ್ಘಾಟನೆ ಮಾಡಿದ ಒಂಬತ್ತು ವಂದೇ ಭಾರತ್ ರೈಲುಗಳಲ್ಲಿ ಇದೂ ಒಂದಾಗಿತ್ತು. ಈ ವೇಳೆ ರೈಲ್ವೇಗಳ ಕೇಸರೀಕರಣದ ಬಗ್ಗೆ ಚರ್ಚೆಯಾಗಿತ್ತು.

ಪತ್ರಕರ್ತ ಮೊಹಮ್ಮದ್ ಜುಬೇರ್, ಈ ವಂದೇ ಭಾರತ್‌ನಲ್ಲಿನ ಹಸಿರು ಬಣ್ಣವು ‘ಅಚ್ಛೇ ದಿನ್” ರೀತಿ ಕಾಣೆಯಾಗಿದೆ. ರೈಲಿನಲ್ಲಿ ತ್ರಿವರ್ಣ ಕಾಣೆಯಾಗಿದೆ ಎಂದು ಹೇಳಿದ್ದರು. ಸಾಮಾಜಿಕ ಜಾಲತಾಣಗಳ ಬಳಕೆದಾರರು ಕೇಸರಿ ಮತ್ತು ಬಿಳಿ ಬಣ್ಣ ಇದೆ ಆದರೆ ಹಸಿರು ಎಲ್ಲಿದೆ?  ಅದರ ನಡುವೆ ಧರ್ಮಚಕ್ರ ಕಾಣೆಯಾಗಿದೆ ಎಂದು ಹೇಳಿದ್ದರು.

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಇತ್ತೀಚೆಗೆ ಪತ್ರಕರ್ತರೊಂದಿಗೆ ಮಾತನಾಡುವಾಗ ಕೇಸರಿ ಬಣ್ಣದಲ್ಲೇ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದರ ಹಿಂದಿನ ರಾಜಕೀಯ ಲೆಕ್ಕಾಚಾರದ ಬಗ್ಗೆ ಉತ್ತರಿಸಲು ನಿರಾಕರಿಸಿದ್ದರು. ವಂದೇ ಭಾರತ್‌ ರೈಲಿಗೆ ಕೇಸರಿ ಬಣ್ಣದ ಆಯ್ಕೆಯು ವೈಜ್ಞಾನಿಕ ಚಿಂತನೆಯಿಂದ ಕೂಡಿದೆ. ಮಾನವನ ಕಣ್ಣಿಗೆ ಗೋಚರತೆಯ ದೃಷ್ಟಿಕೋನದಿಂದ ಈ ಬಣ್ಣಗಳನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದರು.

ವಂದೇ ಭಾರತ್ ರೈಲು:

2019ರಲ್ಲಿ ಭಾರತದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಾಲನೆಗೊಂಡಿತ್ತು. 16 ಬೋಗಿಗಳಿರುವ ಈ ಒಂದು ಎಕ್ಸ್‌ಪ್ರೆಸ್ ರೈಲಿನ ನಿರ್ಮಾಣಕ್ಕೆ ಅಂದಾಜು 115 ಕೋಟಿ ರೂ ತಗುಲುತ್ತದೆ ಎಂದು ಹೇಳಲಾಗಿದೆ. ಭಾರತದಲ್ಲಿ ಸದ್ಯ ಒಟ್ಟು 34 ವಂದೇ ಭಾರತ್ ರೈಲುಗಳು ದೈನಂದಿನ ಕಾರ್ಯಾಚರಣೆಯಲ್ಲಿ ತೊಡಗಿವೆ. ಬ್ರಾಡ್ ಗೇಜ್  ವಿದ್ಯುದೀಕೃತ ನೆಟ್‌ವರ್ಕ್ ಹೊಂದಿರುವ ರಾಜ್ಯಗಳಲ್ಲಿ ಈ ನೂತನ ಒಂದೇ ಭಾರತ್ ರೈಲು ಸಂಚಾರ ನಡೆಸಲಿವೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ನಿರ್ಮಿತ ಮತ್ತು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿವೆ.

ಕಳೆದ ಡಿ.8ರಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2047ರ ವೇಳೆಗೆ ದೇಶದಲ್ಲಿ 4,500 ವಂದೇ ಭಾರತ್ ರೈಲುಗಳು ಓಡಾಡಲಿದೆ ಎಂದು ಹೇಳಿದ್ದರು. ಇತ್ತೀಚೆಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ 12,000ಕ್ಕೂ ಹೆಚ್ಚು ಹೊಸ ರೈಲುಗಳ ತಯಾರಿ ಬಗ್ಗೆ ಮಾಹಿತಿ ನೀಡಿದ್ದರು.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...